ಪಿಲಿಗೂಡು ಶಾಲಾ ಆವರಣದಲ್ಲಿ ಕಂಗೊಳಿಸಿದ ಪಚ್ಚೆ ಪೈರು


Team Udayavani, Jul 10, 2019, 5:00 AM IST

s-26

ಬೆಳ್ತಂಗಡಿ: ಎಳವೆಯಿಂದಲೇ ಕೃಷಿಯತ್ತ ಒಲವು ಬೆಳೆಸುವ ಉದ್ದೇಶ ದಿಂದ ತಾ|ನ ಕಣಿಯೂರು ಗ್ರಾ.ಪಂ.ನ ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲೇ ಹೊಲ ಉತ್ತು ಪಚ್ಚೆ ಪೈರು ಹಸನಾಗಿಸಿದ ಯಶೋಗಾಥೆಯಿದು.

ಶಿಕ್ಷಣವನ್ನು ಪ್ರತ್ಯಕ್ಷವಾಗಿ ಅನು ಭವಿಸಿದಾಗ ಜ್ಞಾನ ಸಂಪಾದನೆ ಜತೆಗೆ ಅರಿವು ಮೂಡಿಸಲು ಸಾಧ್ಯ. ಗದ್ದೆ ಎಂದರೆ ಏನು, ಅಕ್ಕಿ ಹೇಗೆ ಸಿದ್ಧವಾಗುತ್ತದೆ ಎಂಬ ಅರಿವಿರದ ಸ್ಥಿತಿ ಮುಂದಿನ ಜನಾಂಗಕ್ಕೆ ಬರಬಾರ ದೆನ್ನುವ ನಿಟ್ಟಿನಲ್ಲಿ ಶಿಕ್ಷಕರು, ಶಾಲಾಭಿ ವೃದ್ಧಿ ಸಮಿತಿ, ಹಳೇ ವಿದ್ಯಾರ್ಥಿಗಳ ಸಲಹೆಯಂತೆ ಶಾಲೆಯಲ್ಲೇ ಗದ್ದೆ ನಿರ್ಮಾಣ ಮಾಡಲಾಗಿದೆ.

ಶಾಲೆಯ 1.54 ಎಕ್ರೆ ಸ್ಥಳಾವಕಾಶ ದಲ್ಲಿ 20 ಸೆಂಟ್ಸ್‌ ಸ್ಥಳದಲ್ಲಿ ಗದ್ದೆ ನಿರ್ಮಿಸಿ ಹೊಸ ಹೆಜ್ಜೆ ಇರಿಸಿದೆ. ಈಗಾಗಲೇ ಅಕ್ಷರ ಕೈತೋಟ ನಿರ್ಮಿಸುವ ಮೂಲಕ 182 ಅಡಿಕೆ ಗಿಡ, 60 ತೆಂಗು ಬೆಳೆದು ತಾ|ಗೆ ಮಾದರಿ ಶಾಲೆ ಎಂಬ ಹೆಗ್ಗಳಿ ಕೆಗೆ ಪಾತ್ರವಾಗಿತ್ತು ಇದೀಗ ಒಂದು ಹೆಜ್ಜೆ ಮುಂದೆ ಬಂದು ಸರಕಾರಿ ಶಾಲೆ ಉನ್ನತಿಗೆ ಹೊಸ ಆಯಾಮ ಬರೆದಿದೆ.

ದಾನಿಗಳ ನೆರವು
20 ಸೆಂಟ್ಸ್‌ ಸ್ಥಳಾವಕಾಶದಲ್ಲಿ 10 ದಿನ ಗಳಲ್ಲಿ ಗದ್ದೆ ಸಿದ್ಧವಾಗಿ ಉತ್ತು, ನೇಜಿ ನೆಡ ಲಾಗಿತ್ತು. ಸ್ಥಳೀಯ ರಾಜಕಮಲ್ ಕನ್‌ಸ್ಟ್ರಕ್ಷನ್‌ ಮಾಲಕರು ಜೆಸಿಬಿಯಿಂದ ಮಣ್ಣು ಹದಾಗೊಳಿಸಿ, ಅಬ್ದುಲ್ ಖಾದರ್‌ ಕೋಡಿ ಯೇಲು ಒದಗಿಸಿದ 100 ಬಟ್ಟಿ ಸೆಗಣಿ, ಚಂದ್ರಾಯ ಆಚಾರ್‌ ನೀಡಿದ 10 ಬ್ಯಾಗ್‌ ಬೂದಿ, ಕೊರಗಪ್ಪ ಪೂಜಾರಿ ನೀಡಿದ ನೇಜಿ ಗದ್ದೆ ಹಚ್ಚ ಹಸುರಾಗುವಲ್ಲಿ ಸಾಕ್ಷಿಯಾಗಿದೆ.

ಪಾಡ್ದನ ಹಾಡು
ಹಿಂದಿನ ಮಾದರಿಯಲ್ಲಿ ಮಹಿಳೆಯ ರಿಂದ ಪಾಡ್ದನ ಹಾಡಿಸಿ, ಗ್ರಾಮ ಪಂಚಾಯತ್‌ ಅಧ್ಯಕ್ಷ ಸುನಿಲ್ ಸಾಲ್ಯಾನ್‌ ಬೇಂಗಾಯಿ ನೇಜಿ ಗದ್ದೆಯಲ್ಲಿ ದೀಪ ಬೆಳಗಿಸಿ ಕೆಲಸಕ್ಕೆ ಚಾಲನೆ ನೀಡಲಾಗಿತ್ತು ಹಳೇ ವಿದ್ಯಾರ್ಥಿಗಳು, ಮಕ್ಕಳು, ಶಿಕ್ಷಕರು, ವಿದ್ಯಾಭಿಮಾನಿಗಳು ಜತೆಗೂಡಿ ನೇಜಿ ನೆಟ್ಟು ಖುಷಿ ಪಟ್ಟರು.

ಗದ್ದೆ ಕಲ್ಪನೆ ಸಾಕಾರ
ಸರಕಾರಿ ಶಾಲೆಯಲ್ಲಿ ಅಧ್ಯಾಪಕರು ತಮ್ಮನ್ನು ತಾವು ತೊಡಗಿಸುವ ಜತೆಗೆ ಸ್ಥಳೀಯರು ಶಾಲೆ ಬೆಳವಣಿಗೆಗೆ ಸಹಕಾರ ನೀಡುತ್ತಾರೆ. ಇವುಗಳು ಶಾಲೆಯ ಕೀರ್ತಿಗೆ ಮಕ್ಕಳು ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸಹಕಾರಿ. ಮಕ್ಕಳು ಗದ್ದೆ ಬೇಸಾಯ ಅನುಭವ ಸಿಗುವ ಸಲುವಾಗಿ, ಭತ್ತ ಹೇಗೆ ಬೆಳೆಯುತ್ತೇವೆ ಎಂಬ ಕಲ್ಪನೆ ಮಕ್ಕಳಿಗೆ ನೀಡುವ ದೃಷ್ಟಿಯಿಂದ ಗದ್ದೆ ಕಲ್ಪನೆ ಸಾಕಾರಗೊಂಡಿದೆ.
– ಲೀಲಾವತಿ ಕೆ., ಪ್ರಭಾರ ಮುಖ್ಯೋಪಾಧ್ಯಾಯಿನಿ

ಕೃಷಿಯೆಡೆಗೆ ಒಲವು
ಎಲ್ಲರ ಸಹಕಾರದಿಂದ ಶಾಲೆಯಲ್ಲಿ ಹೊಸ ಕಲ್ಪನೆ ಅಳವಡಿಸಿದ್ದೇವೆ. ಮಕ್ಕಳು ಇದರ ಪ್ರಯೋಜನ ಪಡೆಯುವುದರೊಂದಿಗೆ ಕೃಷಿಯೆಡೆಗೆ ಒಲವು ಬೆಳೆಸುವ ಸದುದ್ದೇಶ ನಮ್ಮದು. ವಿಮುಖವಾಗುತ್ತಿರುವ ಕೃಷಿ ಕೈಹಿಡಿಯುವ ಜವಾಬ್ದಾರಿ ಮಕ್ಕಳಲ್ಲಿ ಬೆಳೆಸುವುದು ಉದ್ದೇಶ.
– ಇಸ್ಮಾಯಿಲ್, ಅಧ್ಯಕ್ಷರು, ಎಸ್‌.ಡಿ.ಎಂ.ಸಿ.

ಊರಿನವರಿಂದ ಕೊಡುಗೆ

ಸುಮಾರು 15 ಸಾವಿರ ರೂ.ವರೆಗೆ ತಗಲುವ ಖರ್ಚಿನ ಕೆಲಸವನ್ನು ಊರವರು ಉಚಿತವಾಗಿ ಮಾಡಿದ್ದಾರೆ. ಸುಮಾರು 2 ಕ್ವಿಂ.ಅಕ್ಕಿ ನಿರೀಕ್ಷಿಸಲಾಗಿದೆ. ಮಕ್ಕಳು ತಾವೇ ಕೈ ಕೆಸರಾಗಿಸಿ ಬೆಳೆಸಿದ ಪೈರಿನಿಂದ ಬಂದ ಅಕ್ಕಿ ಅನ್ನವಾಗಿಸಿ ಸ್ವಾಧಿಸುವ ತವಕದಲ್ಲಿದ್ದಾರೆ. ಶಿಕ್ಷರ ಅಭಿಪ್ರಾಯದಂತೆ ಸುಮಾರು ಎರಡು ತಿಂಗಳು ಬಿಸಿಯೂಟಕ್ಕೆ ಪ್ರಯೋಜನ ಬರಲಿದೆ. ಹಿಂದಿನ ಸಂಪ್ರದಾಯದಂತೆ ಹೊಸ ಅಕ್ಕಿ ಊಟ ಮಾಡುವ ಅಂಬೋಣ ವ್ಯಕ್ತಪಡಿಸಿದ್ದಾರೆ.

•ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.