ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಬಿಲ್‌ ಪಾವತಿ ಗೊಂದಲ

ಎಟಿಪಿ ಮೆಷಿನ್‌ ನೆಟ್‌ವರ್ಕ್‌ ಸಮಸ್ಯೆ

Team Udayavani, Apr 15, 2020, 1:36 PM IST

ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಬಿಲ್‌ ಪಾವತಿ ಗೊಂದಲ

ಮುಂಡಾಜೆ: ಲಾಕ್‌ಡೌನ್‌ ಆದೇಶದ ಕಾರಣ ಬ್ಯಾಂಕ್‌, ಸಹಕಾರ ಸಂಘ, ಅಂಚೆ ಕಚೇರಿ, ಎಲ್‌ಐಸಿ ಮೊದಲಾದ ಸೇವೆಗಳು ಗ್ರಾಹಕರ ಬಾಕಿ ಪಾವತಿಯ ಅವಧಿಯನ್ನು ವಿಸ್ತರಿಸಿವೆ. ಆದರೆ ಅವಧಿ ವಿಸ್ತರಿಸದಿರುವ ವಿದ್ಯುತ್‌ ಬಿಲ್‌ ಪಾವತಿಗೆ ಈಗ ತೀವ್ರ ಸಮಸ್ಯೆಯಾಗಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಈ ಸಮಸ್ಯೆಯು ಗಂಭೀರವಾಗಿದೆ.

ಪಾವತಿ ವಿಧಾನಗಳು
ಮೆಸ್ಕಾಂ ಕಚೇರಿಗಳ ಎ.ಟಿ.ಪಿ. ಮೆಷಿನ್‌ ಮೂಲಕ, ಪಂಚಾಯತ್‌ ಮಟ್ಟದಲ್ಲಿ ಪ್ರತಿ ತಿಂಗಳಿಗೆ ಒಂದು ಅಥವಾ ಎರಡು ಬಾರಿ, ಪೇಟಿಯಂ ಮೂಲಕ, ಮೆಸ್ಕಾಂ ಟಿ.ಆರ್‌.ಎಂ. ಮೂಲಕ, ಅಂಚೆ ಕಚೇರಿ ಮೂಲಕ ಈ ಹಿಂದೆ ವಿದ್ಯುತ್‌ ಬಿಲ್‌ ಪಾವತಿ ವ್ಯವಸ್ಥೆ ಇತ್ತು. ಇದರಲ್ಲಿ ಹಳ್ಳಿಯ ಜನ ಹೆಚ್ಚು ಅವಲಂಬಿಸುತಿದ್ದುದು ಪಂಚಾಯತ್‌ ಮಟ್ಟದ ಬಿಲ್‌ ಪಾವತಿ ವ್ಯವಸ್ಥೆಯನ್ನು. ಈಗ ಲಾಕ್‌ಡೌನ್‌ ಕಾರಣ ಈ ವ್ಯವಸ್ಥೆಯನ್ನು ನಿಲ್ಲಿಸಲಾಗಿದೆ. ಯಾವಾಗ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವರೋ ಎಂದು ಹೆದರಿರುವ ಬಳಕೆದಾರರು ಬಿಲ್‌ ಕಟ್ಟಲು ಪರದಾಡುತ್ತಿದ್ದಾರೆ.

ಮೆಸ್ಕಾಂ ಕಚೇರಿಯ ಎ.ಟಿ.ಪಿ. ಮೆಷಿನ್‌ಗಳಲ್ಲಿ ಬೆಳಗ್ಗೆ 9ರ ಬಳಿಕ ಮಧ್ಯಾಹ್ನ 12ರ ತನಕ ಬಿಲ್‌ ಪಾವತಿಸಬಹುದು. ಆದರೆ ಇಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು, ನೆಟ್‌ವರ್ಕ್‌ ಕೈಕೊಡು ವುದು ಇತ್ಯಾದಿ ಸಮಸ್ಯೆಗಳು ಎದುರಾ ಗುತ್ತಿವೆ. ಹಳ್ಳಿಯ ಹೆಚ್ಚಿನ ಬಳಕೆದಾರರಿಗೆ ಇದನ್ನು ಬಳಸುವ ವಿಧಾನ ತಿಳಿದಿಲ್ಲ. ಪೇಟಿಯಂ, ಮೆಸ್ಕಾಂ ಟಿ.ಆರ್‌.ಎಂ. ಮೂಲಕ ಪಾವತಿ ಹಳ್ಳಿಯ ಜನತೆಗೆ ಅರ್ಥವಾಗದ ವಿಚಾರವಾಗಿದೆ. ಏಕೆಂದರೆ ಹೆಚ್ಚಿನ ಜನರಲ್ಲಿ ಸ್ಮಾರ್ಟ್‌ಫೋನ್‌ಗಳಿಲ್ಲ. ಇದ್ದರೂ ಪಾವತಿ ವಿಧಾನ ಗೊತ್ತಿಲ್ಲ. ಅಂಚೆ ಕಚೇರಿ ಮೂಲಕ ಪಾವತಿಸಬೇಕಾದರೆ ಕೆಲವು ಕಡೆ ಅಂಚೆ ಕಚೇರಿಗೆ ಹೋಗಿ ಬರಲು ಹತ್ತಿಪ್ಪತ್ತು ಕಿ.ಮೀ.ದೂರವನ್ನು ಕ್ರಮಿಸಬೇಕು. ಅಲ್ಲಿ ಹೋದರೆ ಅಲ್ಲೂ ನೆಟ್‌ವರ್ಕ್‌ನ ಸಮಸ್ಯೆ ಎದುರಾಗುತ್ತಿದ. ಹಾಗಾಗಿ ಎರಡೆರಡು ಬಾರಿ ತೆರಳಬೇಕಾಗಿ ಬರುತ್ತದೆ.

ಮೆಸ್ಕಾಂನವರು ಈ ಸಮಸ್ಯೆಗಳನ್ನು ಅರಿತು ವಿದ್ಯುತ್‌ ಬಳಕೆದಾರರಿಗೆ ಸೂಕ್ತ ವ್ಯವಸ್ಥೆಯನ್ನು ಮಾಡಿ ಗೊಂದಲವನ್ನು ನಿವಾರಿಸುವುದು ಅಗತ್ಯವಾಗಿದೆ ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಹೋಗಿ ಬರಲು ವಾಹನ ವ್ಯವಸ್ಥೆ ಇಲ್ಲ
ಬೆಳಗ್ಗೆ 7ರಿಂದ 12ರ ತನಕ ಸಿಗುವ ಸಮಯದಲ್ಲಿ ಮನೆಯಿಂದ ದೂರದಲ್ಲಿರುವ ವಿದ್ಯುತ್‌ ಬಿಲ್‌ ಪಾವತಿ ಕೇಂದ್ರಗಳಿಗೆ ಹೋಗಿ ಬರಲು ವಾಹನ ವ್ಯವಸ್ಥೆ ಇಲ್ಲ, ಇದರಿಂದ ಬಿಲ್‌ ಪಾವತಿ ಮಾಡಲಾಗುತ್ತಿಲ್ಲ.
– ಡೀಕಯ್ಯ, ವಿದ್ಯುತ್‌ ಬಳಕೆದಾರ, ನೆರಿಯ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.