ಟೆಂಡರ್ ಹಂತದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ
ಆರ್ಯಾಪು ಗ್ರಾ.ಪಂ.ನಲ್ಲಿ ವಿವಿಧ ಕಾಮಗಾರಿ ಉದ್ಘಾಟಿಸಿ ಶಾಸಕ ಮಠಂದೂರು
Team Udayavani, May 2, 2022, 12:42 PM IST
ಪುತ್ತೂರು: ವಿಧಾನಸಭೆ ಕ್ಷೇತ್ರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಕಲ್ಪಿಸುವ ನಿಟ್ಟಿನಲ್ಲಿ 325 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಅನುಷ್ಠಾನವಾಗಲಿದ್ದು, ಪ್ರಸ್ತುತ ಟೆಂಡರ್ ಹಂತದಲ್ಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸಹಯೋಗದಲ್ಲಿ ಆರ್ಯಾಪು ಗ್ರಾ.ಪಂ.ನಿಂದ ಕಚೇರಿ ಆವರಣದಲ್ಲಿ ನಿರ್ಮಾಣಗೊಂಡ ನೇತಾಜಿ ಸುಭಾಷ್ಚಂದ್ರ ಭೋಸ್ ಸಭಾಂಗಣ ಉದ್ಘಾಟನೆ ಹಾಗೂ ನರೇಗಾ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವಿವಿಧ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ನೇತ್ರಾವತಿ ನದಿಯಿಂದ ನೀರನ್ನು ಸಂಗ್ರಹಿಸಿ ಓವರ್ಹೆಡ್ ಟ್ಯಾಂಕ್ ಗಳ ಮೂಲಕ ಮನೆಗಳಿಗೆ ಸರಬರಾಜು ಮಾಡಲಾಗುವುದು ಎಂದರು.
ಜಲ ಜೀವನ್ ಮಿಷನ್ ಮೂಲಕ 3.5 ಕೋ.ರೂ., ರಸ್ತೆ, ಕುಡಿಯುವ ನೀರು ಮೊದಲಾದ ಮೂಲ ಸೌಲಭ್ಯ ಕಲ್ಪಿಸಲು ಆರ್ಯಾಪು ಗ್ರಾ.ಪಂ.ಗೆ 11.55 ಕೋ. ರೂ. ಅನುದಾನ ನೀಡಲಾಗಿದೆ. ಗ್ರಾಮೀಣ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಸಣ್ಣ ಕೈಗಾರಿಕೆ ಉತ್ತೇಜನ ನೀಡಲು ಆರ್ಯಾಪು ಗ್ರಾ.ಪಂ.ನಲ್ಲಿ ಜಾಗ ಗುರುತಿಸಲಾಗುವುದು ಎಂದು ಹೇಳಿದರು.
ರಾಜೀವ ಗಾಂಧಿ ಸೇವಾ ಕೇಂದ್ರವನ್ನು ಉದ್ಘಾಟಿಸಿದ ವಿ.ಪ. ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಗ್ರಾ.ಪಂ.ನಲ್ಲಿ ಕೇಂದ್ರ, ರಾಜ್ಯ ಸರಕಾರಗಳು ಆಡಳಿತ ನಡೆಸುವುದಲ್ಲ. ಸ್ಥಳೀಯವಾಗಿ ಜನರಿಂದ ಆಯ್ಕೆಯಾದ ಪ್ರತಿನಿಧಿಗಳ ಆಡಳಿತ ನಡೆಸುತ್ತಾರೆ ಎಂದರು. ಆರ್ಯಾಪು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಕೆ. ಅಧ್ಯಕ್ಷತೆ ವಹಿಸಿದ್ದರು.
ಉದ್ಘಾಟನೆಗೊಂಡ ಕಾಮಗಾರಿಗಳು
ಕುರಿಯದಲ್ಲಿ 10 ಲಕ್ಷ ರೂ. ವೆಚ್ಚದ ರಾಜೀವ ಗಾಂಧಿ ಸೇವಾ ಕೇಂದ್ರ, ಕಲ್ಲರ್ಪೆಯಲ್ಲಿ 6 ಲಕ್ಷದ ರೂ. ವೆಚ್ಚದ ಸ್ವಚ್ಛ ಸಂಕೀರ್ಣ, ಗ್ರಾಮ ಪಂಚಾಯತ್ ಕಚೇರಿ ಬಳಿ 15 ಲಕ್ಷ ರೂ. ವೆಚ್ಚದ ನೇತಾಜಿ ಸುಭಾಷ್ ಚಂದ್ರ ಬೋಸ್ ಸಭಾಂಗಣ, 3.80 ಲಕ್ಷ ರೂ. ವೆಚ್ಚದ ಕೊಲ್ಯ ಕುಡಿಯುವ ನೀರಿನ ಸೋಲಾರ್ ಪಂಪ್ ಕಾಮಗಾರಿಯ ಉದ್ಘಾಟನೆ ನಡೆಯಿತು.
ಕ್ರೀಡಾ ಸಾಮಗ್ರಿ ವಿತರಣೆ
ಕಾರ್ಪಾಡಿ ಸುಬ್ರಹ್ಮಣ್ಯೇಶ್ವರ ಯುವಕ ಮಂಡಲ, ಶ್ರೀ ವಿನಾಯಕ ನ್ಪೋರ್ಟ್ಸ್ ಕ್ಲಬ್ ಸಂಟ್ಯಾರ್, ಸೂರ್ಯ ಯುವಕ ಮಂಡಲ ಇಡಬೆಟ್ಟು, ಶ್ರೀಕೃಷ್ಣ ಯುವಕ ಮಂಡಲ ಕಂಬಳತ್ತಡ್ಡ, ಯುವಕ ಮಂಡಲ ಮಾವಿನಕಟ್ಟೆ, ಹಿ.ಪ್ರಾ. ಶಾಲೆಗಳಾದ ಹಂಟ್ಯಾರು, ಇಡಬೆಟ್ಟು, ಕುರಿಯ, ಕುಂಜೂರುಪಂಜ ಅ. ಹಿ.ಪ್ರಾ. ಶಾಲೆಗೆ ಕ್ರೀಡಾ ಸಾಮಗ್ರಿ ವಿತರಿಸಲಾಯಿತು.
ಶಾಸಕರಿಗೆ ಮನವಿ
ಕುರಿಯ ಓಟೆತ್ತಿಮಾರ್ ಪರಿಶಿಷ್ಟ ಜಾತಿ ಕಾಲನಿಗೆ ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಸದಸ್ಯ ಬೂಡಿಯಾರ್ ಪುರುಷೋತ್ತಮ ರೈ ಶಾಸಕ ಸಂಜೀವ ಮಠಂದೂರು ಅವರಿಗೆ ಮನವಿ ಮಾಡಿದರು. ವಿ. ಪ.ಸದಸ್ಯ ಹರೀಶ್ ಕುಮಾರ್, ಉದ್ಯೋಗ ಖಾತರಿ ಯೋಜನೆಯ ಒಂಬುಡ್ಸ್ ಮೆನ್ ರಾಮದಾಸ ಗೌಡ, ತಾ.ಪಂ. ಇಒ ನವೀನ್ ಭಂಡಾರಿ ಉಪಸ್ಥಿತರಿದ್ದರು. ಪಿಡಿಒ ನಾಗೇಶ್ ಎಂ. ಸ್ವಾಗತಿಸಿದರು. ದ್ವಿ.ದ ಲೆಕ್ಕ ಸಹಾಯಕ ಮೋನಪ್ಪ ವಂದಿಸಿದರು. ಗ್ರಾ.ಪಂ. ಸದಸ್ಯ ನೇಮಾಕ್ಷ ಸುವರ್ಣ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ