ಸಾಕ್ಷರತಾ ಆಂದೋಲನದಿಂದ ಅಕ್ಷರ ಜ್ಞಾನ


Team Udayavani, Dec 20, 2018, 3:05 PM IST

20-december-14.gif

ಪುತ್ತೂರು: ರಾಜ್ಯದಲ್ಲಿ ಶಿಕ್ಷಣ ಪಡೆಯದ ಸಾವಿರಾರು ಮಂದಿಗೆ ಸಾಕ್ಷರತಾ ಆಂದೋಲನದ ಮೂಲಕ ಅಕ್ಷರ ಜ್ಞಾನ ಕಲಿಸಲಾಗಿದೆ. ಈ ನಿಟ್ಟಿನಲ್ಲಿ ಕೈಜೋಡಿಸಿದವರೆಲ್ಲರೂ ಅಭಿನಂದನಾರ್ಹರು ಎಂದು ಜಿ.ಪಂ. ಸಿಇಒ ಡಾ| ಸೆಲ್ವಮಣಿ ಹೇಳಿದರು.

ಮಾದರಿ ಗ್ರಾಮಾಭಿವೃದ್ಧಿ ಆಂದೋಲನ, ಬೀರಿಗ ಮಾದರಿ ಗ್ರಾಮ ವಿಕಾಸ ಕೇಂದ್ರ, ಬನ್ನೂರು ಗ್ರಾ.ಪಂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜನ ಶಿಕ್ಷಣ ಟ್ರಸ್ಟ್‌, ಸ್ವಸಹಾಯ ಸಂಘಗಳ ಒಕ್ಕೂಟ, ಮಹಾವಿಷ್ಣು ಯುವಕ ಮಂಡಲ, ಹಿರಿಯ ವಿದ್ಯಾರ್ಥಿಗಳ ಸಂಘ, ಬಾಲವಿಕಾಸ ಸಮಿತಿ ಹಾಗೂ ಬೀರಿಗ ಅಂಗನವಾಡಿ ಕೇಂದ್ರದ ಸಹಯೋಗದಲ್ಲಿ ನವಸಾಕ್ಷರರ ಸಂಘಟನೆಯ 27ನೇ ವರ್ಷಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಅಕ್ಷರೋತ್ಸವ ಹಾಗೂ ಬಾಲಮೇಳ-2018 ಕಾರ್ಯಕ್ರಮದಲ್ಲಿ ಮಾತನಾಡಿದರು. 

ತಪ್ಪು ಕಲ್ಪನೆ
ಅಂಗನವಾಡಿಗೆ ಮಕ್ಕಳು ಬರುವುದಿಲ್ಲ ಎನ್ನುವ ತಪ್ಪು ಕಲ್ಪನೆ ಜನರಲ್ಲಿದೆ. ಬೀರಿಗದಂತಹ ಕುಗ್ರಾಮದಲ್ಲಿನ ಅಂಗನವಾಡಿಗಳಲ್ಲಿ ಸುಮಾರು 27 ಮಂದಿ ಪುಟಾಣಿಗಳನ್ನು ಹೆತ್ತವರ ಮನವೊಲಿಸಿ ಕರೆತಂದು ಅಕ್ಷರ ಪ್ರೀತಿಯನ್ನು ಬಿತ್ತಿದ ಅಂಗನವಾಡಿ ಕಾರ್ಯಕರ್ತೆ ಅರುಣಾ ಅವರ ಕಾರ್ಯ ಶ್ಲಾಘನೀಯ. ಒಟ್ಟಾರೆಯಾಗಿ ಸಮುದಾಯ ಚಳವಳಿಯನ್ನೇ ಅವರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ವಾವಲಂಬಿ ಬದುಕು
ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಮಾತನಾಡಿ, ಮಹಿಳೆಯರಲ್ಲಿ ಸ್ವಾವಲಂಬಿ ಬದುಕು ತುಂಬುವ ಕೆಲಸ ಬೀರಿಗದಲ್ಲಿ ನಡೆದಿದೆ. ಪ್ರತಿಯೊಂದು ಗ್ರಾಮಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣದ ಆಸ್ತಿಯನ್ನು ನೀಡಬೇಕು. ಒಳ್ಳೆಯ ವ್ಯಕ್ತಿತ್ವ ರೂಪುಗೊಳ್ಳುವ ನಿಟ್ಟಿನಲ್ಲಿ ಪೋಷಕರ ಪ್ರಯತ್ನ ಸಾಗಬೇಕು ಎಂದರು.

ಜಿ.ಪಂ. ಸದಸ್ಯೆ ಶಯನಾ ಜಯಾನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಒಕ್ಕೂಟದ ಉಪನಿರ್ದೇಶಕ ಸುಂದರ ಪೂಜಾರಿ, ಸಿಡಿಪಿಒ ಶಾಂತಿ ಹೆಗಡೆ, ನಗರಸಭೆ ಮಾಜಿ ಸದಸ್ಯ ಮಹಮ್ಮದಾಲಿ, ಬನ್ನೂರು ಗ್ರಾ.ಪಂ. ಉಪಾಧ್ಯಕ್ಷ ಜಿನ್ನಪ್ಪ ಗೌಡ, ಸದಸ್ಯ ರತ್ನಾಕರ ಪ್ರಭು, ಅಣ್ಣಿ ಪೂಜಾರಿ, ಗಿರಿಜಾ, ಲತಾ, ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷೆ ಸಂಧ್ಯಾ, ಪಿಡಿಒ ಶಾಂತಾರಾಮ ನಾಯಕ್‌, ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಪುಷ್ಪಲತಾ, ಮಾಜಿ ಒಂಬುಡ್ಸ್‌ಮನ್‌ ಶೀನ ಶೆಟ್ಟಿ ಶುಭ ಹಾರೈಸಿದರು.

ಸುಗ್ರಾಮ ಸಂಘದ ಒಕ್ಕೂಟದ ಅಧ್ಯಕ್ಷೆ ಜಯಾ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಅರುಣಾ ಡಿ. ನಿರ್ವಹಿಸಿದರು. ಅಂಗನವಾಡಿ ಪುಟಾಣಿಗಳು ಹಾಗೂ ಮಹಿಳೆಯರಿಂದ ನೃತ್ಯ ಪ್ರದರ್ಶನಗೊಂಡಿತು.

ಸಮ್ಮಾನ
ಬೀರಿಗ ಅಂಗನವಾಡಿ ಪುಟಾಣಿಗಳು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಬೀರಿಗ ಅಂಗನವಾಡಿ ಕೇಂದ್ರದಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿದ ಮುತ್ತಮ್ಮ ಅವರನ್ನು ಚಿನ್ನದ ಉಂಗುರ ತೊಡಿಸಿ ಸಮ್ಮಾನಿಸಲಾಯಿತು.

ಸಾಕ್ಷರತೆಯ ದೀಪ ಹಚ್ಚಿದೆ
ಶಾಲಾ ಮೆಟ್ಟಿಲು ಹತ್ತದ ನಾನು ಸಾಕ್ಷರತಾ ಆಂದೋಲನದ ಮೂಲಕ ಅಕ್ಷರ ಕಲಿತೆ. ಪರಿಣಾಮ ಸುಮಾರು 200 ಮನೆಗಳಿಗೆ ಸಾಕ್ಷರತೆಯ ದೀಪವನ್ನು ಹಚ್ಚುವ ಕೆಲಸ ಮಾಡಿದ್ದೇನೆ. ಹೆಣ್ಣು ಮಕ್ಕಳು ಕಲಿತರೆ ಏನನ್ನೂ ಮಾಡಲು ಸಾಧ್ಯ. ಅದಕ್ಕೆ ಉದಾಹರಣೆ ನಾನು.
-ಯಶೋದಾ ಲಾೖಲ,
ನವಸಾಕ್ಷರೆ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.