ಪುತ್ತೂರು: ಮತಗಟ್ಟೆಯಲ್ಲಿ ಅಭ್ಯರ್ಥಿಗಳ ಚಿಹ್ನೆಯಿರುವ ಚೀಟಿ ಹಂಚಿಕೆ, ಕ್ರಮಕ್ಕೆ ಸೂಚನೆ
Team Udayavani, Dec 27, 2020, 11:20 AM IST
ಪುತ್ತೂರು: ಮತಗಟ್ಟೆಯಲ್ಲಿ ಅಭ್ಯರ್ಥಿಗಳ ಚಿಹ್ನೆಯಿರುವ ಚೀಟಿಗಳನ್ನು ಮತದಾರರಿಗೆ ಹಂಚುತ್ತಿದ್ದ ಪ್ರಕರಣವೊಂದು ಪುತ್ತೂರಿನ ಹಂಟ್ಯಾರು ಮತಗಟ್ಟೆಯಲ್ಲಿ ಬೆಳಕಿಗೆ ಬಂದಿದೆ.
ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ಮತಗಟ್ಟೆ ಭೇಟಿ ಮಾಡಿ ಪರಿಶೀಲನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ಆತನಲ್ಲಿ ವಿಚಾರಿಸಿದಾಗ ಆತ ಚೀಟಿ ಕೊಟ್ಟ ಸ್ಥಳವನ್ನು ತೋರಿಸಿದರು.
ಇದನ್ನೂ ಓದಿ:ಗ್ರಾ.ಪಂ.ಚುನಾವಣೆ: ಮತದಾನ ಮಾಡಲು ಬಂದ ಜಿ.ಪಂ. ಸದಸ್ಯನ ಮೇಲೆ ಹಲ್ಲೆ!
ತಕ್ಷಣ ಅಲ್ಲಿಗೆ ಧಾವಿಸಿದ ಡಾ|ಯತೀಶ್ ಉಳ್ಳಾಲ್ ಅವರು ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದಲ್ಲದೆ ಟೇಬಲ್ ಕೆಳಗೆ ಇದ್ದ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಒಂದು ಕಟ್ಟನ್ನು ಪತ್ತೆ ಮಾಡಿದ್ದಾರೆ. ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮಿಷನರ್ ಪತ್ತೆ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ