ಹಳೆ ತ್ಯಾಜ್ಯ ತೆರವಿಗೆ 15 ದಿನದಲ್ಲಿ ಡಿಪಿಆರ್‌ ಸಿದ್ಧ

 ಬನ್ನೂರು ನೆಕ್ಕಿಲ: ಡಂಪಿಗ್‌ ಯಾರ್ಡ್‌

Team Udayavani, Oct 18, 2021, 5:14 AM IST

ಹಳೆ ತ್ಯಾಜ್ಯ ತೆರವಿಗೆ 15 ದಿನದಲ್ಲಿ ಡಿಪಿಆರ್‌ ಸಿದ್ಧ

ಪುತ್ತೂರು: ಬನ್ನೂರು ನೆಕ್ಕಿಲದ ಡಂಪಿಂಗ್‌ ಯಾರ್ಡ್‌ನಲ್ಲಿ ಕಳೆದ ಹದಿನೈದು ವರ್ಷಗಳಿಂದ ಮಣ್ಣಿನೊಳಗೆ ಹುದುಗಿರುವ 50 ಸಾವಿರ ಟನ್‌ ಹಳೆ ತ್ಯಾಜ್ಯವನ್ನು ತೆರವು ಮಾಡಿ ಶೂನ್ಯ ತ್ಯಾಜ್ಯ ವಲಯವಾಗಿ ಪರಿವರ್ತಿಸಲು ನಗರಸಭೆ ವಿಸ್ತೃತ ಯೋಜನಾ ವರದಿ ಸಿದ್ಧಗೊಳಿಸುತ್ತಿದೆ.

ನೆಕ್ಕಿಲದ ಡಂಪಿಂಗ್‌ ಯಾರ್ಡ್‌ನಲ್ಲಿ ದಿನಂಪ್ರತಿ ಸಂಗ್ರಹವಾಗಿರುವ ತ್ಯಾಜ್ಯ ಸಂಸ್ಕರಣೆಯಾಗದೆ ನೇರವಾಗಿ ಮಣ್ಣಿನೊಳಗೆ ಹುದುಗಿ ಪರಿಸರ ಇಡೀ ದುರ್ನಾತ, ರೋಗ ರುಜಿನಗಳ ಭೀತಿಗೆ ಒಳಗಾಗಿದ್ದು ಹೀಗಾಗಿ ಡಂಪಿಂಗ್‌ ಯಾರ್ಡ್‌ ಸಮಸ್ಯೆಗೆ ಮುಕ್ತಿ ನೀಡಬೇಕು ಎಂದು ಹತ್ತಾರು ವರ್ಷಗಳಿಂದ ಬೇಡಿಕೆ ಇದೆ. ಇದೀಗ ಲ್ಯಾಂಡ್‌ ಫಿಲ್‌ ಅನ್ನು ಮುಕ್ತಗೊಳಿಸುವ ನಿರೀಕ್ಷೆ ಮೂಡಿಸಿದೆ.

1.41 ಕೋ.ರೂ.ಅನುದಾನ
ಸ್ವಚ್ಛ ಭಾರತ್‌ ಮಿಶನ್‌ನಡಿಯಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ನಗರಸಭೆಗೆ ಬಿಡುಗಡೆಗೊಂಡಿರುವ 1.41 ಕೋ.ರೂ.ಅನುದಾನವನ್ನು ಹಳೆ ತ್ಯಾಜ್ಯ ತೆರವಿಗೆ ಬಳಸುವ ಬಗ್ಗೆ ಡಿಪಿಆರ್‌ ತಯಾರಿಸಿ ಜಿಲ್ಲಾಧಿಕಾರಿಗೆ ಕಳುಹಿಸಲು ಸಾಮಾನ್ಯ ಸಭೆ ಒಪ್ಪಿಗೆ ಸೂಚಿಸಿದೆ. ಆ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಹದಿನೈದು ದಿನಗಳಲ್ಲಿ ಡಿಪಿಆರ್‌ ಸಿದ್ಧವಾಗಲಿದೆ. ಬಳಿಕ ಇದನ್ನು ಸಾಮಾನ್ಯ ಸಭೆಯಲ್ಲಿ ಮಂಡಿಸಿ ಜಿಲ್ಲಾಧಿಕಾರಿಗೆ ಕಳುಹಿಸಿ ಅಲ್ಲಿಂದ ಒಪ್ಪಿಗೆ ಪಡೆದುಕೊಳ್ಳಲಾಗುತ್ತದೆ.

4.5 ಕೋ.ರೂ ವೆಚ್ಚ
ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿಯ ಪ್ರಕಾರ ಹಳೆ ತ್ಯಾಜ್ಯ ತೆರವಿಗೆ ಡಿಪಿಆರ್‌ ಸಿದ್ಧಗೊಳಿಸಬೇಕು. 2006 ರಿಂದ ತ್ಯಾಜ್ಯ ಹಾಕಲಾಗುತ್ತಿದ್ದು ದಿನಂಪ್ರತಿ 10 ಟನ್‌ ಲೆಕ್ಕದಲ್ಲಿ 45 ರಿಂದ 50 ಸಾವಿರ ಟನ್‌ ತ್ಯಾಜ್ಯ ಮಣ್ಣಿನೊಳಗೆ ಇರಬಹುದು. ಪ್ರಸ್ತುತ ವರ್ಷಗಳಲ್ಲಿ 15 ರಿಂದ 20 ಟನ್‌ ತ್ಯಾಜ್ಯ ಯಾರ್ಡ್‌ಗೆ ಸೇರುತ್ತಿದೆ. ಈ ಎಲ್ಲ ತ್ಯಾಜ್ಯ ತೆರವಿಗೆ 4.5 ಕೋ.ರೂ.ವೆಚ್ಚ ತಗಲಲಿದ್ದು ಡಿಪಿಆರ್‌ ಬಳಿಕ ವೆಚ್ಚದ ವಿವರ ಸ್ಪಷ್ಟವಾಗಿ ದೊರೆಯಲಿದೆ. ಈಗಾಗಲೇ ಸ್ವಚ್ಛ ಭಾರತ್‌ ಮಿಷನ್‌ನಡಿಯಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಬಿಡುಗಡೆಗೊಂಡಿರುವ 1.41 ಕೋ.ರೂ.ಅನ್ನು ತ್ಯಾಜ್ಯ ತೆರವಿಗೆ ಬಳಸಲು ನಿರ್ಧರಿಸಿದ್ದು ಉಳಿದ ಮೊತ್ತದ ಕ್ರೋಢೀಕರಣ ಆಗಬೇಕಿದೆ.

ಚೆನ್ನೈ ಕಂಪೆನಿ ಜತೆ ಒಪ್ಪಂದ
ಹಳೆ ತ್ಯಾಜ್ಯವನ್ನು ತೆರವುಗೊಳಿಸಿದ ಬಳಿಕ ಉಚಿತವಾಗಿ ಸಾಗಾಟ ಮಾಡಲು ಚೆನ್ನೈ ಕಂಪೆನಿ ಜತೆ 2024 ರ ತನಕ ನಗರಸಭೆ ಈಗಾಗಲೇ ಒಪ್ಪಂದ ಮಾಡಿಕೊಂಡಿದೆ. ಇದರ ಪ್ರಕಾರ ತಿಂಗಳಿಗೆ 15 ಟನ್‌ ತ್ಯಾಜ್ಯವನ್ನು ಸಿಮೆಂಟ್‌ ಕಾರ್ಖಾನೆಗಳಿಗೆ ಸಾಗಿಸಬೇಕು. ತ್ಯಾಜ್ಯ ತೆರವು ಮಾಡಿ ಬೇಲ್‌ ಮಾಡಿಡುವುದು ನಗರಸಭೆಯ ಜವಾಬ್ದಾರಿಯಾದರೆ ಇದನ್ನು ಉಚಿತವಾಗಿ ಸಾಗಾಟ ಮಾಡಿ ಸಿಮೆಂಟ್‌ ಕಂಪೆನಿಗಳಿಗೆ ಪೂರೈಕೆ ಮಾಡುವುದು ಚೆನ್ನೈ ಕಂಪೆನಿಯ ಕೆಲಸವಾಗಿದೆ. ಬೇಲ್‌ಗೆ ಪೂರಕವಾಗಿ ನಗರಸಭೆಯು 15ನೇ ಹಣಕಾಸಿನ ಯೋಜನೆಯಡಿ ಬೇಲಿಂಗ್‌ ಯುನಿಟ್‌ಗೆ ಪ್ರಸ್ತಾವನೆ ಸಲ್ಲಿಸಿದೆ. ಹಳೆ ತ್ಯಾಜ್ಯವನ್ನು ಮಣ್ಣಿನೊಳಗಿನಿಂದ ತೆಗೆದು ಬೇಲ್‌ ಮಾಡಿದರೆ ಅದನ್ನು ಸಿಮೆಂಟ್‌ ಕಂಪೆನಿಗಳಿಗೆ ಕೊಂಡು ಹೋಗಲು ಸುಲಭವಾಗಲಿದೆ ಎನ್ನುವುದು ಇದರ ಲೆಕ್ಕಚಾರ.

ಇದನ್ನೂ ಓದಿ:ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಶೂನ್ಯ ತ್ಯಾಜ್ಯ ವಲಯ
ಮಣ್ಣಿನೊಳಗಿನ ತ್ಯಾಜ್ಯ ತೆರವಾದ ಬಳಿಕ ನಗರವು ಲ್ಯಾಂಡ್‌ ಫಿಲ್‌ ಮುಕ್ತ ನಗರವಾಗಿ ಗುರುತಿಸಲಿದೆ. ಸಂಗ್ರಹವಾಗುವ ತ್ಯಾಜ್ಯಗಳನ್ನು ಸಂಸ್ಕರಣೆ ಮಾಡಿ ಘನತ್ಯಾಜ್ಯದಿಂದ ಬಯೋಗ್ಯಾಸ್‌ ಉತ್ಪಾದಿಸಿ ಅದನ್ನು ಇಂಧನವಾಗಿ ಬಳಸುವ ಮಹತ್ವದ ಯೋಜನೆಗೆ ರೋಟರಿ ಸಂಸ್ಥೆ ಮುಂದಾಗಿದ್ದು ನಗರಸಭೆ ಈಗಾಗಲೇ ಅನುಮೋದನೆ ನೀಡಿದೆ. ರೋಟರಿ ಕ್ಲಬ್‌ ಪುತ್ತೂರು ಪೂರ್ವ ನೇತೃತ್ವದಲ್ಲಿ ಬೆಂಗಳೂರಿನ ಸೈನೋಡ್‌ ಬಯೋಸಯನ್ಸ್‌ ಕಂಪೆನಿಯ ಸಲಹೆಯಡಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ. ಸುಮಾರು 4.15 ಕೋ.ರೂ. ವೆಚ್ಚದ ಯೋಜನೆ ಇದಾಗಿದ್ದು, ರೋಟರಿ ಸಂಸ್ಥೆ ಪೂರ್ಣ ಬಂಡವಾಳ ಹೂಡಲಿದೆ. ನಗರಸಭೆಯು ಡಂಪಿಂಗ್‌ ಯಾರ್ಡ್‌ನಲ್ಲಿ 2 ಎಕ್ರೆ ಜಾಗ, ದಿನಂಪ್ರತಿ 20 ಟನ್‌ನಷ್ಟು ಹಸಿ ತ್ಯಾಜ್ಯ ನಿರ್ವಹಣೆ ಜವಾಬ್ದಾರಿ ವಹಿಸಲಿದೆ. ಮುಂದಿನ 15 ವರ್ಷಗಳ ಕಾಲ ಯೋಜನೆಗೆ ಜಾಗ ಬಳಸಿಕೊಳ್ಳುವ ಬಗ್ಗೆ ರೋಟರಿ ಸಂಸ್ಥೆಯೊಂದಿಗೆ ನಗರಸಭೆ ಕರಾರು ಒಪ್ಪಂದ ಮಾಡಿಕೊಂಡಿದೆ.

ಸಾಮಾನ್ಯ ಸಭೆ ಒಪ್ಪಿಗೆ
ಡಂಪಿಂಗ್‌ ಯಾರ್ಡ್‌ನ ಮಣ್ಣಿನೊಳಗೆ ಅಂದಾಜು 50 ಸಾವಿರ ಟನ್‌ ತ್ಯಾಜ್ಯ ಇರಬಹುದು. ಈಗಾಗಲೇ 1.41 ಕೋ.ರೂ.ಅನುದಾನವನ್ನು ಹಳೆ ತ್ಯಾಜ್ಯ ತೆರವಿಗೆ ಬಳಸುವ ಬಗ್ಗೆ ಡಿಪಿಆರ್‌ ತಯಾರಿಸಿ ಜಿಲ್ಲಾಧಿಕಾರಿಗೆ ಕಳುಹಿಸಲು ಸಾಮಾನ್ಯ ಸಭೆ ಒಪ್ಪಿಗೆ ನೀಡಿದೆ. ಹದಿನೈದು ದಿನಗಳಲ್ಲಿ ಡಿಪಿಆರ್‌ ಸಿದ್ಧವಾಗಲಿದೆ.
ಮಧು ಎಸ್‌. ಮನೋಹರ್‌,
ಪೌರಾಯುಕ್ತ, ನಗರಸಭೆ

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.