ನಾಡ ಕಚೇರಿ ಕಟ್ಟಡಕ್ಕೆ ಹಸಿರು ನಿಶಾನೆ
Team Udayavani, Jul 22, 2018, 2:45 PM IST
ಉಪ್ಪಿನಂಗಡಿ: ಹೋಬಳಿ ಮಟ್ಟದ ನಾಡಕಚೇರಿ ನೂತನ ಕಟ್ಟಡಕ್ಕೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಪುತ್ತೂರು ತಾಲೂಕಿನ ಹಲವು ಗ್ರಾಮ ವ್ಯಾಪ್ತಿಯ ಈ ನಾಡಕಚೇರಿಯ ಕಟ್ಟಡ ನಾದುರಸ್ತಿಯಲ್ಲಿರುವ ಬಗ್ಗೆ ಮನವರಿಕೆಯಾಗಿದೆ. ಕಂದಾಯ ಇಲಾಖೆ ಬೇಡಿಕೆಯಂತೆ ಹೆಚ್ಚುವರಿ ಅನುದಾನವನ್ನು ಬಜೆಟ್ನಲ್ಲಿ ಕಾದಿರಿಸಲಾಗಿದೆ. ನಾಡಕಚೇರಿ ಕಟ್ಟಡಕ್ಕೆ ಮುಕ್ತಿ ನಿಚ್ಚಳಗೊಂಡಿದೆ.
ಮಳೆಗಾಲ ಮುಗಿದ ಬಳಿಕ ನೂತನ ಕಟ್ಟಡದ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ. ಛಾವಣಿ ಸೋರಿಕೆಯಿಂದ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಾಂತರಕ್ಕೆ ಬದಲಿ ಸರಕಾರಿ ಕಟ್ಟಡ ಹುಡುಕಾಟದಲ್ಲಿ ತೊಡಗಿದ್ದಾರೆ. ನಾಡಕಚೇರಿ ಅವ್ಯವಸ್ಥೆಗಳ ಕುರಿತು ‘ಉದಯವಾಣಿ’ ಸುದಿನ ಸಚಿತ್ರ ವರದಿ ಪ್ರಕಟಿಸಿತ್ತು. ನೂತನ ಕಟ್ಟಡದ ಕಾಮಗಾರಿಯು 20 ಲ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ.
ಗ್ರಾ.ಪಂ.ನಿಂದ ನಿರ್ಣಯ
ಗ್ರಾ.ಪಂ. ಕಚೇರಿಯ ಕಟ್ಟಡದಲ್ಲಿ ನಾಡಕಚೇರಿಗೆ ಸ್ಥಳಾವಕಾಶ ಕೋರಲಾಗಿತ್ತು. ಗ್ರಾ.ಪಂ. ಆಡಳಿತ ಹಳೆಯ ನಾಡ ಕಚೇರಿಯ ನೆಲ ಅಂತಸ್ತನ್ನು ಪಂಚಾಯತ್ ವಾಣಿಜ್ಯ ಸಂಕೀರ್ಣ ರಚಿಸಲು ಒದಗಿಸಿದರೆ ಮಾತ್ರ ಮೇಲಂತಸ್ತಿನಲ್ಲಿ ನಾಡಕಚೇರಿಗೆ ಸ್ಥಳ ನೀಡಲಾಗುವುದು ಎನ್ನುವ ನಿರ್ಣಯ ಮಾಡಿದೆ. ಜಿಲ್ಲಾಧಿಕಾರಿ ಜತೆ ಒಪ್ಪಂದದ ಚರ್ಚೆಗೆ ದಿನ ಕಾಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ