ಸುರಿಬೈಲು ಶಾಲೆಯಲ್ಲಿ ಆಂಗ್ಲ ಮಾಧ್ಯಮ
Team Udayavani, Jun 8, 2019, 5:50 AM IST
ಸುರಿಬೈಲು ದ.ಕ. ಜಿ.ಪಂ.ಉನ್ನತೀಕರಿಸಿದ ಹಿ.ಪ್ರಾ. ಶಾಲೆ.
ಬಂಟ್ವಾಳ: ಎಲ್ಲ ದೃಷ್ಟಿಯಿಂದಲೂ ಉನ್ನತಿಯ ಹಾದಿಯಲ್ಲಿ ಸಾಗಿದ, ಉನ್ನತೀಕರಿಸಿದ ನಮ್ಮೂರ ಶಾಲೆ ಎಂದೇ ಹೆಸರು ಗಳಿಸಿರುವ ಸುರಿಬೈಲು ದ.ಕ. ಜಿ.ಪಂ.ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ ಒಂದನೇ ತರಗತಿಯಿಂದ ಈ ಬಾರಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಗೊಂಡಿದೆ.
ಶಾಲೆಯಲ್ಲಿ ಮೂರು ವರ್ಷಗಳ ಹಿಂದೆಯೇ ಎಲ್ಕೆಜಿ – ಯುಕೆಜಿ ಆರಂಭಗೊಂಡಿದ್ದು, ಕಳೆದ ವರ್ಷ 1ರಿಂದ 10ನೇ ತರಗತಿವರೆಗೆ 498 ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದರು. ಕಳೆದ ವರ್ಷ ಒಂದನೇ ತರಗತಿಗೆ 45 ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದು, ಈ ಬಾರಿ ಇಲ್ಲಿಯವರೆಗೆ 49 ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ.
ಮೂಲ ಸೌಕರ್ಯ
ಮೂಲ ಸೌಕರ್ಯಗಳ ಜತೆಗೆ ಶಾಲೆಗೆ ಸ್ವಂತ ಕೊಳವೆಬಾವಿ ಇದ್ದು, ಅದರಿಂದ ಸುಮಾರು 30 ಮನೆಗಳಿಗೆ ನೀರನ್ನೂ ಕೊಡಲಾಗುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆ ಅದರಲ್ಲಿ ನೀರು ಬತ್ತಿ ಹೋಗಿದ್ದು, ಬಳಿಕ ಗ್ರಾಮ ಪಂಚಾಯತ್ನಿಂದ ಕೊಳವೆಬಾವಿ ಕೊರೆಯಲಾಗಿದೆ. ಜತೆಗೆ ಶಾಲೆಯ ಕೈ ತೋಟವೂ ಉತ್ತಮವಾಗಿದ್ದು, ಇತರ ಶಾಲೆಗಳಿಗೆ ಮಾದರಿಯಾಗಿ ಬೆಳೆದಿದೆ.
ಉತ್ತಮ ಬೆಳವಣಿಗೆ
ಭಾರತೀಯ ಪರಂಪರೆ ಹಾಗೂ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಸರಕಾರಿ ಶಾಲೆಗಳು ಮಾಡುತ್ತಿದ್ದು, ಹೀಗಾಗಿ ಸರಕಾರಿ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ಆಂಗ್ಲ ಶಿಕ್ಷಣ ಆರಂಭಗೊಂಡಿರುವುದು ಉತ್ತಮ ಬೆಳವಣಿಗೆ. ಇದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಪೂರಕವಾಗಿದೆ. ಪೋಷಕರು ಖಾಸಗಿ ಶಾಲೆ ಶಿಕ್ಷಣಕ್ಕೆ ಮಾರುಹೋಗದೆ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವ ಪ್ರಯತ್ನ ಮಾಡಬೇಕಿದೆ. – ಎಸ್.ಎಂ. ಅಬೂಬಕ್ಕರ್, ಹೆತ್ತವರು
ಉತ್ತಮ ಸೌಕರ್ಯ
ಶಾಲೆಯಲ್ಲಿ ಎಲ್ಲ ಮೂಲ ಸೌಕರ್ಯಗಳು ಉತ್ತಮವಾಗಿದ್ದು, ಕೆಲವು ದಿನಗಳ ಹಿಂದೆ ಶಾಲೆಯ ಕೊಳವೆ ಬಾವಿಯಲ್ಲಿ ನೀರು ಬತ್ತಿ ಹೋಗಿತ್ತು. ಬಳಿಕ ಗ್ರಾ.ಪಂ.ನಿಂದ ಕೊಳವೆಬಾವಿ ಕೊರೆಯಲಾಗಿದ್ದು, ಪ್ರಸ್ತುತ ನೀರಿನ ಸಮಸ್ಯೆ ನಿವಾರಣೆಯಾಗಿದೆ. ಇಲ್ಲಿಯವರೆಗೆ 49 ವಿದ್ಯಾರ್ಥಿಗಳು ಶಾಲೆಗೆ ಸೇರ್ಪಡೆಗೊಂಡಿದ್ದಾರೆ.
- ಗೋಪಾಲ್ ಬಿ. ಮುಖ್ಯ ಶಿಕ್ಷಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…