ಡಾ| ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆಯವರಿಗೆ ಊರ ಗೌರವ; ಸಂಭ್ರಮಗಳ ಸಂಗಮ

ಸಾವಿರಕ್ಕೂ ಅಧಿಕ ಕಲಾವಿದರು ಮೆರವಣಿಗೆಯಲ್ಲಿ ವಿವಿಧ ವೇಷಭೂಷಣಗಳೊಂದಿಗೆ ಕಂಗೊಳಿಸಿದರು

Team Udayavani, Dec 29, 2022, 10:09 AM IST

ಡಾ| ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆಯವರಿಗೆ ಊರ ಗೌರವ; ಸಂಭ್ರಮಗಳ ಸಂಗಮ

ಬೆಳ್ತಂಗಡಿ: ಧರ್ಮಸ್ಥಳ ಪರಂಪರೆಯ ಶ್ರೇಯಸ್ಸನ್ನು ನಾಡಿನುದ್ದಕ್ಕೂ ಪಸರಿಸಿದ, ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾದಾನಗೈದು, ಧರ್ಮೋತ್ಥಾನ ಟ್ರಸ್ಟ್‌ ಮುಖೇನ ನಾಡಿನ ದೇವಸ್ಥಾನಗಳ ಪುನರುಜ್ಜೀವನಗೈದು, ಗ್ರಾಮಾಭಿವೃದ್ಧಿಯನ್ನು ಹುಟ್ಟು ಹಾಕಿ ಜನತೆಗೆ ಸ್ವಾವಲಂಬನೆಯ ಹಾದಿ ತೋರಿ, ಮಹಿಳಾ ಸಬಲೀಕರಣಕ್ಕೆ ಹೊಸ ಭಾಷ್ಯ ಬರೆದ ಚತುರ್ದಾನ ಶ್ರೇಷ್ಠ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಡಾ| ಹೇಮಾವತಿ
ವೀ. ಹೆಗ್ಗಡೆಯವರಿಗೆ ಕ್ಷೇತ್ರದ ನೌಕರರಿಂದ ಧರ್ಮಸ್ಥಳದಲ್ಲಿ ಏರ್ಪಡಿಸಿದ ಸಂಭ್ರಮಗಳ ಸಂಗಮ ಗೌರವ ಕಾರ್ಯಕ್ರಮ ಧನ್ಯತಾಭಾವದಲ್ಲಿ ತೇಲಿಸಿತು.

ಡಿ. ವೀರೇಂದ್ರ ಹೆಗ್ಗಡೆಯವರನ್ನು ಭಾರತ ಸರಕಾರ ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ ಸಂಭ್ರಮ, ಹೇಮಾವತಿ ವೀ. ಹೆಗ್ಗಡೆಯವರಿಗೆ ಮಂಗಳೂರು ವಿ.ವಿ. ನೀಡಿರುವ ಗೌರವ ಡಾಕ್ಟರೇಟ್‌, ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ, ಡಿ. ವೀರೇಂದ್ರ ಹೆಗ್ಗಡೆಯವರು 75ನೇ ಸಂವತ್ಸರಕ್ಕೆ ಪಾದಾರ್ಪಣೆಗೊಂಡ ಸಂಭ್ರಮದ ಪ್ರಯುಕ್ತ ಗ್ರಾಮಸ್ಥರು, ನೌಕರರರು, ಕ್ಷೇತ್ರದ ವಿವಿಧ ಸಂಸ್ಥೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಸಂತೋಷದ ಕ್ಷಣಕ್ಕೆ ಸಾಕ್ಷಿಯಾಯಿತು.

ಡಿ. ಹರ್ಷೇಂದ್ರ ಕುಮಾರ್‌, ಡಿ.ಸುರೇಂದ್ರ ಕುಮಾರ್‌, ಡಿ. ರಾಜೇಂದ್ರ ಕುಮಾರ್‌, ಸುಪ್ರಿಯಾ ಹರ್ಷೇಂದ್ರ, ಅನಿತಾ ಸುರೇಂದ್ರ ಕುಮಾರ್‌, ನೀತಾ ರಾಜೇಂದ್ರ ಕುಮಾರ್‌, ಶ್ರದ್ಧಾ ಅಮಿತ್‌, ಅಮಿತ್‌, ಡಾ| ನಿರಂಜನ್‌ ಕುಮಾರ್‌, ಪದ್ಮಲತಾ, ನಿಶ್ಚಲ್‌ ಕುಮಾರ್‌, ಶ್ರೇಯಸ್‌ ಕುಮಾರ್‌ ಸಹಿತ ಕುಟುಂಬದವರು, ಚಲನಚಿತ್ರ ನಟ ರಮೇಶ್‌ ಅರವಿಂದ್‌, ಅರ್ಚನಾ ರಮೇಶ್‌, ಶಾಸಕ ಹರೀಶ್‌ ಪೂಂಜ, ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಭಾಗವಹಿಸಿದ್ದರು.

ಸಂಜೆ ಹೆಗ್ಗಡೆಯವರ ಬೀಡಿನಿಂದ ಅಮೃತವರ್ಷಿಣಿ ಸಭಾಭವನದವರೆಗೆ ಮೆರವಣಿಗೆಯಲ್ಲಿ ಹೆಗ್ಗಡೆ ದಂಪತಿಯವರನ್ನು ಬೆಳ್ಳಿ ಲಾಲಕಿ ವಾಹನದಲ್ಲಿ ಕರೆತರಲಾಯಿತು. ಮೆರವಣಿಗೆಯಲ್ಲಿ ಗಜಪಡೆಯೊಂದಿಗೆ ಕೊಂಬು, ಬಸವ, ನಿಶಾನೆ, ನಂದಿಕೋಲು, ಭಜನ ತಂಡ, ಡೊಳ್ಳುಕುಣಿತ, ಸೇರಿದಂತೆ ಶಾಲಾ ಮಕ್ಕಳಿಂದ ಯಕ್ಷಗಾನ ವೇಷ, ಕಥಕ್ಕಳಿ, ಕೂಚುಪುಡಿ, ಶಿವಪಾರ್ವತಿ, ಹುಲಿವೇಷ, ಕಂಸಾಲೆ, ಮೋಹಿನಿ ಅಟ್ಟಂ, ಕೋಲಾಟ ಪ್ರದರ್ಶನಗೊಂಡರೆ, ಗ್ರಾಮಾಭಿವೃದ್ಧಿ ಯೋಜನೆ, ಯುವತಿ ಮಂಡಲ, ಕೇಂದ್ರ ಕಚೇರಿ ಸಿಬಂದಿ, ವಸತಿ ವಿಭಾಗ, ಆಟೋ ಚಾಲಕರು, ಸಹಿತ ದೇಗುಲದ ಸಹಿತ ಬೀಡು ಎಲ್ಲ ವಿಭಾಗದವರು ರಾಜಸ್ಥಾನಿ, ಬಿಳಿ ಪಂಚೆ, ಸೈನಿಕರ ವೇಷ, ಕಾಡುಜನರ ವೇಷ, ಕೋಲಾಟ, ನಾಸಿಕ್‌ ಬ್ಯಾಂಡ್‌, ವೀರಗಾಸೆ ಸಹಿತ ಅನೇಕ ಕಲಾ ಪ್ರಕಾರಗಳೊಂದಿಗೆ ಹೆಜ್ಜೆ ಹಾಕಲಾಯಿತು.

ಸುಮಾರು ಸಾವಿರಕ್ಕೂ ಅಧಿಕ ಕಲಾವಿದರು ಮೆರವಣಿಗೆಯಲ್ಲಿ ವಿವಿಧ ವೇಷಭೂಷಣಗಳೊಂದಿಗೆ ಕಂಗೊಳಿಸಿದರು. ವೇದಿಕೆವರೆಗೆ ದಂಪತಿಗೆ ಪುಷ್ಪವೃಷ್ಟಿ ಸಮರ್ಪಿಸಲಾಯಿತು. ಹೆಗ್ಗಡೆ ದಂಪತಿ ರೇಷ್ಮೆ ವಸ್ತ್ರಧಾರಿಗಳಾಗಿ ಕಣ್ಮನಸೆಳೆದರು. ಧರ್ಮಸ್ಥಳ ಕ್ಷೇತ್ರ ಸಹಿತ ನಗರವನ್ನು ಅಲಂಕಾರಿಕ ವಸ್ತುಗಳಿಂದ ಸಿಂಗಾರಗೊಳಿಸಲಾಗಿತ್ತು. ಸಂಭ್ರಮೋತ್ಸವ ಸಮಿತಿ ಧರ್ಮಸ್ಥಳದಿಂದ ಸಂಪೂರ್ಣ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪೆರಾಡಿಯಿಂದ ಮಂಗಳ ಗಂಗೋತ್ರಿವರೆಗಿನ ಯಾನ ದೃಶ್ಯಾಭಿವಂದನ, ಮಣಿಪಾಲ ದಿವ್ಯಶ್ರೀ ಬಳಗದಿಂದ ಮುಡಿಗೇರಿತು ಡಾಕ್ಟರೇಟ್‌ ಕಾವ್ಯಾಭಿವಂದನ, ಧರ್ಮಸ್ಥಳದಿಂದ ದಿಲ್ಲಿಗೆ ದೃಶ್ಯಾಭಿವಂದನ, ಉಜಿರೆಯ ಎಸ್‌.ಡಿ.ಎಂ. ಕಾಲೇಜು ವಿದ್ಯಾರ್ಥಿಗಳಿಂದ ಪರಹಿತ ಬಯಸುವ ಗಾನ ವೈಭವ, ವೇ| ಮೂ| ಸೋಮಸುಂದರ ಭಟ್‌ ಮತ್ತು ಬಳಗದಿಂದ ವೇದಘೋಷ, ದಿವ್ಯಶ್ರೀ ಬಳಗದಿಂದ ಶೋಭಾನೆ ಎನ್ನೀರೆ ಶೋಭಾನೆ, ಬಾಹುಬಲಿ ಸೇವಾ ಸಮಿತಿಯಿಂದ ಆರತಿ ಹಾಡು ಹಾಡಲಾಯಿತು.

ಟಾಪ್ ನ್ಯೂಸ್

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.