ಪಡಿತರ ಚೀಟಿಯ ಇ-ಕೆವೈಸಿ ಕಡ್ಡಾಯ: ಪ್ರಕ್ರಿಯೆ ಬಿರುಸು


Team Udayavani, Aug 2, 2021, 3:10 AM IST

ಪಡಿತರ ಚೀಟಿಯ ಇ-ಕೆವೈಸಿ ಕಡ್ಡಾಯ: ಪ್ರಕ್ರಿಯೆ ಬಿರುಸು

ಪುತ್ತೂರು: ಪಡಿತರ ಚೀಟಿಯ ಇ-ಕೆವೈಸಿ ಅಥವಾ ಆಧಾರ್‌ ದೃಢೀಕರಣ ಕಡ್ಡಾಯವಾಗಿದ್ದು ಆ.10 ರೊಳಗೆ ಕಾಲಾವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪುತ್ತೂರು, ಕಡಬ, ಸುಳ್ಯ ತಾಲೂಕಿನ ಪಡಿತರ ಅಂಗಡಿಗಳಲ್ಲಿ ಪ್ರಕ್ರಿಯೆ ಬಿರುಸು ಪಡೆದುಕೊಂಡಿದೆ.

ಆ.1 ರಿಂದ ಆ.10 ರೊಳಗಿನ ಹತ್ತು ದಿನಗಳ ಅವ ಧಿಯಲ್ಲಿ ಆಧಾರ್‌ ದೃಢೀಕರಣ ಮಾಡಬೇಕು. ಇ-ಕೆವೈಸಿ ಮಾಡದೆ ಇರುವ ಪಡಿತರದಾರರಿಗೆ ಆ ಬಳಿಕ ಪಡಿತರ ಹಂಚಿಕೆ ಸ್ಥಗಿತಗೊಳ್ಳಲಿದೆ. ಹಾಗಾಗಿ ಪಡಿತರ ಫಲಾನುಭವಿಗಳು ದೃಢೀಕರಣಕ್ಕೆ ಆಸಕ್ತಿ ತೋರಿದ್ದಾರೆ. ದೃಢೀಕರಣಕ್ಕಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಶುಲ್ಕ ಪಾವತಿ ಮಾಡಬೇಕಾಗಿಲ್ಲ.

ಎಪಿಎಲ್‌, ಬಿಪಿಎಲ್‌ ಹಾಗೂ ಅಂತ್ಯೋ ದಯ ಪಡಿತರ ಚೀಟಿ ಹೊಂದಿರುವ ಕುಟುಂಬಸ್ಥರು ನ್ಯಾಯ ಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಬೇಕು. ಇ-ಕೆವೈಸಿ ನೀಡುವಾಗ ಜಾತಿಪತ್ರದ ದೃಢಪತ್ರದ ಪ್ರತಿ, ಅನಿಲ ಸಂಪರ್ಕದ ವಿವರ ಮತ್ತು ಆಧಾರ್‌ ಸಂಖ್ಯೆಗೆ ನೋಂದಾಯಿಸಿದ ಮೊಬೈಲ್‌ ಸಂಖ್ಯೆಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.

ಇ-ಕೆವೈಸಿ ಪದ್ಧತಿಯು ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಮೂಲಕ ಲಭ್ಯವಿರುತ್ತದೆ. ಪಡಿತರ ಚೀಟಿಯಲ್ಲಿ ಹೆಸರಿರುವ ಕೆಲವು ಸದಸ್ಯರು ವಿದೇಶದಲ್ಲಿದ್ದರೆ, ಅಥವಾ ನಿಧನರಾಗಿದ್ದರೆ ಅಂತಹ ಹೆಸರನ್ನು ಪಡಿತರ ಚೀಟಿಯಲ್ಲಿ ಇ-ಕೆವೈಸಿ ಮಾಡಲು ಅಸಾಧ್ಯವಾಗುತ್ತದೆ ಮತ್ತು ಅಂತಹ ಕಾರ್ಡ್‌ಗಳಿಗೆ ಪಡಿತರ ಸಾಮಗ್ರಿ ಕಡಿತವಾಗಲಿದೆ.

ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ ಇಲಾಖೆ ಮೂಲಕವೇ ಇ- ಕೆವೈಸಿ ಪದ್ಧತಿಯನ್ನು ದಾಖಲು ಮಾಡ ಲಾಗುತ್ತದೆ. ಹಾಗಾಗಿ ಕುಟುಂಬ ಸದಸ್ಯರು ಪ್ರತ್ಯೇಕವಾಗಿ ಆಹಾರ ಇಲಾಖೆಗೆ ಭೇಟಿ ನೀಡಬೇಕಿಲ್ಲ. ಕೆವೈಸಿ ಮಾಡಲು ಕುಟುಂಬದ ಪ್ರತಿಯೊಂದು ಸದಸ್ಯರು ಹಾಜ ರಾಗಬೇಕು ಹಾಗೂ ಆಧಾರ್‌ ಬೆರಳಚ್ಚು (ಬಯೋಮೆಟ್ರಿಕ್‌) ಅಪ್‌ಡೇಟ್‌ ಆಗಿರಬೇಕು. ಆಧಾರ್‌ ಅಪ್‌ಡೇಟ್‌ ಆಗದಿದ್ದರೆ ಪಡಿತರ ಚೀಟಿಯಲ್ಲಿ ಇ-ಕೆವೈಸಿ ಮಾಡಲು ಆಗುವುದಿಲ್ಲ. ಆಗಲಿಲ್ಲ ಎಂದಾದರೆ ಆಧಾರ್‌ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್‌ ಮತ್ತೆ ಮಾಡಿ ಬಳಿಕ ಆ ಆಧಾರ್‌ ಅಪ್ಡೆàಟ್‌ ಆದ ನಂತರ ಮತ್ತೆ ಪಡಿತರ ಅಂಗಡಿಗೆ ಬಂದು ಇ-ಕೆವೈಸಿ ಮಾಡಬಹುದು.

ಹೊಸದಾಗಿ ಅಂಚೆ ಮೂಲಕ ಪಡಿತರ ಚೀಟಿ ಪಡೆದವರು ಹಾಗೂ ಈಗಾಗಲೇ ಇ-ಕೆವೈಸಿ ಆಗಿರುವ ಕಾರ್ಡುದಾರರು ಮತ್ತೂಮ್ಮೆ ಇ-ಕೆವೈಸಿ ಮಾಡುವ ಅಗತ್ಯ ಇರುವುದಿಲ್ಲ. ಸಂಪೂರ್ಣ ಇ-ಕೆವೈಸಿ ಆಗಿದೆಯೇ-ಇಲ್ಲವೇ ತಿಳಿಯಲು ಆಹಾರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪಡಿತರ ಚೀಟಿ ಸಂಖ್ಯೆ ದಾಖಲಿಸಿ ಮಾಹಿತಿ ಪಡೆದು ಕೊಳ್ಳಬಹುದು.

ಮಹಿಳೆ ಹೆಸರಿಗೆ ವರ್ಗ :

ಕೆವೈಸಿ ಮಾಡಿದ ಬಳಿಕ ಪಡಿತರ ಚೀಟಿಯಲ್ಲಿನ ಹಳೆಯ ಫೋಟೋ ಆಧಾರ್‌ ಕಾರ್ಡ್‌ನಲ್ಲಿರುವ ಫೋಟೋಗೆ ಬದಲಾಗುವುದು ಹಾಗೂ ಪಡಿತರ ಚೀಟಿಯ ಮುಖ್ಯಸ್ಥ ಪುರುಷರಾಗಿದ್ದಲ್ಲಿ ಇ-ಕೆವೈಸಿ ಮಾಡಿದ ಬಳಿಕ ಮಹಿಳೆಗೆ ವರ್ಗಾವಣೆಗೊಳ್ಳುತ್ತದೆ. ಮಹಿಳೆ ಇಲ್ಲದ ಪಡಿತರ ಚೀಟಿಗೆ ಮಾತ್ರ ಪುರುಷ ಮುಖ್ಯಸ್ಥನಾಗಿರುತ್ತಾನೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.