“ಅತ್ಯಾಧುನಿಕ ಶಿಕ್ಷಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಪೂರಕ’: ಸಚಿವ ಡಾ| ಅಶ್ವತ್ಥನಾರಾಯಣ


Team Udayavani, Mar 8, 2023, 7:32 AM IST

“ಅತ್ಯಾಧುನಿಕ ಶಿಕ್ಷಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಪೂರಕ’: ಸಚಿವ ಡಾ| ಅಶ್ವತ್ಥನಾರಾಯಣ

ಸುಬ್ರಹ್ಮಣ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಸುಧಾರಣೆ ಆಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವ ಮೂಲಕ ಶಿಕ್ಷಣ ಕ್ಷೇತ್ರ ಮತ್ತು ದೇಶದ ಜ್ಞಾನಾರ್ಜನೆಯ ಮಟ್ಟ ಉತ್ಕೃಷ್ಠ ಮಟ್ಟಕ್ಕೇರಿದೆ. ದೇಶದ ಸರ್ವರೂ ಅತ್ಯಾಧುನಿಕ ರೀತಿಯ ಶಿಕ್ಷಣ ಪಡೆಯಲು ಈ ಯೋಜನೆ ಬೆನ್ನೆಲುಬಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಸಿ.ಎನ್‌. ಹೇಳಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯದ ಪ್ರತಿ ತಾಲೂಕಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ಕಾಲೇಜು ಆರಂಭಿಸಿದ ಸಂಖ್ಯೆಗೆ ಒತ್ತು ನೀಡಲಾಗಿಲ್ಲ. ಬದಲಾಗಿ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡಲಾಗಿದೆ. ಹೊಸದಾಗಿ ಆರಂಭಗೊಂಡ ಕಡಬ ತಾಲೂಕಿನ ಕೇಂದ್ರ ಸ್ಥಳ ಕಡಬ ದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಚಿಂತನೆ ನಡೆಸ ಲಾಗು ವುದು. ರಾಜ್ಯದಲ್ಲಿ ಸುಮಾರು 440 ಕಾಲೇಜು ಗಳಿವೆ ಇದರಲ್ಲಿ 360 ಕಾಲೇಜುಗಳು ಗುಣಮಟ್ಟದ ಗ್ರೇಡ್‌ ಅನ್ನು ನ್ಯಾಕ್‌ನಿಂದ ಪಡೆದಿದೆ ಎಂದರು.

ಆತಂಕ ಬೇಡ; ಮುಂಜಾಗ್ರತೆ ಇರಲಿ
ಎಚ್‌3 ಎನ್‌2 ಎಂಬ ಹೊಸ ವೈರಸ್‌ ತಳಿ ಇದೀಗ ಕಂಡು ಬಂದಿದೆ. ಇದಕ್ಕೆ ಜನತೆ ಭಯ ಪಡುವ ಆವಶ್ಯಕತೆ ಇಲ್ಲ. ಆದರೆ ಮುಂಜಾಗೃತ ಕ್ರಮಗಳನ್ನು ವಹಿಸಿಕೊಳ್ಳಬೇಕು. ಈ ಬಗ್ಗೆ ಸರಕಾರ ಈಗಾಗಲೇ ಸುತ್ತೋಲೆ ಹೊರಡಿಸಿದೆ. ಯಾರೂ ಭಯ ಪಡುವುದು ಬೇಡ ಎಂದರು.

ಬಹುಮತದೊಂದಿಗೆ ಅಧಿಕಾರ
ಕೇಂದ್ರ ಮತ್ತು ರಾಜ್ಯ ಸರಕಾರ ಜನತೆಯ ಹಿತಕ್ಕಾಗಿ ಭರಪೂರ ಅಭಿವೃದ್ದಿ ಕಾರ್ಯಗಳನ್ನು ನಡೆ ಸಿದ್ದು ಸರಕಾರದ ಸಾಧನೆಗಳನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ. ಆದು ದರಿಂದ ಈ ಬಾರಿ ರಾಜ್ಯದಲ್ಲಿ 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಮತ್ತೆ ಸರಕಾರ ನಡೆಸಲಿದೆ ಎಂದು ಅವರು ತಿಳಿಸಿದರು.

ಸಚಿವರಿಂದ ಆಶ್ಲೇಷಾ ಬಲಿ ಸೇವೆ
ಶ್ರೀ ಕ್ಷೇತ್ರಕ್ಕೆ ಕುಟುಂಬ ಸಮೇತ ಆಗ ಮಿಸಿದ ಸಚಿವರನ್ನು ಶ್ರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಸ್ವಾತಿಸಿ ದರು. ಸಚಿವರು ಶ್ರೀ ದೇವರ ದರುಶನ ಪಡೆದು ಆಶ್ಲೇಷಾ ಬಲಿ ಮತ್ತು ಪಂಚಾಮೃತ ಮಹಾಭಿಷೇಕ ಸೇವೆ ನೆರವೇರಿಸಿದರು. ಅನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ಅಶ್ವತ್ಥನಾರಾಯಣ ಅವರೊಂದಿಗೆ ಪತ್ನಿ, ಪುತ್ರಿ, ಪುತ್ರ ಹಾಗೂ ಸಹೋದರ ಜತೆಗಿದ್ದರು. ಸಚಿವರನ್ನು ಶಾಲು ಹೊದಿಸಿ ಶ್ರೀ ದೇವರ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಸಹಾಯಕ ಕಾರ್ಯ ನಿರ್ವ ಹಣಾಧಿಕಾರಿ ಪುಷ್ಪಲತಾ ರಾವ್‌, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶೋಭಾ ಗಿರಿಧರ್‌, ಮಾಸ್ಟರ್‌ಪ್ಲ್ರಾನ್‌ ಸಮಿತಿ ಸದಸ್ಯ ಮನೋಜ್‌ ಸುಬ್ರಹ್ಮಣ್ಯ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಗ್ರಾ.ಪಂ. ಸದಸ್ಯೆ ಭಾರತಿ ದಿನೇಶ್‌, ಲೋಕೋಪ ಯೋಗಿ ಅಭಿಯಂತರ ಪ್ರಮೋದ್‌ ಕುಮಾರ್‌, ಶಿಷ್ಠಾಚಾರ ಅಧಿಕಾರಿ ಜಯರಾಮ ರಾವ್‌, ಕೆ.ಎಂ. ಗೋಪಿನಾಥ್‌ ನಂಬೀಶನ್‌ ಮುಂತಾ ದವರು ಉಪಸ್ಥಿತರಿದ್ದರು.

ಬಂಟ್ವಾಳದ ತನಕ ದಶಪಥ ರಸ್ತೆ
ಪ್ರಧಾನಿ ಮೋದಿ ಅವರು ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟಿಸಲಿದ್ದಾರೆ. ರೋಡ್‌ ಫಾರ್‌ ಡೆವಲಪ್‌ಮೆಂಟ್‌ ಧ್ಯೇಯ ವ್ಯಾಖ್ಯೆಯ ಮೂಲಕ ರಸ್ತೆಗಳು ಗಣನೀಯವಾಗಿ ನಮ್ಮ ಕಾಲದಲ್ಲಿ ಅಭಿವೃದ್ಧಿಯಾಗಿದೆ. ದಶಪಥ ರಸ್ತೆಯು ಬೆಂಗಳೂರು – ಮೈಸೂರು – ಮಡಿಕೇರಿ ಮೂಲಕ ಬಂಟ್ವಾಳ ತನಕ ವಿಸ್ತರಣೆಗೊಳ್ಳಲಿದೆ. ಈಗ ಬೆಂಗಳೂರು-ಮೈಸೂರು ತನಕ ರಸ್ತೆ ಕಾಮಗಾರಿ ನೆರವೇರಿದೆ. ಮುಂದೆ ಮೈಸೂರಿನಿಂದ ಮಡಿಕೇರಿ ತನಕ, ಮಡಿಕೇರಿಯಿಂದ ಬಂಟ್ವಾಳ ತನಕ ರಸ್ತೆ ಕಾಮಗಾರಿ ಆರಂಭವಾಗಲಿದೆ ಎಂದು ಸಚಿವ ಡಾ| ಅಶ್ವತ್ಥನಾರಾಯಣ ಹೇಳಿದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.