ಸಂಗಮ ಸ್ಥಳದಲ್ಲಿ ಮುಕ್ತಿ ಧಾಮಕ್ಕೆ ಶಂಕುಸ್ಥಾಪನೆ 


Team Udayavani, Mar 11, 2018, 5:30 PM IST

11-March-17.jpg

ಉಪ್ಪಿನಂಗಡಿ: ಗಯಾಪದ ಕ್ಷೇತ್ರ, ದಕ್ಷಿಣ ಕಾಶಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಸನ್ನಿಧಿ ಮುಂದೆ, ಸಂಗಮ ತಾಣದಲ್ಲಿ ಮುಕ್ತಿಧಾಮ ನಿರ್ಮಾಣಕ್ಕೆ ಶಂಕು ಸ್ಥಾಪನೆ ಕಾರ್ಯಕ್ರಮ ಮಾ. 9ರಂದು ಜರಗಿತು.

ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ರಘುನಾಥ ರೈ ಶಂಕುಸ್ಥಾಪನೆ ನೆರವೇರಿಸಿದರು. ಆಸ್ತಿಕ ಬಂಧುಗಳ ಅಪರ ಕ್ರಿಯೆ ಸಲುವಾಗಿ ನದಿ ಸಂಗಮದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ಮುಕ್ತಿಧಾಮ ನಿರ್ಮಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ 1 ಕೋಟಿ ರೂಪಾಯಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಭಾರತದ ಉತ್ತರದಲ್ಲಿ ಕಾಶೀ ವಿಶ್ವನಾಥ, ವೀರಭದ್ರ ಸನ್ನಿಧಿಯಿದ್ದು, ಉತ್ತರ ಕಾಶಿಯೆಂದೇ ಪ್ರಸಿದ್ಧಿಯಾಗಿದೆ. ದಕ್ಷಿಣದಲ್ಲಿ ಸಹಸ್ರಲಿಂಗೇಶ್ವರ, ಮಹಾ ಕಾಳಿ, ಕಾಲಭೈರವ ಇದ್ದು ದಕ್ಷಿಣ ಕಾಶಿಯೆಂದೇ ಪ್ರಖ್ಯಾತವಾಗಿದೆ. ಗಂಗೆ- ಯಮುನೆಯವರ ಸಂಗಮವಾಗಿ ಪ್ರಯಾಗವೆಂದು ಉತ್ತರ ಕಾಶಿ ಪ್ರಸಿದ್ಧವಾಗಿದೆ. ಉಪ್ಪಿನಂಗಡಿಯಲ್ಲಿ ಕುಮಾರಧಾರಾ-ನೇತ್ರಾವತಿ ಹಾಗೂ ಗುಪ್ತಗಾಮಿನಿಯಗಿ ಸರಸ್ವತಿ ನದಿ ಹರಿಯುತ್ತಿದ್ದಾಳೆ ಎಂದು ಐಹಿತ್ಯ ಇದ್ದು, ತ್ರಿವೇಣಿ ಸಂಗಮವೆನಿಸಿದೆ. ಭಕ್ತಿ, ಮುಕ್ತಿ ಎರಡನ್ನೂ ಕರುಣಿಸುವ ಸಹಸ್ರಲಿಂಗೇಶ್ವರನ ಸನ್ನಿಧಿ ಸದ್ಗತಿದಾಯಕ ಕ್ರಿಯೆಗಳ ಮೂಲಕ ಮೋಕ್ಷಧಾಮ ವೆನಿಸಿದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಮುಕ್ತಿ ಧಾಮ ನಿರ್ಮಾಣ ಮಾಡಬೇಕು ಎನ್ನುವ ಬಹುಕಾಲದ ಬೇಡಿಕೆ ಈಡೇರುವ ಕಾಲ ಕೂಡಿ ಬಂದಿದೆ ಎಂದರು.

ದೇವಸ್ಥಾನದ ಅರ್ಚಕ ಹರೀಶ್‌ ಉಪಾಧ್ಯಾಯ ಪೂಜಾ ವಿಧಿ-ವಿಧಾನ ನೆರವೇರಿಸಿದರು. ಸಮಿತಿ ಸದಸ್ಯರಾದ ಜಿ. ಕೃಷ್ಣ ರಾವ್‌ ಅರ್ತಿಲ, ಬೆಳ್ಳಿಪ್ಪಾಡಿ ಪ್ರಕಾಶ್‌ ರೈ, ಸೋಮನಾಥ, ರಾಧಾಕೃಷ್ಣ ನಾೖಕ್‌, ಡಾ| ರಾಜಾರಾಮ, ಅನಿತಾ ಕೇಶವ್‌, ಸವಿತಾ ಹರೀಶ್‌, ಮಾಜಿ ಅಧ್ಯಕ್ಷ ಸಂಜೀವ ಗಾಣಿಗ, ಸ್ಥಳೀಯ ಪ್ರಮುಖರಾದ ಯು. ರಾಮ, ಕಂಗ್ವೆ ವಿಶ್ವನಾಥ ಶೆಟ್ಟಿ, ಕೆ. ಗಣೇಶ್‌ ಭಟ್‌ ಎನ್‌. ಉಮೇಶ್‌ ಶೆಣೈ ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಸ್ವಾಗತಿಸಿ, ವ್ಯವಸ್ಥಾಪಕ ವೆಂಕಟೇಶ್‌ ವಂದಿಸಿದರು. ಪ್ರಸಾದ್‌, ದಿವಾಕರ ವಿವಿಧ ಕಾರ್ಯಕ್ರಮ ನಿರೂಪಿಸಿದರು.

ಸಂಗಮ ಸ್ಥಳದಲ್ಲಿ ಮುಕ್ತಿಧಾಮ
ಪ್ರತಿ ವರ್ಷ ಮಳೆಗಾಲ ಆರಂಭವಾದಂತೆ ವರ್ಷದ 4 ತಿಂಗಳು ನೇತ್ರವಾತಿ ಹಾಗೂ ಕುಮಾರಧಾರ ನದಿಗಳು ತುಂಬಿ ಹರಿಯುತ್ತಿದ್ದು, ಎರಡು ನದಿಗಳ ಜೋಡಣೆಯಾಗುವಲ್ಲಿ ಪಿಂಡ ಪ್ರದಾನ ನಡೆಸಿದರೆ ಮೃತರಿಗೆ ಸದ್ಗತಿ ದೊರೆಯುವ ಭಾವನೆಯಿದ್ದು, ಮಳೆಗಾಲದಲ್ಲಿ ಅಲ್ಲಿಗೆ ತೆರಳಲು ತುಂಬಿ ಹರಿಯುತ್ತಿದ್ದ ನದಿಗಳ ನೀರಿನಿಂದ ಅಸಾಧ್ಯವಾಗಿತ್ತು. ಪಿಂಡ ಪ್ರದಾನಕ್ಕೆ ತೆರಳಿದ್ದ ಕೆಲವು ಭಕ್ತರು ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದರು. ಈ ಅಪಾಯ ತಪ್ಪಿಸಲು ಹಾಗೂ ಭಕ್ತರ ನಂಬಿಕೆಯಂತೆ ಪಿಂಡ ಪ್ರದಾನ ನೆರವೇರಿಸಲು ಅನುಕೂಲವಾಗುವಂತೆ ಎರಡು ನದಿಗಳ ಸಂಗಮದಲ್ಲಿ ಈ ಮುಕ್ತಿಧಾಮ ರಚಿಸುವ ಪ್ರಯತ್ನ ನಡೆಸಲಾಗಿದೆ. ಸರಕಾರದ ಅನುದಾನಕ್ಕಾಗಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಈಗಲೂ ಪ್ರಯತ್ನ ಮುಂದುವರಿಸಿದ್ದಾರೆ. ನೀಲಿ ನಕಾಶೆಯನ್ನು ಮುಜರಾಯಿ ಇಲಾಖೆಗೆ ತಲುಪಿಸಲಾಗಿದೆ. ದೇವಸ್ಥಾನದ ಸ್ವಂತ ನಿಧಿ,ಸಾರ್ವಜನಿಕ ದೇಣಿಗೆಯನ್ನು ಮುಕ್ತಿಧಾಮ ಕಾರ್ಯಕ್ಕೆ ಅಣಿಯಾಗಿದ್ದೇವೆ ಎಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರಿಶ್ಚಂದ್ರ ತಿಳಿಸಿದ್ದಾರೆ .

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.