ಪುತ್ತೂರು ಜಾತ್ರೆಗದ್ದೆಯಲ್ಲೇ ದಿನದೂಡುತ್ತಿದೆ ಎಕ್ಸಿಬಿಷನ್‌ ತಂಡ


Team Udayavani, May 3, 2021, 3:20 AM IST

ಪುತ್ತೂರು ಜಾತ್ರೆಗದ್ದೆಯಲ್ಲೇ ದಿನದೂಡುತ್ತಿದೆ ಎಕ್ಸಿಬಿಷನ್‌ ತಂಡ

ಪುತ್ತೂರು: ಜಾತ್ರೆ  ಎಕ್ಸಿಬಿಷನ್‌ಗೆ ಬಂದಿದ್ದ ಹುಣಸೂರು ಮೂಲದ 9 ಕುಟುಂಬಗಳು ಮರಳಿ ಊರಿಗೆ ಹೋಗಲಾಗದೆ, ಸಂಪಾದನೆಯೂ ಇಲ್ಲದೆ ಕಳೆದ 12 ದಿನಗಳಿಂದ ಪುತ್ತೂರು ಮಹಾ ಲಿಂಗೇಶ್ವರ ದೇವಾಲಯದ ಜಾತ್ರೆ ಗದ್ದೆ ಯಲ್ಲಿ ಉಳಿದುಕೊಂಡಿದ್ದು ದಿನ ನಿತ್ಯದ ಜೀವನ ನಿರ್ವಹಣೆಗೆ ಪರದಾಡುವ ಪರಿಸ್ಥಿತಿ ಉಂಟಾಗಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡ ಹೋಬಳಿಯ ಕುಟುಂಬಗಳು ಎಕ್ಸಿಬಿಷನ್‌ ವೃತ್ತಿ ನಡೆಸುತ್ತಿದ್ದು ಪ್ರತೀವರ್ಷ ಊರಿನಿಂದ ಊರಿಗೆ ಜಾತ್ರೆಗಳಿಗೆ ತೆರಳಿ ತೊಟ್ಟಿಲು, ಜಾಯಿಂಟ್‌ವೀಲ್‌ ಸೇರಿದಂತೆ ಹತ್ತಾರು ಆಟೋಟ ಪರಿಕರಗಳನ್ನು ಅಳವಡಿಸಿ ಆದಾಯ ಗಳಿಸುತ್ತಾರೆ. ಕಳೆದ ವರ್ಷ ಲಾಕ್‌ಡ್‌ನ… ಪರಿಣಾಮ ಸಮಾರಂಭಗಳು ನಡೆಯದೆ ಆದಾಯವೇ ಇಲ್ಲದಂತಾಗಿತ್ತು. ಈ ವರ್ಷ ಗಂಗೊಳ್ಳಿ, ಮಂಗಳೂರಿನ ಎರಡು ಕಡೆಗಳಲ್ಲಿ ಪ್ರದರ್ಶನ ಏರ್ಪಡಿಸಿ ಅಲ್ಲಿಂದ ಪುತ್ತೂರು ಜಾತ್ರೆಗೆ ಬಂದಿದ್ದರು. ಇಲ್ಲಿ ಐದು ದಿವಸ ಎಕ್ಸಿಬಿಷನ್‌ ನಡೆಸುವ ಲೆಕ್ಕ ಚಾರದಲ್ಲಿದ್ದರೂ ಕೋವಿಡ್‌ ಮುನ್ನೆ ಚ್ಚರಿಕೆ ಕಾರಣದಿಂದ ಅವಕಾಶ ಸಿಕ್ಕಿ ರಲಿಲ್ಲ. ಅದಾಗ್ಯೂ ಎ. 17ರಂದು ಬ್ರಹ್ಮ ರಥೋತ್ಸವದಂದು ಪ್ರದರ್ಶನ ಏರ್ಪಡಿ ಸಿದ್ದರು. ಎ. 19ರಂದು ಸಂತೆ ಸಹಿತ ಎಲ್ಲ ಬಗೆಯ ವ್ಯವಹಾರಗಳನ್ನು ನಿಲ್ಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತು. ಬಳಿಕ ಲಾಕ್‌ಡೌನ್‌ ಮಾದರಿಯ ಕರ್ಫ್ಯೂ ಜಾರಿಯಾಗಿ ಈ ಕುಟುಂಬಗಳು ಜಾತ್ರೆ ಗದ್ದೆಯಲ್ಲೇ ಉಳಿದಿದೆ. ಅತ್ತ ಮನೆಗೆ ತೆರಳಲಾಗದೆ, ಇತ್ತ ಆದಾಯವು ಇಲ್ಲದೆ ಜೋಪಡಿಯಲ್ಲೇ ಕಾಲ ಕಳೆಯುವಂತ ಸ್ಥಿತಿ ಉಂಟಾಗಿದೆ.

9 ಕುಟುಂಬ :

ತಂಡದಲ್ಲಿ ಒಟ್ಟು 9 ಕುಟುಂಬಗಳಿದ್ದು ಜಾತ್ರೆ ಗದ್ದೆಯಲ್ಲಿ ತಾತ್ಕಾಲಿಕವಾಗಿ ಅಳ ವಡಿಸಿರುವ ಬೇರೆ-ಬೇರೆ ಜೋಪಡಿಯಲ್ಲಿ ವಾಸಿಸುತ್ತಿವೆ. ಒಟ್ಟು 50 ಮಂದಿಗೂ ಮಿಕ್ಕಿ ಜನ ಇದ್ದಾರೆ. 13ಕ್ಕೂ ಅಧಿಕ ಮಕ್ಕಳು, ತುಂಬು ಗರ್ಭಿಣಿ ಕೂಡ ಇಲ್ಲಿದ್ದು ಆದಾಯ ಇಲ್ಲದ ಕಾರಣ ನಿತ್ಯ ಜೀವನ ಸಾಗಿಸುವುದು ಕಷ್ಟವೆನಿಸಿದೆ. ಊಟ, ಉಪಾಹಾರಕ್ಕೆ ವ್ಯವಸ್ಥೆಯಾದರೆ ಹೇಗೋ ಬದುಕು ಕಟ್ಟಿಕೊಳ್ಳಬಹುದು ಎನ್ನುತ್ತಾರೆ ಜೋಪಡಿಯಲ್ಲಿ ಉಳಿದಿರುವ ಮಹಿಳೆ ಶಾಂತಾ ಬಾಯಿ.

ಊರಿಗೆ ಹೋಗುವಂತಿಲ್ಲ  :

ಜಾತ್ರೆಯಿಂದ ಜಾತ್ರೆಗೆ ಸಂಚರಿಸಿ ಪ್ರದರ್ಶನ ಏರ್ಪಡಿಸುವುದೇ ನಮ್ಮ ಕಾಯಕ. ಊರಿಗೆ ಹೋದರೂ ಬದುಕಲು ಬೇಕಾದ ವ್ಯವಸ್ಥೆ ಅಲ್ಲಿಲ್ಲ. ಎಕ್ಸಿಬಿಷನ್‌ ಸಾಮಗ್ರಿಗಳನ್ನು ಕೊಂಡುಹೋಗಲು ಕೆಲವು ಲಾರಿಗಳು ಬೇಕು. ಸಾವಿರಾರು ರೂ.ಬಾಡಿಗೆ ನೀಡಬೇಕು. ಅಷ್ಟು ದುಡ್ಡು ಇಲ್ಲ. ಒಂದು ಕಡೆ ಪ್ರದರ್ಶನ ಏರ್ಪಡಿಸಲು 1 ಲಕ್ಷ ರೂ. ಖರ್ಚು ತಗಲುತ್ತದೆ. ಈ ಬಾರಿ ಒಂದು ದಿನಕ್ಕೆ ಮಾತ್ರ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದ್ದು ಬಾಡಿಗೆ ಮೊತ್ತವು ಬಂದಿಲ್ಲ. ಇನ್ನು ಇಲ್ಲಿಂದ ಇದನ್ನು ಊರಿಗೆ ಕೊಂಡು ಹೋದರೂ ಅಲ್ಲಿ ಸಾಮಗ್ರಿ ಹಾಕಲು ಜಾಗ ಇಲ್ಲ. ಇನ್ನೊಂದು ಜಾತ್ರೆ ಬರುವ ತನಕ ನಮ್ಮದು ಇದೇ ಪಾಡು ಎಂದು ಅಳಲು ತೋಡಿಕೊಂಡರು ಎಕ್ಸಿಬಿಷನ್‌ ಮಾಲಕ ಜಗನ್ನಾಥ.

ಆಹಾರ ವ್ಯವಸ್ಥೆ ಮಾಡಿ :

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಗದ್ದೆಯಲ್ಲಿ ಜಾಗ, ನೀರಿನ ಲಭ್ಯತೆ ಇದೆ. ಹಾಗಾಗಿ ಉಳಿದುಕೊಳ್ಳಲು ಸಮಸ್ಯೆ ಆಗಿಲ್ಲ. ಆದರೆ ನಮಗೆ ನಿತ್ಯ ಆಹಾರದ ವ್ಯವಸ್ಥೆಯ ಚಿಂತೆ ಉಂಟಾಗಿದೆ. ಮಕ್ಕಳು, ಗರ್ಭಿಣಿ ಇದ್ದು ದಿನಸಿ ಸಾಮಗ್ರಿಕೊಂಡು ತರುವಷ್ಟು ಆರ್ಥಿಕ ಶಕ್ತಿ ಇಲ್ಲ. ಈ ಬಗ್ಗೆ ಪುತ್ತೂರಿನ ಅಧಿಕಾರಿಗಳು, ಸಂಘ ಸಂಸ್ಥೆಗಳು ನೆರವು ನೀಡಿದರೆ ಜೀವನ ಸಾಗಿಸಬಹುದು ಎನ್ನುತ್ತಾರೆ ಅಕ್ಕುಬಾಯಿ ಹನಗೋಡ.

ಆಡಳಿತ ಗಮನ ಹರಿಸಬೇಕಿದೆ : ಕೆಲವು ದಿನಗಳಿಂದ ಅಕಾಲಿಕವಾಗಿ ಮಳೆಯಾಗುತ್ತಿದ್ದು ಜೋಪಡಿಯಲ್ಲಿ ವಾಸಿಸುತ್ತಿರುವ ಹಿನ್ನೆಲೆಯಲ್ಲಿ ಈ ಕುಟುಂಬಗಳ ಆರೋಗ್ಯದ ಬಗ್ಗೆಯು ನಿಗಾ ಇರಿಸಬೇಕಿದೆ. ಪುಟ್ಟ ಮಕ್ಕಳು, ಗರ್ಭಿಣಿ, ವಯಸ್ಸಾದವರು ಇದ್ದು ಹೀಗಾಗಿ ಮುನ್ನೆಚ್ಚೆರಿಕೆ ವಹಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ, ಆರೋಗ್ಯ ಇಲಾಖೆ ತತ್‌ಕ್ಷಣ ಗಮನ ಹರಿಸಬೇಕಿದೆ.

 

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.