ಗೋಣಿ ಚೀಲದಲ್ಲಿ ತುಂಬಿಸಿ ಅಕ್ರಮ ಮರಳು ದಂಧೆ
Team Udayavani, May 14, 2019, 5:42 AM IST
ಉಪ್ಪಿನಂಗಡಿ: ನೇತ್ರಾವರಿ ನದಿ ಕಿನಾರೆಯಲ್ಲಿ ಗೋಣಿ ಚೀಲಗಳಲ್ಲಿ ಮರಳು ತುಂಬಿಸಿ ಮಾರಾಟ ಮಾಡುವ ಅಕ್ರಮ ದಂಧೆ ನಿರಂತರವಾಗಿ ನಡೆಯುತ್ತಿರುವ ದೂರುಗಳು ಕೇಳಿ ಬರುತ್ತಿವೆ.
ರಾಷ್ಟ್ರೀಯ ಹೆದ್ದಾರಿ 75ರ ಸನಿಹದಲ್ಲಿರುವ ಮುಗೇರಡ್ಕಕ್ಕೆ ತೆರಳುವ ಹಾದಿಯಲ್ಲಿ ನದಿ ಪಾತ್ರದಿಂದ ದಿನನಿತ್ಯ ಜೀಪು ಹಾಗೂ ಪಿಕಪ್ಗ್ಳಲ್ಲಿ ಈ ಮರಳು ಸಾಗಾಟವಾಗುತ್ತಿದೆ. ದಿನನಿತ್ಯ ಹಗಲು-ರಾತ್ರಿ ಎನ್ನದೆ ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಗೋಣಿ ಚೀಲಕ್ಕೆ ಮರಳು ತುಂಬಿಸಿ ಸಾಗಾಟ ಮಾಡಲಾಗುತ್ತಿದೆ.
ಈ ದಂಧೆಯ ಮೂಲಕ ನಿತ್ಯ 50ಕ್ಕೂ ಅಧಿಕ ವಾಹನಗಳಲ್ಲಿ ಮರಳು ಸಾಗಾಟವಾಗುತ್ತಿದೆ. ಈ ಗೋಣಿ ಚೀಲಗಳಲ್ಲಿ ತುಂಬಿಸಿದ ಮರಳನ್ನು ಬದಲಿ ಜಾಗದಲ್ಲಿ ಸಂಗ್ರಹಿಸಿ ಬಳಿಕ ಘನ ವಾಹನಗಳಲ್ಲಿ ಸಾಗಿಸಲಾಗುತ್ತಿದೆ. ಇಂತಹ ದಂಧೆಯನ್ನು ಬಜತ್ತೂರು ಗ್ರಾಮದ ವಳಾಲು ಮೂಲದ ವ್ಯಕ್ತಿಯೋರ್ವರು ನಡೆಸುತ್ತಿದ್ದಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.
ಚೀಲಗಳಿಗೆ ಮರಳು ತುಂಬಿಸುವ ದೃಶ್ಯ ಕಂಡರೆ ಬಡವರು ಸಣ್ಣಪುಟ್ಟ ಮನೆ ಕಟ್ಟಲು ಮರಳು ಒಯ್ಯುತ್ತಿದ್ದಾರಾ ಎನ್ನುವ ಕನಿಕರ ಹುಟ್ಟಿಕೊಳ್ಳುವಂತೆ ಮಾಡುತ್ತದೆ. ಆದರೆ ಇಲ್ಲಿ ನಡೆಯುತ್ತಿರುವುದು ಅಕ್ರಮ ದಂಧೆ ಎಂಬುದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು