ಬೇಸಗೆಯಲ್ಲಿ ಧೂಳುಮಯ; ಮಳೆಗಾಲದಲ್ಲಿ ಕೆಸರುಮಯ

ಪೇರಡ್ಕ-ಕಾಯರಡ್ಕ ರಸ್ತೆ: ಈ ಭಾಗದಲ್ಲಿ ಸರ್ವಋತುವಿನಲ್ಲೂ ಸಂಚಾರ ದುಸ್ತರ

Team Udayavani, May 17, 2019, 6:00 AM IST

29

ಮಳೆಗಾಲದಲ್ಲಿ ರಸ್ತೆಯಲ್ಲಿಯೇ ನೀರು ನಿಂತು ಕೆಸರುಮಯವಾಗಿರುವುದು

ಕಲ್ಲುಗುಡ್ಡೆ: ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ತಾಲೂಕು ಕೇಂದ್ರ ಕಡಬವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಪೇರಡ್ಕದಿಂದ ಕಾಯರಡ್ಕದವರೆಗೆ ಡಾಮರು ಕಿತ್ತು ಹೋಗಿ ಹೊಂಡ-ಗುಂಡಿಗಳು ನಿರ್ಮಾಣವಾಗಿ ತೀರಾ ಹದಗೆಟ್ಟಿದೆ. ಇಲ್ಲಿ ಸರ್ವಋತುವಿನಲ್ಲೂ ಸಂಚಾರ ಕಷ್ಟಕರವಾಗಿದೆ. ಹಲವು ವರ್ಷಗಳಿಂದ ದುರಸ್ತಿಯಾಗದ ಈ ರಸ್ತೆಯ ಪೂರ್ಣ ಪ್ರಮಾಣದ ದುರಸ್ತಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಪತ್ಬಂಧವ ರಸ್ತೆ
ಈ ರಸ್ತೆ ಹೊಂಡಗುಂಡಿಗಳಿಂದ ಕೂಡಿದ್ದರೂ, ಅಪತ್ಬಂಧವ ರಸ್ತೆಯೂ ಹೌದು. ಕಳೆದ ಮಳೆಗಾಲದಲ್ಲಿ ಹೊಸ ಮಠ ಸೇತುವೆ ಸುಮಾರು 1 ತಿಂಗಳು ಮುಳುಗಡೆಗೊಂಡ ಸಂದರ್ಭ ಮಂಗಳೂರು ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಪ್ರಯಾಣಿಸುವ ವಾಹನ, ಶಾಲಾ ಕಾಲೇಜು ವಾಹನ, ಸರಕಾರಿ ಬಸ್ಸುಗಳು ಈ ರಸ್ತೆಯ ಮೂಲಕವೇ ಸಂಚರಿಸಿದ್ದು ಆಪದಾºಂಧವ ಎನಿಸಿ ಕೊಂಡಿದೆ. ಅಲ್ಲದೆ, ಕಡಬದಿಂದ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯಹೆದ್ದಾರಿ ಹಾಗೂ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸಲು ಈ ರಸ್ತೆ ಸುಲಭ ದಾರಿಯಾಗಿದೆ.

ಗ್ರಾಮಸಭೆಗಳಲ್ಲೂ ಪ್ರಸ್ತಾವ
ಈ ರಸ್ತೆಗೆ ಡಾಮರು ಹಾಕುವಂತೆ ನೂಜಿಬಾಳ್ತಿಲ, ಕುಟ್ರಾಪಾಡಿ ಗ್ರಾಮಸಭೆಯಲ್ಲೂ ಜನರು ಆಗ್ರಹಿಸಿ ದ್ದರು. ನಿರ್ಣಯ ವನ್ನೂ ಕೈಗೊಳ್ಳಲಾಗಿತ್ತು. ಈ ರಸ್ತೆ ಯನ್ನು ಲೋಕೋ ಪಯೋಗಿ ಇಲಾಖೆಗೆ ಹಸ್ತಾಂತರಿಸಿ ದುರಸ್ತಿ ಗೊಳಿಸುವಂತೆಯೂ ಸಂಬಂಧ ಪಟ್ಟವರಿಗೆ ಮನವಿ ಮಾಡಲಾಗಿತ್ತು.

50 ಲಕ್ಷ ರೂ. ಅನುದಾನ ಮಂಜೂರು
ಕಾಯರಡ್ಕ-ಪೇರಡ್ಕ ರಸ್ತೆ ದುರಸ್ತಿಗೆ ಅನುದಾನ ಲಭ್ಯವಿದ್ದು, ಮರಳು ಹಾಗೂ ನೀರಿನ ಸಮಸ್ಯೆಯಿಂದ ಕಾಮಗಾರಿ ಆರಂಭಿಸಲು ಅಸಾಧ್ಯವಾಗಿದೆ. ಈ ರಸ್ತೆಗೆ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂ. ಅನುದಾನ ಮಂಜೂರುಗೊಂಡಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಅನುದಾನದಲ್ಲಿ ಕಾಯರಡ್ಕ ಜಂಕ್ಷನ್‌ನಿಂದ ಮುಂದಕ್ಕೆ 950 ಮೀಟರ್‌ ಡಾಮರು ಹಾಗೂ ಮುಂದಕ್ಕೆ ಜಿ.ಪಂ. ಮಳೆಹಾನಿ ಅನುದಾನದ 19 ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟ್‌ ಕಾಮಗಾರಿ ನಡೆಸಲಾಗುವುದು. ಕಾಂಕ್ರೀಟ್‌ ಕಾಮಗಾರಿಯನ್ನು ಇನ್ನು ಕೆಲವೇ ದಿನಗಳಲ್ಲಿ ಪ್ರಾರಂಭಿಸಲು ಸೂಚಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸತ್ಯೇಂದ್ರ ಸಾಲಿಯಾನ್‌ ಹಾಗೂ ಕಡಬ ಸಹಾಯಕ ಎಂಜಿನಿಯರ್‌ ಭರತ್‌ ತಿಳಿಸಿದ್ದಾರೆ.

ಧೂಳು, ಕೆಸರು
ತಾಲೂಕು ಕೇಂದ್ರ ಕಡಬದಿಂದ ಕಲ್ಲುಗುಡ್ಡೆಯನ್ನು ಸಂಪರ್ಕಿಸುವ ಈ ಜಿ.ಪಂ. ರಸ್ತೆಯ ಪೇರಡ್ಕದಿಂದ ಕಾಯರಡ್ಕದವರೆಗೆ ಸುಮಾರು 2 ಕಿ.ಮೀ. ತನಕ ತೀರಾ ಹದಗೆಟ್ಟಿದ್ದು, ವಾಹನ ಸವಾರರು ನಿತ್ಯ ನರಕಯಾತನೆ ಪಡುತ್ತಿದ್ದಾರೆ. ಈ ರಸ್ತೆಯು ಬೇಸಿಗೆಯಲ್ಲಿ ಧೂಳುಮಯಗೊಂಡರೆ, ಮಳೆಗಾಲದಲ್ಲಿ ಕೆಸರುಮಯಗೊಂಡು ರಸ್ತೆಯ ಹೊಂಡ-ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಾಯದ ಸ್ಥಿತಿಯನ್ನು ತಂದೊಡ್ಡುತ್ತಿದೆ.

 ಮೂರ್‍ನಾಲ್ಕು ದಿನದಲ್ಲಿ ಪ್ರಾರಂಭ
ತೀರಾ ಹದಗೆಟ್ಟಿರುವ ಕಾಯರಡ್ಕ-ಪೇರಡ್ಕ ರಸ್ತೆಯ ದುರಸ್ತಿ ಕಾರ್ಯವನ್ನು ಮೂರ್‍ನಾಲ್ಕು ದಿನಗಳಲ್ಲಿ ಪ್ರಾರಂಭಿಸಲಾಗುವುದು. ಈ ರಸ್ತೆಗೆ ಲೋಕೋಪಯೋಗಿ ಇಲಾಖೆಯ 50 ಲಕ್ಷ ರೂ. ಅನುದಾನದಲ್ಲಿ ಕಾಯರಡ್ಕ ಜಂಕ್ಷನ್‌ನಿಂದ ಮುಂದಕ್ಕೆ 950 ಮೀ. ಡಾಮರು ಹಾಗೂ ಮುಂದಕ್ಕೆ ಜಿ.ಪಂ.ನ ಮಳೆಹಾನಿ ಅನುದಾನ 19 ಲಕ್ಷ ರೂ.ನಲ್ಲಿ ಕಾಂಕ್ರೀಟ್‌ ಕಾಮಗಾರಿ ನಡೆಸಲಾಗುವುದು.
ಸತ್ಯೇಂದ್ರ ಸಾಲಿಯಾನ್‌, ಎಇಇ, ಪುತ್ತೂರು

–  ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.