ಮಾನವೀಯ ಮೌಲ್ಯವುಳ್ಳ ವೈದ್ಯ ಸೇವೆಯೇ ಆದರ್ಶ: ಡಾ| ಗಂಗಾಧರ್‌


Team Udayavani, Jun 13, 2019, 5:00 AM IST

t-15

ಬೆಳ್ತಂಗಡಿ: ವೈದ್ಯಕೀಯ ವೃತ್ತಿಯು ಇತರ ವೃತ್ತಿಗಳಂತೆ ಹಣ ಗಳಿಕೆಯ ರೂಪಾಂ ತರವಲ್ಲ. ವೈದ್ಯರಿಂದ ಸಮಾಜವು ನಿರೀಕ್ಷಿಸುವ ಮಾನವೀಯ ಮೌಲ್ಯವುಳ್ಳ ಸೇವೆಯಾಗಿ ನೀಡುವಲ್ಲಿ ಯುವ ವೈದ್ಯರು ಸಮಾಜಕ್ಕೆ ಆದರ್ಶ ರಾಗಿರಬೇಕು ಎಂದು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯ ನಿರ್ದೇಶಕ ಡಾ| ಬಿ.ಎನ್‌. ಗಂಗಾಧರ್‌ ಹೇಳಿದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜು ನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 25ನೇ ವರ್ಷದ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು. ಕೇವಲ ಅಲೋಪತಿ ಮಾತ್ರವಲ್ಲದೆ ಪ್ರಕೃತಿ ಚಿಕಿತ್ಸೆ, ಯೋಗ ಆರೋಗ್ಯ ಸಂರಕ್ಷಣೆಗೆ ಅನಿ ವಾರ್ಯವೆಂದು ಜನರಿಗೆ ಅರಿವಾಗಿದೆ. ಭಾರತ ದಲ್ಲಿ ಸೀಮಿತವಾಗಿದ್ದ ಯೋಗವು ಕಳೆದ ಐದು ವರ್ಷಗಳಲ್ಲಿ ಜಗತ್ತಿನಾದ್ಯಂತ ಪಸರಿಸಿದೆ. ವಿಶ್ವ ಯೋಗ ದಿನಾಚರಣೆ ಮೂಲಕ ಯೋಗಕ್ಕೆ ವಿಶೇಷ ಮನ್ನಣೆ ಲಭಿಸಿದೆ ಎಂದರು.

ಸಮಾರಂಭಕ್ಕೆ ಚಾಲನೆ ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್‌ಡಿಎಂ ಧಾರವಾಡ ವಿ.ವಿ.ಯ ಕುಲಪತಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ರೋಗಿಯ ಸಮಸ್ಯೆ ಆಲಿಸುವ ತಾಳ್ಮೆ ವೈದ್ಯರಲ್ಲಿರುವುದು ಮುಖ್ಯ. ರೋಗಿಗಳ ಸಮಸ್ಯೆಗೆ ಕಿವಿಯಾಗಿ ಅವರ ಮನಸ್ಥೈರ್ಯ ಹೆಚ್ಚಿಸುವ ಕಾರ್ಯ ಮಾಡಬೇಕು ಎಂದರು.

ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ನಿರತರಾಗಿದ್ದಾರೆ. ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಶ್ವದ 130 ದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೆಗ್ಗಡೆ ಹರ್ಷ ವ್ಯಕ್ತಪಡಿಸಿದರು.

ಕಳೆದ 25 ವರ್ಷಗಳಲ್ಲಿ ಈ ಸಂಸ್ಥೆಯಲ್ಲಿ ಶಿಕ್ಷಣ ಪಡೆದವರ ಮಾಹಿತಿ ಒಳಗೊಂಡ “ಆರ್ಷಪ್ರವರ’ ಪುಸ್ತಕವನ್ನು ಡಾ| ಹೆಗ್ಗಡೆ ಬಿಡುಗಡೆಗೊಳಿಸಿದರು. ಹೇಮಾವತಿ ವೀ. ಹೆಗ್ಗಡೆ, ಕಾರ್ಯ ದರ್ಶಿಗಳಾದ ಡಿ. ಹಷೇದ್ರ ಕುಮಾರ್‌, ಡಾ| ಬಿ. ಯಶೋವರ್ಮ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ| ಪ್ರಶಾಂತ್‌ ಶೆಟ್ಟಿ ಸ್ವಾಗತಿಸಿದರು. ಯೋಗ ವಿಭಾಗದ ಡೀನ್‌ ಶಿವಪ್ರಸಾದ್‌ ಶೆಟ್ಟಿ ವಂದಿಸಿದರು. ಅಂಕಿತ್‌ ಪಾಂಡೆ ಹಾಗೂ ಪ್ರಿಯದಾ ಪೌಲ್‌ ನಿರೂಪಿಸಿದರು.

ಚಿನ್ನದ ಪದಕ
ಒಟ್ಟು 28 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ, 96 ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಐವರು ಚಿನ್ನದ ಪದಕ ಪಡೆದರು. ಸ್ನಾತಕೋತ್ತರ ವಿಭಾಗದ ನ್ಯಾಚುರೋಪತಿಯಲ್ಲಿ ಡಾ| ಜೋಸ್ನಾ ಕೆ.ಜೆ. ಮತ್ತು ಡಾ| ವಿವೇಕ್‌ ಎಚ್‌., ಯೋಗದಲ್ಲಿ ಸಪ್ನಾ ಕೆ., ಜಾಸ್ಮಿನ್‌ ಡಿ’ಸೋಜಾ ಜಿಂದಾಲ್‌ ಫೌಂಡೇಶನ್‌ನ ಚಿನ್ನದ ಪದಕ ಪಡೆದರು. ಪದವಿಯಲ್ಲಿ ಡಾ| ಭೀರಾಮ್‌ ಸುಧಾಂಶಿ ಅವರು ಜಿಂದಾಲ್‌ ಫೌಂಡೇಶನ್‌ ಹಾಗೂ ಪ್ರಸಿಡೆಂಟ್‌ ಗೋಲ್ಡ್‌ ಮೆಡಲ್‌ ಸೇರಿ ಮೂರು ಚಿನ್ನದ ಪದಕಕ್ಕೆ ಭಾಜನರಾದರು. ವರ್ಷದ ಅತ್ಯುತ್ತಮ ವಿದ್ಯಾರ್ಥಿಯಾಗಿ ಡಾ| ಕೌಶಿಕ್‌ ಗುಪ್ತ ಹೊರಹೊಮ್ಮಿದರು.

 ಎಸ್‌ಡಿಎಂ ವೈದ್ಯಕೀಯ ವಿ.ವಿ.
ಧಾರವಾಡದಲ್ಲಿ ಡೆಂಟಲ್‌ ಕಾಲೇಜು ಮತ್ತು ಆಸ್ಪತ್ರೆ, ವೈದ್ಯಕೀಯ ಕಾಲೇಜು, ನರ್ಸಿಂಗ್‌ ಕಾಲೇಜು ಮತ್ತು ಸಂಶೋಧನ ಕೇಂದ್ರವನ್ನು ಸೇರಿಸಿಕೊಂಡು ಎಸ್‌ಡಿಎಂ ವೈದ್ಯಕೀಯ ವಿ.ವಿ. ಪ್ರಾರಂಭಿಸಲಾಗಿದೆ. ಮುಂದೆ ಎಲ್ಲ ವಿದ್ಯಾಸಂಸ್ಥೆಗಳನ್ನು ವಿಶ್ವವಿದ್ಯಾಲಯಕ್ಕೆ ಸಂಯೋಜನೆ ಮಾಡಲಾಗುವುದು.
 -ಡಾ| ಡಿ. ವೀರೇಂದ್ರ ಹೆಗ್ಗಡೆ
ಧರ್ಮಾಧಿಕಾರಿ, ಎಸ್‌ಡಿಎಂ ಧಾರವಾಡ ವಿ.ವಿ.ಯ ಕುಲಪತಿ

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.