ಎಮಾ೯ಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾಥಿ೯ ನೀರಿನಲ್ಲಿ ಮುಳುಗಿ ಸಾವು
Team Udayavani, Dec 3, 2022, 7:15 PM IST
ಮಿತ್ತಬಾಗಿಲು: ಇಲ್ಲಿಯ ಎಮಾ೯ಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾಥಿ೯ಯೋವ೯ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆ ಪದವಿ ಪೂವ೯ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ಈ ದುಘ೯ಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ಯಾಗಿದ್ದಾರೆ.
ಇಂದು ಮಧ್ಯಾಹ್ನ ನಂತರ ಕಾಲೇಜಿಗೆ ರಜೆ ಇದ್ದುದರಿಂದ ತನ್ನ ಸ್ನೇಹಿತರ ಜೊತೆ ಮಿತ್ತೃಬಾಗಿಲು ಗ್ರಾಮದ ಏಳೂವರೆ ಹಳ್ಳ ಎಮಾ೯ಯಿ ಫಾಲ್ಸ್ ಗೆ ಹೋಗಿ, ತೊಟ್ಲ್ಯಾಯಿ ಗುಂಡಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಸಮಯ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಗುಜರಾತನ್ನು ಕಾಂಗ್ರೆಸ್ ಮುಕ್ತ ಮಾಡಿ: ಯೋಗಿ ಆದಿತ್ಯನಾಥ್