ಅಮರಮುಡ್ನೂರು,ಅಮರಪಡ್ನೂರು ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯಕ್ಕೆ ಚಾಲನೆ
Team Udayavani, Oct 16, 2021, 3:49 PM IST
ಪುತ್ತೂರು: ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಅ. 16 ರಂದು ನಡೆಯಿತು.
ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಮರ ಸಹಕಾರ ಸದನದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಮೀನುಗಾರಿಕಾ ಬಂದರು ಒಳನಾಡು ಜಲ ಸಾರಿಗೆ ಸಚಿವರು, ಶಾಸಕ ಎಸ್. ಅಂಗಾರ ರವರು ದೀಪ ಬೆಳಗಿಸಿದರು.
ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯ ಮೇಲ್ತೋಟ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ಪುತ್ತೂರು ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್, ಸುಳ್ಯ ತಹಶೀಲ್ದಾರ್ ಅನಿತ ಲಕ್ಷ್ಮೀ, ಸುಳ್ಯ ತಾಲೂಕು ಪಂಚಾಯತ್ ಇ.ಒ.ಭವಾನಿಶಂಕರ, ಡಿ.ಡಿ.ಎಲ್. ಆರ್. ನಿರಂಜನ್ , ಯೋಜನಾ ನಿರ್ದೇಶಕ ಹೆಚ್.ಆರ್. ನಾಯಕ್ ರವರು ಉಪಸ್ಥಿತರಿದ್ದರು. ಎ.ಸಿ.ಯತೀಶ್ ಉಳ್ಳಾಲ್ ಸ್ವಾಗತಿಸಿದರು.
ಇ.ಒ.ಭವಾನಿಶಂಕರ ವಂದಿಸಿದರು. ಮುಖ್ಯ ಶಿಕ್ಷಕ ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಪುಸ್ತಕ ಬಿಡುಗಡೆ ಮಾಡಲಾಯಿತು.
ಸಚಿವರನ್ನು ಹಾಗೂ ಜಿಲ್ಲಾಧಿಕಾರಿಯವರನ್ನು ಚೆಂಡೆ ವಾದನ ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಆರಂಭಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ