ಮನೆಯ ಅಂಗಳವನ್ನೇ ಗದ್ದೆಯಾಗಿಸಿದ ರೈತ

ಒಂದಿಂಚೂ ಬಿಡದೆ ಕೃಷಿಯಲ್ಲಿ ತೊಡಗಿರುವ ರಘುನಾಥ ಸಪಲ್ಯ

Team Udayavani, Sep 26, 2022, 12:10 PM IST

8

ಬಂಟ್ವಾಳ: ಮನೆಯ ಸುತ್ತ ಮುತ್ತಲೂ ಕಾಂಕ್ರೀಟ್‌ ಹಾಕಿ ಭೂಮಿಯನ್ನು ಬರಡಾಗಿಸುವ ಇಂದಿನ ಕಾಲಘಟದಲ್ಲಿ ಕಳ್ಳಿಗೆ ಗ್ರಾಮದ ಹೊಳ್ಳರಬೈಲಿನ ಕೃಷಿಕರೊಬ್ಬರು ಅಂಗಳವನ್ನೇ ಭತ್ತದ ಗದ್ದೆಯನ್ನಾಗಿಸಿ ಮನೆಯ ಸುತ್ತಮುತ್ತಲೂ ತರಕಾರಿ, ಹಣ್ಣು ಹಂಪಲು ಬೆಳೆದು ಮಾದರಿಯಾಗಿದ್ದಾರೆ.

ಕಳ್ಳಿಗೆ ಹೊಳ್ಳರಬೈಲು ನಿವಾಸಿ ರಘುನಾಥ ಸಪಲ್ಯ ಅವರೇ ಕೃಷಿಯಲ್ಲಿ ಹೊಸ ಅಧ್ಯಾಯ ಬರೆಯಲು ಹೊರಟ ರೈತ. ಕೃಷಿ ಪರಂಪರೆಯಿಂದ ಬಂದ ಅವರು ಎಸೆಸೆಲ್ಸಿಗೆ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ತಂದೆ ಉಗ್ಗಪ್ಪ ಸಪಲ್ಯರ ಒಡಗೂಡಿ ಕೃಷಿ ಕಾರ್ಯಕ್ಕೆ ತೊಡಗಿ, ಪ್ರಸ್ತುತ ಮಾದರಿ ಕೃಷಿಕರೆನಿಸಿಕೊಂಡಿದ್ದಾರೆ.

ಮನೆಯ ಅಂಗಳವೂ ಸೇರಿದಂತೆ ಸುಮಾರು 30 ಸೆಂಟ್ಸ್‌ ಜಾಗದಲ್ಲಿ ಭತ್ತದ ಬೇಸಾಯ ಮಾಡಿ ಸುಮಾರು 1 ಕ್ವಿಂಟಾಲ್‌ ಅಕ್ಕಿ ಇಳುವರಿಯಾಗಿ ಪಡೆಯುತ್ತಿದ್ದಾರೆ. ಜತೆಗೆ ಗದ್ದೆಯ ಬದುವಿನ ಜಾಗವನ್ನೂ ಸದ್ಬಳಕೆ ಮಾಡಿಕೊಂಡಿದ್ದು, ಅದರಲ್ಲಿ ಉದ್ದಕ್ಕೆ ಅಲಸಂಡೆ ಗಿಡವನ್ನು ನೆಟ್ಟು ಫಸಲು ಪಡೆಯುತ್ತಿದ್ದಾರೆ. ಜತೆಗೆ ಮನೆಯ ಹಿತ್ತಲಿನಲ್ಲಿ ಬಿರಿಯಾನಿ ಅಕ್ಕಿ(ಭಾಸುಮತಿ)ಯ ಪೈರನ್ನು ಕೂಡ ಬೆಳೆದಿರುವುದು ವಿಶೇಷ.

ಸಾವಯವ ಕೃಷಿಗೆ ಒತ್ತು ನೀಡುವ ಇವರ ಮನೆಯ ಸುತ್ತಲೂ ಸುಮಾರು 50 ನಿಂಬೆ ಗಿಡಗಳು, ಡ್ರಾಗನ್‌ ಫ್ರೂಟ್ಸ್‌, ಮ್ಯಾಂಗೋ ಸ್ಟಿನ್‌, ಲಿಚಿ ಹಣ್ಣು, ಲಕ್ಷ್ಮೀ ಫಲ, ಜಂಬೂ ನೇರಳೆ, ಪಪ್ಪಾಯಿ, ಅಂಬಟೆ ಹೀಗೆ ಅನೇಕ ಗಿಡಗಳಿವೆ. ಹೈಬ್ರಿàಡ್‌ ತಳಿಯ ತೆಂಗು, ಅಡಿಕೆ ಗಿಡಗಳನ್ನೂ ಬೆಳೆಸಿದ್ದಾರೆ. ಪಕ್ಕದಲ್ಲಿ ಹಡಿಲು ಬಿದ್ದ ಗದ್ದೆಯಲ್ಲೂ ಸಾವಯವ ಗೊಬ್ಬರ ಬಳಸಿ ಭತ್ತ ಬೆಳೆದಿದ್ದು, ಸುಮಾರು 25 ಮುಡಿ ಅಕ್ಕಿ ಇಳುವರಿ ತೆಗೆಯುತ್ತಿದ್ದಾರೆ.

ಸಾವಯವ ಕೃಷಿ ಉತ್ತಮ

ರಾಸಾಯನಿಕ ಗೊಬ್ಬರ ಬಳಸು ವುದರಿಂದ ಮಣ್ಣಿನ ಫಲವತ್ತತೆ ಕಡಿಮೆ ಯಾಗುತ್ತಿದ್ದು ನಿರೀಕ್ಷಿತ ಫಸಲು ಪಡೆ ಯಲು ಸಾಧ್ಯವಾಗುತ್ತಿಲ್ಲ. ಆದರೆ ಸಾವಯವ ಕೃಷಿಯಿಂದ ಒಳ್ಳೆಯ ಆದಾಯದೊಂದಿಗೆ ಮಾನಸಿಕ ನೆಮ್ಮದಿ, ದೈಹಿಕ ಆರೋಗ್ಯವೂ ಸಿಗುತ್ತದೆ. ಇದರಿಂದ ನಮ್ಮ ಆರೋಗ್ಯದ ಜತೆಗೆ ಭೂಮಿಯ ಫಸ ಲನ್ನೂ ಕಾಯ್ದುಕೊಂಡಂತಾಗುತ್ತದೆ ಎಂದು ಕೃಷಿಕ ರಘುನಾಥ ಸಪಲ್ಯ ಹೊಳ್ಳರಬೈಲು ಹೇಳುತ್ತಾರೆ.

ಟಾಪ್ ನ್ಯೂಸ್

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.