“ಪುಣ್ಯಕೊಟಿ ರಕ್ಷಣೆಗೆ ಹೋರಾಟ’

ಗೋ ಅಕ್ರಮ ಸಾಗಾಟ ವಿರುದ್ಧ ಪ್ರತಿಭಟನೆ

Team Udayavani, Jul 4, 2019, 5:00 AM IST

11

ಬೆಳ್ತಂಗಡಿ: ಪೊಲೀಸರಿಗೆ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಿದ್ದಲ್ಲಿ ತಾಲೂಕನ್ನು 6 ತಿಂಗಳು ಸಂಘಟಕರ ಕೈಗೆ ನೀಡಿದಲ್ಲಿ ಒಂದೇ ಒಂದು ಗೋವಿನ ಹತ್ಯೆ ಆಗದಂತೆ ತಡೆಯುತ್ತೇವೆ. ಪುಣ್ಯಕೋಟಿ ರಕ್ಷಣೆಯಲ್ಲಿ ನಮ್ಮದು ರಾಜಿ ಇಲ್ಲದ ಹೋರಾಟ ಎಂದು ಬಜರಂಗದಳ ಪ್ರಾಂತ ಸಹ ಸಂಯೋಜಕ ರಘು ಸಕಲೇಶಪುರ ಹೇಳಿದರು.

ಬೆಳ್ತಂಗಡಿ ಮಿನಿ ವಿಧಾನಸೌಧದ ಬಳಿ ಬುಧವಾರ ವಿ.ಹಿಂ.ಪ., ಹಿಂ.ಜಾ.ವೇ., ಬಜರಂಗದಳ, ದುರ್ಗಾವಾಹಿನಿ, ಮಾತೃ ಮಂಡಳಿ ವತಿಯಿಂದ ಗೋ ಅಕ್ರಮ ಸಾಗಾಟ ಕೊನೆಗಾಣಿಸುವಂತೆ ಆಗ್ರಹಿಸಿ ನಡೆದ ಬೃಹತ್‌ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಗೋ ಅಕ್ರಮ ಸಾಗಾಟ, ಅಕ್ರಮ ಕಸಾಯಿಖಾನೆ ತಡೆಗಟ್ಟುವಲ್ಲಿ ಪೊಲೀಸ್‌ ಇಲಾಖೆ ವಿಫಲವಾಗಿದೆ. ಹಟ್ಟಿಯಿಂದ ಗೋ ಕಳವು ಮಾಡುವರಿಗೆ ಗುಂಡಿಕ್ಕಿ ಕೊಲ್ಲುವ ಮೂಲಕ ಭಯೋ ತ್ಪಾದಕ ಎಂದು ಪ್ರಕರಣ ದಾಖಲಿಸಬೇಕು. ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಸಾಗಾಟ ಬಗ್ಗೆ ಹಿಂದೂ ಸಂಘಟನೆಗೆ ಮಾಹಿತಿ ಸಿಕ್ಕಿದರೂ ಪೊಲೀಸ್‌ ಇಲಾಖೆಗೆ ಮಾಹಿತಿ ಸಿಗದಿರುವುದರ ಹಿಂದೆ ಕಮಿ ಷನ್‌, ರಾಜಕೀಯ ಒತ್ತಡ ಗೋಚರಿ ಸುತ್ತಿದೆ. ಈ ಕುರಿತು ಪೊಲೀಸ್‌ ಇಲಾಖೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಹೋರಾಟ ಕಠಿನ ರೂಪ ಪಡೆಯಲಿದೆ ಎಂದು ಎಚ್ಚರಿಸಿದರು.

ವಿ.ಹಿಂ.ಪ. ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್‌ ಧರ್ಮಸ್ಥಳ ಮಾತನಾಡಿ, ತಾ|ನ ವಿವಿಧೆಡೆ ಅಕ್ರಮ ಕಸಾಯಿಖಾನೆಗಳಿದ್ದರೂ ಇದುವರೆಗೆ ಪ್ರಕರಣ ದಾಖಲಿಸಿಲ್ಲ. ಅಕ್ರಮ ವಾಹನಗಳಿಗೆ ಟಿಂಟ್‌ ಅಳವಡಿಸಿ ಗೋ ಸಾಗಾಟ ಮಾಡಿದರೂ ಪ್ರಕರಣ ದಾಖಲಿಸಿಲ್ಲ ಎಂದು ಆರೋಪಿಸಿದರು.

ವಿಹಿಂಪ ತಾ| ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್‌ ಅಗರ್ತ ಮಾತನಾಡಿ, ಜಿಲ್ಲೆ ಯಲ್ಲಿ ಮನೆಯ ಹಟ್ಟಿಯಿಂದಲೇ ಗೋವು ಕಳ್ಳತನವಾಗುತ್ತಿರುವುದು ದುರಂತ. ಇಲಾಖೆ ಗೋಕಳ್ಳರ ಪತ್ತೆಹಚ್ಚಲು ವಿಫಲ ರಾದರೆ ಹಿಂದೂ ಸಂಘಟನೆಗಳೇ ಈ ಕೆಲಸ ಮಾಡಲಿದೆ ಎಂದು ಎಚ್ಚರಿಸಿದರು. ಬಳಿಕ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಮೂಲಕ ಜಿಲ್ಲಾಧಿಕಾರಿಗೆ ಗೋ ಸಾಗಾಟ ತಡೆ ಮತ್ತು ಅಕ್ರಮ ಕಸಾಯಿಖಾನೆ ಪತ್ತೆಹಚ್ಚುವಂತೆ ಆಗ್ರಹಿಸಿ ಮನವಿ ನೀಡಲಾಯಿತು. ವೃತ್ತ ನಿರೀಕ್ಷಕ ಸಂದೇಶ್‌ ಪಿ.ಜಿ. ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಶಾಸಕ ಹರೀಶ್‌ ಪೂಂಜ, ವಿಹಿಂಪ ಜಿಲ್ಲಾ ಉಪಾಧ್ಯಕ್ಷ ತಿಮ್ಮಪ್ಪ ಗೌಡ ಬೆಳಾಲು, ವಿಹಿಂಪ ತಾ| ಅಧ್ಯಕ್ಷ ಪದ್ಮನಾಭ ಶೆಟ್ಟಿಗಾರ್‌, ಬಜರಂಗದಳ ಸಂಯೋಜಕ ರಾಮ್‌ ಪ್ರಸಾದ್‌ ಮರೊಡಿ, ಸಂತೋಷ್‌ ಅತ್ತಾಜೆ, ಗೋರಕ್ಷಾ ಪ್ರಮುಖ್‌ ದಿನೇಶ್‌ ಚಾರ್ಮಾಡಿ, ಜಿ.ಪಂ. ಸದಸ್ಯರಾದ ಕೊರಗಪ್ಪ ನಾಯ್ಕ, ಮಮತಾ ಶೆಟ್ಟಿ, ಸೌಮ್ಯಲತಾ, ಮಾಜಿ ಶಾಸಕ ಪ್ರಭಾಕರ ಬಂಗೇರ, ತಾ| ಬಿಜೆಪಿ ಅಧ್ಯಕ್ಷ ಜಯಂತ್‌ ಕೋಟ್ಯಾನ್‌, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂಪತ್‌ ಬಿ. ಸುವರ್ಣ, ಪ್ರತಾಪ್‌ಸಿಂಹ ನಾಯಕ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.