ಸುಬ್ರಹ್ಮಣ್ಯ: ಕಾಡಾನೆ ಶೋಧ ಮುಂದುವರಿಕೆ
Team Udayavani, Feb 25, 2023, 5:55 AM IST
ಸುಬ್ರಹ್ಮಣ್ಯ: ಕಡಬ ತಾಲೂಕಿನಲ್ಲಿ ಕಾಡಾನೆ ಪತ್ತೆ ಕಾರ್ಯ ಶುಕ್ರವಾರವೂ ಮುಂದುವರಿದಿದೆ. ಆದರೆ ಸಾಕಾನೆಗಳಿಗೆ ವಿರಾಮ ನೀಡಲಾಗಿತ್ತು
ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಕೊಂದ ಬಳಿಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು, ಮಂಗಳವಾರ ಕಾರ್ಯಾಚರಣೆ ಆರಂಭಗೊಂಡಿದ್ದು, ಮೂರನೇ ದಿನ ಕೊಂಬಾರು ಬಳಿಯ ಮಂಡೆಕರದಲ್ಲಿ ಕೃತ್ಯ ಎಸಗಿದ ಕಾಡಾನೆಯನ್ನು ಸೆರೆ ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯಲಾಯಿತು. ಇದರ ಜತೆ ಮುಂಜಾಗ್ರತ ಹಿನ್ನೆಲೆಯಲ್ಲಿ ಅಭಿಮನ್ಯು ಹಾಗೂ ಇನ್ನೊಂದು ಆನೆಯನ್ನೂ ಕರೆದೊಯ್ಯಲಾಗಿದೆ.
ಶುಕ್ರವಾರ ಶಿಬಿರದಲ್ಲಿದ್ದ ಕಾರ್ಯಾಚರಣೆಯ ಮೂರು ಆನೆಗಳಿಗೆ ವಿರಾಮ ನೀಡಲಾಗಿತ್ತು. ಬೆಳಗ್ಗೆ ಮೂರು ಸಾಕಾನೆಗಳನ್ನು ಪೇರಡ್ಕ ಬಳಿಯ ಶಿಬಿರದಿಂದ ನೆಟ್ಟಣದ ಕೇಂದ್ರೀಯ ಮರ ಸಂಗ್ರಹಣ ಘಟಕಕ್ಕೆ ಕರೆದೊಯ್ದು ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಿಬಂದಿ ಕಾಡಾನೆ ಪತ್ತೆ ಕಾರ್ಯ ಮುಂದುವರಿಸಿದ್ದರು.
ನರ್ಸರಿಗೆ ದಾಳಿ
ಗುರುವಾರ ರಾತ್ರಿ ಕಾಡಾನೆ ಲಗ್ಗೆ ಇಟ್ಟ ಪ್ರದೇಶದ ಮಾಹಿತಿ ಪಡೆದ ಆ ಭಾಗದಲ್ಲಿ ಪತ್ತೆ ಕಾರ್ಯಾಚರಣೆ ತಂಡ ತನ್ನ ಕೆಲಸ ಮುಂದುವರಿಸಿ ಕಾಡಾನೆಯ ಇರುವಿಕೆ ಕಂಡುಕೊಳ್ಳುವತ್ತ ಕಾರ್ಯ ಮಾಡಿದೆ ಎಂದು ತಿಳಿದುಬಂದಿದೆ.
ಗುರುವಾರ ರಾತ್ರಿ ಗುಂಡ್ಯದ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ಲಗ್ಗೆ ಇಟ್ಟಿವೆ ಎಂದು ತಿಳಿದುಬಂದಿದ್ದು, ಅಲ್ಲೂ ಪತ್ತೆ ಕಾರ್ಯ ನಡೆಸಲಾಗಿದೆ. ಆದರೆ ಆನೆ ಅಲ್ಲಿಂದ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !