ಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!
Team Udayavani, Jan 23, 2022, 4:26 AM IST
ಉಪ್ಪಿನಂಗಡಿ: ಉದನೆ ಪೇಟೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜ. 21ರಂದು ಬೆಳ್ಳಂಬೆಳಗ್ಗೆ ಒಂಟಿ ಸಲಗ ಓಡಾಟ ನಡೆಸಿದ್ದು, ವಾಹನ ಚಾಲಕರು ಮತ್ತು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.
ಹೆದ್ದಾರಿ ಅಂಚಿನಲ್ಲಿರುವ ಶಿರಾಡಿ ರಕ್ಷಿತಾರಣ್ಯದಿಂದ ಬಂದ ಕಾಡಾನೆ ಉದನೆ ಪೇಟೆಯಿಂದ ತುಸು ದೂರದಲ್ಲಿ ಹೆದ್ದಾರಿಯ ದಾಟಿ ಗುಂಡ್ಯ ಹೊಳೆಯ ಕಡೆಗೆ ಸಂಚರಿಸಿದೆ. ಆನೆ ಹೆದ್ದಾರಿಗೆ ಬರುತ್ತಿದ್ದಂತೆ ದ್ವಿಚಕ್ರ ಮತ್ತು ಘನ ವಾಹನ ಚಾಲಕರು ಅಚ್ಚರಿಗೊಂಡಿದ್ದು, ಸಂಚಾರ ಸ್ಥಗಿತಗೊಳಿಸಿ ಮೊಬೈಲ್ಗಳಲ್ಲಿ ಫೋಟೋ, ವೀಡಿಯೋ ಸೆರೆಹಿಡಿದಿದ್ದಾರೆ.
ವಾಹನ ಸವಾರರು, ಜನರು ಭಯಭೀತರಾಗಿದ್ದರೂ ಆನೆ ಮಾತ್ರ ಏನೂ ಹಾನಿ ಮಾಡದೆ ಗುಂಡ್ಯ ಹೊಳೆ ಕಡೆಗೆ ತನ್ನಪಾಡಿಗೆ ತೆರಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಹಿಂದೆ ಶಿರಾಡಿ, ಪೆರಿಯಶಾಂತಿ, ಉದನೆ ಭಾಗದಲ್ಲಿ ಕಾಡಾನೆಗಳು ಪದೇ ಪದೆ ತೋಟಗಳಿಗೆ ನುಗ್ಗಿ ಹಾನಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು