Farangipete: ಅರಣ್ಯ ಇಲಾಖೆ ವಾಹನ ಡಿಕ್ಕಿ, ಪಾದಚಾರಿ ಸಾವು
ಮೃತ ಪಾದಚಾರಿಯ ಗುರುತು ಪತ್ತೆಯಾಗಿಲ್ಲ
Team Udayavani, Mar 6, 2024, 10:04 PM IST
ಬಂಟ್ವಾಳ: ಫರಂಗಿಪೇಟೆಯಲ್ಲಿ ಪಾದಚಾರಿಗೆ ಢಿಕ್ಕಿಯಾದ ಸರಕಾರಿ ವಾಹನವು ಅರಣ್ಯ ಇಲಾಖೆಗೆ ಸೇರಿದ್ದು ಘಟನೆಯಲ್ಲಿ ಮೃತಪಟ್ಟ ಪಾದಚಾರಿಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನೆಗೆ ಸಂಬಂಧಿಸಿ ಸ್ಥಳೀಯ ನಿವಾಸಿ ಮಹಮ್ಮದ್ ಮುಸ್ತಾಫ್ ಪೊಲೀಸರಿಗೆ ದೂರು ನೀಡಿದ್ದು, ವಾಹನವನ್ನು ಅದರ ಚಾಲಕ ಜಗದೀಶ್ ಗೌಡ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಪಾದಚಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯಲ್ಲಿ ಪಾದಚಾರಿ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದು, ತತ್ಕ್ಷಣ ಅದೇ ವಾಹನದಲ್ಲಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದರೂ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.