ರೈತರಿಗೆ ಕುಮ್ಕಿ, ಬಾಣೆ ಜಮೀನು ಹಕ್ಕು ವಿತರಣೆ: ಸಂಪುಟ ಉಪಸಮಿತಿ ರಚನೆ : ಸಚಿವ ಸುನಿಲ್‌


Team Udayavani, May 18, 2022, 12:47 AM IST

ರೈತರಿಗೆ ಕುಮ್ಕಿ, ಬಾಣೆ ಜಮೀನು ಹಕ್ಕು ವಿತರಣೆ: ಸಂಪುಟ ಉಪಸಮಿತಿ ರಚನೆ : ಸಚಿವ ಸುನಿಲ್‌

ಪುತ್ತೂರು: ದ.ಕ., ಉಡುಪಿ, ಕೊಡಗು ಸಹಿತ ಐದಾರು ಜಿಲ್ಲೆಗಳಲ್ಲಿನ ರೈತರಿಗೆ ಕುಮ್ಕಿ, ಬಾಣೆ ಜಮೀನಿನ ಹಕ್ಕು ನೀಡುವ ಸಲುವಾಗಿ ಕಂದಾಯ ಸಚಿವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌ ಹೇಳಿದರು.

ಪುರಭವನದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ಡೀಮ್ಡ್ ಫಾರೆಸ್ಟ್‌ ವಿರಹಿತಗೊಳಿಸಿ ಕಂದಾಯ ಇಲಾಖೆಗೆ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಅಕ್ರಮ ಸಕ್ರಮ 57ರಡಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸಲು ಸಂಪುಟ ಸಭೆ ನಿರ್ಧರಿಸಿದೆ ಎಂದು ಸಚಿವರು ಹೇಳಿದರು.

ಗ್ರಾ.ಪಂ.ಗೆ ಏಕ ವಿನ್ಯಾಸ
ಅನುಮೋದನೆ ಅಧಿಕಾರ
ಗ್ರಾ.ಪಂ.ಗಿದ್ದ ಏಕವಿನ್ಯಾಸ ಅನುಮೋದನ (9/11) ಅಧಿಕಾರವನ್ನು ಯೋಜನಾ ಪ್ರಾಧಿಕಾರಕ್ಕೆ ನೀಡಿರುವುದನ್ನು ರದ್ದುಪಡಿಸಿ ಈ ಹಿಂದಿನಂತೆ ಗ್ರಾ.ಪಂ.ಗೆ ಅಧಿಕಾರ ನೀಡುವಲ್ಲಿ ಸಂಪುಟ ಸಭೆ ತೀರ್ಮಾನಿಸಿದ್ದು ಈ ಮೂಲಕ ಗ್ರಾಮಾಂತರ ಜನರ ಬೇಡಿಕೆಗೆ ಸ್ಪಂದನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಶಾಸಕ ಸಂಜೀವ ಮಠಂದೂರು ಮಾತನಾಡಿ, ಸರಕಾರವು ಹಲವು ಯೋಜನೆಗಳ ಮೂಲಕ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ಕಾರ್ಯ ಮಾಡುತ್ತಿದ್ದು ಸಚಿವ ಸುನಿಲ್‌ ಕುಮಾರ್‌ ಉಸ್ತುವಾರಿ, ಇಂಧನ ಸಚಿವರಾಗಿ ಸೌಲಭ್ಯಗಳನ್ನು ತಳಮಟ್ಟದ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮುತುವರ್ಜಿ ವಹಿಸಿದ್ದಾರೆ. ತಾಲೂಕಿಗೆ ದಿನದ 24 ತಾಸು ವಿದ್ಯುತ್‌ ನೀಡುವ ಸಲುವಾಗಿ ನೆಕ್ಕಿಲಾಡಿ, ಕೈಕಾರದಲ್ಲಿ 110 ಕೆ.ವಿ.ಸಬ್‌ ಸ್ಟೇಷನ್‌ ನಿರ್ಮಾಣಕ್ಕೆ ಸಚಿವರು ಸಕರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದರು.

ಕಡತ ವಿಲೇಗೆ ಸೂಚನೆ
ದ. ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಪ್ಲಾಟಿಂಗ್‌ ಕಡತಗಳು ಬಾಕಿ ಇದ್ದು 11,500 ಅರ್ಜಿ ವಿಲೇ ಆಗಬೇಕಿದೆ. ಈ ಬಗ್ಗೆ ಸಹಾಯಕ ಆಯುಕ್ತರಿಗೆ, ತಹಶೀಲ್ದಾರ್‌, ಕಂದಾಯ ನಿರೀಕ್ಷಕ, ಗ್ರಾಮಕರಣಿಕರಿಗೆ ನಿರ್ದೇಶನ ನೀಡಲಾಗಿದ್ದು ಜೂ. 20ರೊಳಗೆ ವಿಲೇ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದರು.

ಈ ಸಂದರ್ಭ 53, 57 ಅಕ್ರಮ ಸಕ್ರಮ ಹಕ್ಕುಪತ್ರ, ಪ್ರಾಪರ್ಟಿ ಕಾರ್ಡ್‌ ಸೇರಿದಂತೆ ವಿವಿಧ ಸವಲತ್ತುಗಳನ್ನು ಜನರಿಗೆ ವಿತರಿಸಲಾಯಿತು.

ಜಿ.ಪಂ. ಸಿಇಒ ಡಾ| ಕುಮಾರ್‌, ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಸೋನಾವಣೆ, ನಗರಸಭೆ ಅಧ್ಯಕ್ಷ ಜೀವಂಧರ್‌ ಜೈನ್‌, ಪುಡಾ ಅಧ್ಯಕ್ಷ ಭಾಮೀ ಅಶೋಕ್‌ ಶೆಣೈ, ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ಡಿವೈಎಸ್ಪಿ ಡಾ| ಗಾನ ಪಿ ಕುಮಾರ್‌, ತಹಶೀಲ್ದಾರ್‌ ರಮೇಶ್‌ ಬಾಬು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.