ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಅತ್ಯಾಚಾರ: ಐವರು ಆರೋಪಿಗಳ ಸೆರೆ
Team Udayavani, Aug 1, 2023, 11:14 PM IST
ವಿಟ್ಲ: ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಐವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದರೆ ಮೂಲದ ಪ್ರಸ್ತುತ ಬೆರಿಪದವು ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪೆ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28), ಪೆರುವಾಯಿ ನಿವಾಸಿ ಜಯಪ್ರಕಾಶ್ (38) ಮತ್ತು ಪೆರುವಾಯಿಯ ರಾಜ (25) ಬಂಧಿತರು.
ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದುಕೊಂಡು ಪೈಂಟಿಂಗ್ ಕೆಲಸ ನಿರ್ವಹಿಸುತ್ತಿದ್ದರೆ, ಕಮಲಾಕ್ಷ ಗಾರೆ ಕೆಲಸ, ಸುಕುಮಾರ ಚಾಲಕ ವೃತ್ತಿ ಮಾಡಿಕೊಂಡಿದ್ದ.
ವಿಟ್ಲ ಠಾಣೆಯಲ್ಲಿ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಬಾಲಕಿ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಐವರನ್ನೂ ಬಂಧಿಸಲಾಗಿದೆ.