ನದಿಗಳಲ್ಲಿ ಹರಿವು ಕ್ಷೀಣ; ಸದ್ಯಕ್ಕಿಲ್ಲ ತಲ್ಲಣ

ಸುಳ್ಯ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿತ: ಭವಿಷ್ಯಕ್ಕೆ ಆತಂಕದ ಸಂಕೇತ!

Team Udayavani, Dec 15, 2019, 4:17 AM IST

zx-29

ಸುಳ್ಯ: ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಅಂತರ್ಜಲ ಮಟ್ಟ ಏರಿಕೆ ಹಂತದಲ್ಲಿದ್ದರೂ 2019ರ ಅಕ್ಟೋಬರ್‌ – ನವೆಂಬರ್‌ ತಿಂಗಳ ನಡುವಿನ ಅಂತರ್ಜಲ ಕುಸಿತದ ಅಂಕಿ-ಅಂಶ ನದಿ, ಹೊಳೆ, ಬಾವಿಗಳಲ್ಲಿ ನೀರಿನ ಮಟ್ಟ ಇಳಿಕೆ ಆಗುತ್ತಿರುವುದನ್ನು ದೃಢಪಡಿಸಿದೆ. ಹಾಗಂತ ಕಳೆದ ವರ್ಷ ಡಿಸೆಂಬರ್‌ ತಿಂಗಳಿಗೆ ಹೋಲಿಸಿದರೆ ತಾಲೂಕಿನ ಪ್ರಮುಖ ನದಿಗಳಾದ ಪಯಸ್ವಿನಿ, ಕುಮಾರಧಾರಾದಲ್ಲಿ ಈ ಬಾರಿ ನೀರಿನ ಹರಿವು ಉತ್ತಮ ಸ್ಥಿತಿಯಲ್ಲೇ ಇದೆ. ಅಂತರ್ಜಲ ಮಟ್ಟದ ಕುಸಿತದ ಪ್ರಮಾಣವು ಆತಂಕದ ಸನಿಹದಲ್ಲೆ ಇದೆ ಎನ್ನುವುದು ಕೂಡ ಅಷ್ಟೇ ಗಂಭೀರ ಸಂಗತಿ.

ನಿರಂತರ ಮಳೆ
ಕಳೆದೆರಡು ವರ್ಷಗಳಿಂತ ಈ ವರ್ಷ ಮಳೆ ಪ್ರಮಾಣವು ಹೆಚ್ಚು. ಡಿಸೆಂಬರ್‌(ಕೆಲ ದಿನಗಳು) ತನಕವೂ ಮಳೆ ಸುರಿದಿತ್ತು. ಹೀಗಾಗಿ ನದಿ, ಕೆರೆ, ಬಾವಿ ಸಹಿತ ನೀರಿನ ಮೂಲಗಳಲ್ಲಿ ನೀರಿನ ಸಂಗ್ರಹ, ಹರಿವು ನಿರಂತರವಾಗಿತ್ತು. ಕಳೆದ 15 ದಿನಗಳಿಗೆ ಹೋಲಿಸಿದರೆ ಪಯಸ್ವಿನಿ ನದಿಯಲ್ಲಿ ಹರಿವಿನ ವೇಗ ಕುಂಠಿತವಾಗಿದೆ. ಹೊಳೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಸಣ್ಣ ತೋಡುಗಳಲ್ಲಿ ನೀರಿನ ಹರಿವು ಕ್ಷೀಣಿಸಿದೆ. ಜಲಪಾತಗಳಲ್ಲಿ ಕೂಡ ಸಣ್ಣ ಹರಿವಷ್ಟೇ ಉಳಿದುಕೊಂಡಿದೆ.

ಮರಳಿನ ಕಟ್ಟ
ನಗರಕ್ಕೆ ನೀರೊದಗಿಸುವ ಕಲ್ಲುಮುಟ್ಲು ಬಳಿಯ ಪಯಸ್ವಿನಿ ನದಿ ತೀರದಲ್ಲಿ ನೀರಿನ ಪ್ರಮಾಣ ಉತ್ತಮ ಸ್ಥಿತಿಯಲ್ಲಿದೆ. ಕಳೆದ ವರ್ಷ ಫೆಬ್ರವರಿ ಆರಂಭದಲ್ಲಿ ಮರಳು ಕಟ್ಟ ನಿರ್ಮಿಸಿ ನದಿ ನೀರು ಸಂಗ್ರಹಿಸಲಾಗಿತ್ತು. ಈ ಬಾರಿಯ ಸ್ಥಿತಿ ಕಂಡಾಗ ಪೆಬ್ರವರಿ ಕೊನೆ ತನಕ ಆತಂಕ ಎದುರಾಗದು ಎನ್ನುತ್ತಿದೆ.

ಅಂತರ್ಜಲ, ಮಳೆ ಹೆಚ್ಚಳ
2018ರ ನವೆಂಬರ್‌ ತಿಂಗಳಲ್ಲಿ ಸುಳ್ಯ ತಾಲೂಕಿನಲ್ಲಿ 8.98 ಮೀ. ಇದ್ದ ಅಂತರ್ಜಲ ಮಟ್ಟ 2019ರ ನವೆಂಬರ್‌ನಲ್ಲಿ 7.62 ಮೀ.ನಲ್ಲಿದೆ. ಅಂದರೆ 1.37ರಷ್ಟು ಏರಿಕೆ ಅಂಶ ದಾಖಲಾಗಿದೆ. 2019ರ ಅಕ್ಟೋಬರ್‌ ಮತ್ತು ನವೆಂಬರ್‌ ತಿಂಗಳಲ್ಲಿ ಅಂತರ್ಜಲ ಮಟ್ಟ ಗಮನಿಸಿದರೆ 7.49 ಮೀ. ಮತ್ತು 7.62 ಮೀ.ನಷ್ಟು ದಾಖಲಾಗಿದೆ. ಅಂದರೆ 0.13 ಮೀ.ನಷ್ಟು ಇಳಿಕೆ ಕಂಡಿದೆ. ಮಳೆ ಪ್ರಮಾಣದ ಅಂಕಿ ಅಂಶದಲ್ಲಿ ಕಳೆದ ಮೂರು ವರ್ಷಗಳಿಂದ ಮಳೆ ಪ್ರಮಾಣ ಏರಿಕೆ ಆಗಿರುವುದು ಕಂಡು ಬಂದಿದೆ.

ಸೂಚನೆ ನೀಡಲಾಗಿದೆ
ಈ ವರ್ಷ ಮಳೆ ಹೆಚ್ಚಾಗಿರುವ ಕಾರಣ ನದಿಗಳಲ್ಲಿ ನೀರಿನ ಪ್ರಮಾಣ ಈಗ ಉತ್ತಮ ಸ್ಥಿತಿಯಲ್ಲಿದೆ. ಡಿ.15ರ ಅನಂತರ ಪರಿಸ್ಥಿತಿ ಪರಿಶೀಲಿಸಿ ಅಗತ್ಯವಿರುವ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಜೋಡಿಸಲು ಗ್ರಾ.ಪಂ.ಗಳಿಗೆ ತಾ.ಪಂ.ಮತ್ತು ಜಿ.ಪಂ. ಮೂಲಕ ಸೂಚಿಸಲಾಗಿದೆ. ಈ ವರ್ಷ ಜಲ ಮರುಪೂರಣ, ಇಂಗುಗುಂಡಿ, ಸಣ್ಣ ಕಿಂಡಿ ಕಟ್ಟ ನಿರ್ಮಾಣಕ್ಕೆ ಸಾಕಷ್ಟು ಒತ್ತು ನೀಡಲಾಗಿತ್ತು. ಒಟ್ಟಿನಲ್ಲಿ ನೀರಿನ ಬರ ಬರಲಾರದು ಎನ್ನುವ ನಿರೀಕ್ಷೆ ನಮ್ಮದು. ಅಂತಹ ಸ್ಥಿತಿ ಬಂದರೆ ಎದುರಿಸಲು ಅಗತ್ಯ ತಯಾರಿ ಕೂಡ ಪ್ರಗತಿಯಲ್ಲಿದೆ.
– ಭವಾನಿಶಂಕರ ಎನ್‌. ಇಒ, ತಾ.ಪಂ., ಸುಳ್ಯ

ಮುಖ್ಯಾಂಶಗಳು
·  ವ್ಯಕ್ತಿಗತ ಬೇಡಿಕೆ: 135 ಲೀ. (ದಿನಕ್ಕೆ)
·  ಕೊರತೆ ಪ್ರಮಾಣ: 20ರಿಂದ 25 ಲೀ.
·  ನೀರಿನ ಮೂಲ: ಪಯಸ್ವಿನಿ, ಕುಮಾರಾಧಾರಾ, ಬಾವಿ, ಕೆರೆ, ಕೊಳವೆಬಾವಿ, ನಳ್ಳಿ ಸಂಪರ್ಕ

 ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.