ಡಸ್ಟ್‌  ಬಿನ್‌ ತೆರವು, ರಸ್ತೆ ಬದಿಯೇ ತ್ಯಾಜ್ಯ


Team Udayavani, Nov 3, 2018, 3:17 PM IST

3-november-14.gif

ನಗರ: ತ್ಯಾಜ್ಯ ನಿರ್ವಹಣೆ ವಿಷಯದಲ್ಲಿ ಮನೆ ಮನೆಗೆ ಬಕೆಟ್‌ ವಿತರಿಸುವ ಕೆಲಸ ನಡೆಯುತ್ತಿರುವ ನಡುವೆಯೇ ರಸ್ತೆ ಬದಿ ಕಸ ಎಸೆಯುತ್ತಿರುವ ಪ್ರಸಂಗವೂ ನಡೆಯುತ್ತಿದೆ. ಇದಕ್ಕೆ ಕಾರಣ ಹುಡುಕಿದಾಗ, ರಸ್ತೆ ಬದಿ ಇಟ್ಟಿದ್ದ ಕೆಲ ಡಸ್ಟ್‌ಬಿನ್‌ಗಳನ್ನು ತೆರವು ಮಾಡಿರುವುದು ಬೆಳಕಿಗೆ ಬಂದಿದೆ.

ಬನ್ನೂರು ಡಂಪಿಂಗ್‌ ಯಾರ್ಡ್‌ನಿಂದ ಹಿಡಿದು ಪೇಟೆಯ ಪ್ರತಿ ಮನೆಗಳಲ್ಲಿಯೂ ತ್ಯಾಜ್ಯ ಸಮಸ್ಯೆ ಬಿಗಡಾಯಿಸಿರುವುದು ಹೊಸ ವಿಷಯವೇನಲ್ಲ. ಇದನ್ನು ನಿವಾರಿಸುವ ಉದ್ದೇಶದಿಂದ ತ್ಯಾಜ್ಯ ಸಂಗ್ರಹಣೆಯ ಸವಾಲನ್ನು ಹೊರಗುತ್ತಿಗೆಯ ವ್ಯಕ್ತಿಯೊಬ್ಬರ ಹೆಗಲಿಗೆ ವಹಿಸಲಾಯಿತು. ಅಷ್ಟಕ್ಕೆ ಸಮಸ್ಯೆ ಪರಿಹಾರ ಕಾಣಬಹುದು ಎಂದು ಭಾವಿಸುವುದು ತಪ್ಪು. ಏಕೆಂದರೆ ಸಮಸ್ಯೆಯ ನಿಜ ಸ್ವರೂಪ ಬಯಲಾದದ್ದೇ ಆಗ.

ಪ್ಲಾಸ್ಟಿಕ್‌ ಬಳಕೆ ಹೆಚ್ಚಿದಂತೆ ಕರಗದ ತ್ಯಾಜ್ಯ ಹೆಚ್ಚಾಯಿತು. ಇದಕ್ಕೆ ಮುಕ್ತಿ ನೀಡುವುದೇ ಅಸಾಧ್ಯ ಎಂಬಂತಾಯಿತು. ಡಂಪಿಂಗ್‌ ಯಾರ್ಡ್‌ನಂತೆ ಮನೆ, ಅಂಗಡಿಗಳಲ್ಲಿಯೂ ಪ್ಲಾಸ್ಟಿಕ್‌ ಪ್ಲಾಸ್ಟಿಕ್‌ ರಾಶಿ ಬಿದ್ದಿದೆ. ಇದನ್ನು ಮಾಡುವುದಾದರೂ ಏನು? ಮನೆಗಳಲ್ಲಿ ಶುಚಿಗೊಳಿಸಿ, ಕಟ್ಟಿ ಇಡಬಹುದು. ಆದರೆ, ಅಂಗಡಿಗಳವರು ಬೀದಿಗೆ ಬಿಸಾಡುತ್ತಾರೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರಸಭೆ ಅಧಿಕಾರಿಗಳು ಶಿಸ್ತಿನ ಕ್ರಮಕ್ಕೆ ಮುಂದಾಗಿದ್ದಾರೆ.

ಕೊಂಬೆಟ್ಟು ವಾರ್ಡ್‌ನ ಕೆಲವು ಪ್ರದೇಶಗಳಲ್ಲಿ, ಬೊಳುವಾರು ಮೊದಲಾದ ಕಡೆಗಳಲ್ಲಿ ರಸ್ತೆ ಬದಿ ತ್ಯಾಜ್ಯ ಎಸೆಯುತ್ತಿರುವುದು ಒಂದೆರಡು ದಿನಗಳಿಂದ ನಡೆಯುತ್ತಿತ್ತು. ಕಸ ಎಸೆಯುತ್ತಿರುವ ವ್ಯಕ್ತಿಗಳ ಪತ್ತೆಗೆ ನಗರಸಭೆ, ವಾರ್ಡ್‌ ಸದಸ್ಯರ ನೆರವು ಕೇಳಲಾಯಿತು. ಸಿಸಿ ಟಿವಿ ಫೂಟೇಜ್‌ ಪರಿಶೀಲಿಸುವಾಗ ತ್ಯಾಜ್ಯ ಎಸೆದ ವ್ಯಕ್ತಿಗಳು ಪತ್ತೆಯಾದರು. ಅವರಿಗೆ ಎಚ್ಚರಿಕೆ ನೀಡಿ, ಮುಂದೆ ಹೀಗೆ ತ್ಯಾಜ್ಯ ಎಸೆಯದಂತೆ ಮನವರಿಕೆ ಮಾಡಲಾಗಿದೆ. ಮುಂದೆಯೂ ಪುನರಾವರ್ತನೆ ಆದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಸಾವಿರ ಡಬ್ಬಿ ಹಂಚಿಕೆ
ತ್ಯಾಜ್ಯವನ್ನು ವಿಂಗಡಿಸಿ ನೀಡದೇ ಇರುವುದೇ ತ್ಯಾಜ್ಯ ವಿಲೇವಾರಿಗೆ ದೊಡ್ಡ ಹೊಡೆತ. ಇದನ್ನು ನಿವಾರಿಸುವ ಉದ್ದೇಶದಿಂದ ಹಿಂದಿನ ಆಡಳಿತದ ಸಂದರ್ಭ 11 ಸಾವಿರದಷ್ಟು ಡಸ್ಟ್‌ ಬಿನ್‌ಗಳನ್ನು ತರಿಸಿಕೊಳ್ಳಲಾಗಿತ್ತು. ಪ್ರತಿ ಮನೆ, ಅಂಗಡಿಗಳಿಗೆ ಇವನ್ನು ಹಂಚುವ ಉದ್ದೇಶವನ್ನು ಇಟ್ಟುಕೊಳ್ಳಲಾಗಿತ್ತು. ಇದುವರೆಗೆ 1 ಸಾವಿರದಷ್ಟು ಡಸ್ಟ್‌ಬಿನ್‌ ಗಳನ್ನು ಮಾತ್ರ ಹಂಚಲಾಗಿದೆ. ಉಳಿದ 10 ಸಾವಿರದಷ್ಟು ಡಸ್ಟ್‌ಬಿನ್‌ಗಳು ಇನ್ನೂ ನಗರಸಭೆ ಗೋಡೌನ್‌ನಲ್ಲೇ ಇದೆ. ಪ್ರತಿ ಮನೆಗೆ ಎರಡು ಡಸ್ಟ್‌ಬಿನ್‌ ಗಳನ್ನು ನೀಡಲಾಗುತ್ತಿದೆ. ಹಸಿ ಹಾಗೂ ಒಣ ಕಸವನ್ನು ಪ್ರತ್ಯೇಕಿಸಿ ನೀಡಬೇಕು. ಆಗ ಹಸಿ ಕಸವನ್ನು ಗೊಬ್ಬರವಾಗಿ ರ್ಬಳಕೆ ಮಾಡಬಹುದು. ಒಣ ಕಸಗಳನ್ನು ಸಂಗ್ರಹಿಸಿ ಪುನರ್ಬಳಕೆ ವಸ್ತುವಾಗಿ ರೂಪಾಂತರ ಮಾಡಬಹುದು ಎಂಬ ಆಲೋಚನೆ ಇದೆ. ಆದರೆ ಡಸ್ಟ್‌ಬಿನ್‌ ಹಂಚಿಕೆಯಲ್ಲಿ ವಿಳಂಬ ಆಗುತ್ತಿರುವುದರಿಂದ, ತ್ಯಾಜ್ಯ ಪುನರ್ಬಳಕೆ ವಿಚಾರವೂ ಗಗನಕುಸುಮವೇ ಆಗುತ್ತಿದೆ. ತ್ಯಾಜ್ಯ ಸಮಸ್ಯೆಯನ್ನು ಸಮರ್ಥ ವಾಗಿ ಹತ್ತಿಕ್ಕಬೇಕಾದರೆ, ಕೆಲಸಗಳು ಸಮರ್ಥವಾಗಿ ನಡೆಯಬೇಕು. ಡಸ್ಟ್‌ಬಿನ್‌ಗಳನ್ನು ಹಂಚಿಕೆ ಮಾಡಿ, ಸೂಕ್ತ ರೀತಿಯಲ್ಲಿ ತ್ಯಾಜ್ಯ ಸಂಗ್ರಹಕ್ಕೆ ಶೀಘ್ರ ಕ್ರಮ ಕೈಗೊಂಡರೆ ಉತ್ತಮ.

ಡಬ್ಬಿ ತೆರವು
ಪುತ್ತೂರು ನಗರಸಭೆ ವ್ಯಾಪ್ತಿಯ ಹಲವು ಕಡೆಗಳಲ್ಲಿದ್ದ ತ್ಯಾಜ್ಯ ಡಬ್ಬಿಯನ್ನು ತೆರವು ಮಾಡಲಾಗಿದೆ. ಗುತ್ತಿಗೆದಾರರು ತ್ಯಾಜ್ಯ ಸಂಗ್ರಹ ಮಾಡುತ್ತಿದ್ದರೂ ಕೆಲವರು ಡಬ್ಬಿಗೇ ತ್ಯಾಜ್ಯ ಸುರಿಯುತ್ತಿದ್ದರು. ಇದರಿಂದ ಗುತ್ತಿಗೆದಾರರಿಗೆ ಸ್ವಲ್ಪ ಹಿನ್ನಡೆ ಆದದ್ದು ಸುಳ್ಳಲ್ಲ. ಈ ಹಿನ್ನೆಲೆಯಲ್ಲಿ ತ್ಯಾಜ್ಯ ಡಬ್ಬಿಯನ್ನು ತೆರವು ಮಾಡಲಾಯಿತು. ಆದರೂ ತ್ಯಾಜ್ಯವನ್ನು ಅದೇ ಸ್ಥಳದಲ್ಲಿ ಎಸೆಯಲಾಗುತ್ತಿತ್ತು. ಡಬ್ಬಿ ಇಲ್ಲದ ಕಾರಣ ಜನರು ತ್ಯಾಜ್ಯವನ್ನು ನೆಲಕ್ಕೆಸೆದು ತೆರಳುತ್ತಿದ್ದರು. ಇದನ್ನು ಗಮನಿಸಿದ ನಗರಸಭೆ ಅಧಿಕಾರಿಗಳು ಫ‌ಲಕಗಳನ್ನು ಅಳವಡಿಸಿದ್ದಾರೆ. ಅದುವರೆಗೆ ರಾಶಿ ಬಿದ್ದಿದ್ದ ತ್ಯಾಜ್ಯವನ್ನು ತೆರವು ಮಾಡಿಸಿ, ಮುಂದೆ ಕಸ ಹಾಕದಂತೆ ಸೂಚನೆ ನೀಡಿದ್ದಾರೆ. ಸ್ಥಳದಲ್ಲಿ ದುರ್ನಾತ ಬೀರದಂತೆ ಕ್ರಮ ಕೈಗೊಳ್ಳಲಾಗಿದೆ. ಇದೀಗ ತ್ಯಾಜ್ಯ ಡಬ್ಬಿ ಇದ್ದ ಪ್ರದೇಶದಲ್ಲಿ ಕಸ ಕಾಣಿಸುತ್ತಿಲ್ಲ.

ಎಚ್ಚರಿಕೆ ನೀಡಿದ್ದೇವೆ
ಯಾವೆಲ್ಲ ಪ್ರದೇಶದಲ್ಲಿ ತ್ಯಾಜ್ಯ ರಾಶಿ ಹಾಕಲಾಗುತ್ತಿದೆ ಎಂಬ ಮಾಹಿತಿಯನ್ನು ವಾರ್ಡ್‌ ಸದಸ್ಯರಿಂದ ಪಡೆದುಕೊಳ್ಳಲಾಗಿದೆ. ರಸ್ತೆ ಬದಿ ತ್ಯಾಜ್ಯ ಎಸೆಯುವವರ ಮಾಹಿತಿ ತೆಗೆದುಕೊಂಡು ಎಚ್ಚರಿಕೆಯನ್ನು ನೀಡಿದ್ದೇವೆ. ತ್ಯಾಜ್ಯ ಸಮಸ್ಯೆಯನ್ನು ಪರಿಹಾರ ಮಾಡುವ ಹಿನ್ನೆಲೆಯಲ್ಲಿ ಈಗಾಗಲೇ 1 ಸಾವಿರದಷ್ಟು ಡಸ್ಟ್‌ ಬಿನ್‌ಗಳನ್ನು ಹಂಚಲಾಗಿದೆ. ಒಟ್ಟು 11000ದಷ್ಟು ಡಸ್ಟ್‌ಬಿನ್‌ ತರಿಸಿಕೊಳ್ಳಲಾಗಿತ್ತು.
 - ರೂಪಾ ಶೆಟ್ಟಿ ಪೌರಾಯುಕ್ತೆ, ಪುತ್ತೂರು ನಗರಸಭೆ 

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.