ಕುಂಬ್ರ: ದೇಶಿ ಹೊಟೇಲ್‌ನಲ್ಲಿ ವಿದೇಶಿ ಕರೆನ್ಸಿಗಳ ಮೋಡಿ


Team Udayavani, Oct 17, 2019, 5:01 AM IST

f-15

ರಫೀಕ್‌ ಬಳಿ ಇದೆ 27 ದೇಶಗಳ ನೋಟು ಸಂಗ್ರಹ; ಕ್ಯಾಶ್‌ ಕೌಂಟರ್‌ನಲ್ಲಿ ಜೋಡಣೆ

ಬಡಗನ್ನೂರು: ಕೆಲವರು ವಿಶಿಷ್ಟ ಹವ್ಯಾಸದಿಂದಲೇ ಗುರುತಿಸಿಕೊಳ್ಳುತ್ತಾರೆ. ಅಂಥವರಲ್ಲಿ ಕುಂಬ್ರದ ಅಲ್ರಾಯ ಹೊಟೇಲ್‌ ಮಾಲಕ ರಫೀಕ್‌ ಉಜಿರೋಡಿ ಪ್ರಮುಖರು.

ರಫೀಕ್‌ ವಿದೇಶಿ ಕರೆನ್ಸಿಗಳನ್ನು ಸಂಗ್ರಹಿಸುವ ಹವ್ಯಾಸ ಹೊಂದಿದ್ದು, ಅವರ ಹೊಟೇಲ್‌ನಲ್ಲಿ 27 ದೇಶಗಳ ನೋಟುಗಳು ಕಾಣಸಿಗುತ್ತವೆ. 8 ವರ್ಷಗಳಿಂದ ನೋಟುಗಳನ್ನು ಸಂಗ್ರಹಿ ಸುತ್ತಿರುವ ಅವರು, ಕ್ಯಾಶ್‌ ಕೌಂಟರ್‌ನಲ್ಲಿ ಅಚ್ಚುಕಟ್ಟಾಗಿ ಜೋಡಿಸಿದ್ದಾರೆ.

ವೈವಿಧ್ಯಮಯ ಸಂಗ್ರಹ
ರಫೀಕ್‌ ಅವರ ಬಳಿ ನಮ್ಮ ದೇಶ ಮಾತ್ರವಲ್ಲದೆ, ಸೌದಿ ಅರೇಬಿಯಾ, ಕತಾರ್‌, ಒಮಾನ್‌, ಕುವೈಟ್‌, ಲಿಬಿಯಾ, ಬಹರೈನ್‌, ಭೂತಾನ್‌, ಇರಾನ್‌, ಇರಾಕ್‌, ಸಿರಿಯಾ, ಅಫ್ಘಾನಿಸ್ಥಾನ, ಪಾಕಿಸ್ಥಾನ, ದಕ್ಷಿಣ ಆಫ್ರಿಕಾ, ಚೀನ, ಇಂಡೋನೇಷ್ಯಾ, ಮಲೇಷ್ಯಾ, ಅಮೆರಿಕ, ನೇಪಾಲ, ಬಾಂಗ್ಲಾದೇಶ, ಇಥಿಯೋಪಿಯಾ, ಶ್ರೀಲಂಕಾ, ಫಿಲಿಪ್ಪೀನ್ಸ್‌, ಬ್ರಿಟನ್‌ ಇತ್ಯಾದಿ ದೇಶಗಳ ನೋಟುಗಳಿವೆ.

8 ವರ್ಷಗಳ ಹವ್ಯಾಸ
ರಫೀಕ್‌ ಕುಂಬ್ರದಲ್ಲಿ ಹೊಟೇಲ್‌ ಉದ್ಯಮ ಪ್ರಾರಂಭಿಸಿ 8 ವರ್ಷಗಳು ಕಳೆದಿವೆ. ಉದ್ಯಮಕ್ಕೆ ಕಾಲಿಡುವಾಗಲೇ ನೋಟುಗಳ ಸಂಗ್ರಹದಲ್ಲಿ ತೊಡಗಿದ್ದಾರೆ. ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಸಂದರ್ಭದಲ್ಲಿ ಅಲ್ಲಿನ ಕೆಲವು ನೋಟುಗಳನ್ನು ಅವರು ಸಂಗ್ರಹಿಸಿದ್ದರು.

ಗ್ರಾಹಕರಿಂದ ಸಂಗ್ರಹ
ಕೆಲವು ದೇಶಗಳ ನೋಟುಗಳನ್ನು ಹೊಟೇಲ್‌ಗೆ ಬರುವ ಗ್ರಾಹಕರಿಂದ ಸಂಗ್ರಹಿಸಿದ್ದಾರೆ. ಇತ್ತೀಚೆಗೆ ಚೀನದ ಪ್ರಜೆಯೊಬ್ಬರು ಹೊಟೇಲ್‌ಗೆ ಭೇಟಿ ನೀಡಿದ್ದರು.

ಚೀನ ನೋಟುಗಳಿವೆ
ಸೌದಿ ಅರೇಬಿಯಾ, ಇರಾಕ್‌, ಕುವೈಟ್‌ ಇತ್ಯಾದಿ ದೇಶಗಳ ಕರೆನ್ಸಿಗಳನ್ನು ಸುಲಭದಲ್ಲಿ ಸಂಗ್ರಹಿಸಬಹುದು. ಆದರೆ ಚೀನ, ಇಂಗ್ಲೆಂಡ್‌, ಭೂತಾನ್‌, ಅಫ್ಘಾನಿಸ್ಥಾನ ಇತ್ಯಾದಿ ದೇಶಗಳ ನೋಟುಗಳನ್ನು ಸಂಗ್ರಹಿಸುವುದು ಸುಲಭವಲ್ಲ. ಆದರೆ ರಫೀಕ್‌ ಅವರು ಅದರಲ್ಲಿ ಯಶಸ್ವಿಯಾಗಿದ್ದಾರೆ. ಇನ್ನಷ್ಟು ದೇಶಗಳ ನೋಟುಗಳನ್ನು ಸಂಗ್ರಹಿಸಬೇಕು ಎಂಬ ಆಸೆ ಇದ್ದು, ಪ್ರಯತ್ನಿಸುತ್ತಿದ್ದೇನೆ ಎನ್ನುತ್ತಾರೆ. ನೋಟು ಸಂಗ್ರಹವನ್ನು ನೋಡಿದ ಅವರು ತನ್ನ ದೇಶದ ನೋಟೊಂದನ್ನು ಕೊಟ್ಟು ಹೋಗಿದ್ದಾರೆ.

ರಫೀಕ್‌ ಅವರ ನೋಟು ಸಂಗ್ರಹದ ಹವ್ಯಾಸವನ್ನು ಬಹಳಷ್ಟು ಮಂದಿ ಮೆಚ್ಚಿಕೊಂಡಿದ್ದಾರೆ. ಹೊಟೇಲ್‌ಗೆ ಭೇಟಿ ನೀಡಿದ ಬೇರೆ ಬೇರೆ ರಾಜ್ಯದ, ದೇಶದ ಜನರು ನೋಟುಗಳನ್ನು ಕಂಡು ಖುಷಿಪಟ್ಟಿದ್ದಾರೆ. ತಮ್ಮ ದೇಶದ ನೋಟು ಕಾಣುತ್ತಿಲ್ಲ ಎಂದು ಭಾವಿಸಿದವರು ಅವುಗಳನ್ನು ರಫೀಕ್‌ ಅವರಿಗೆ ಕೊಟ್ಟು ಹೋಗಿದ್ದಾರೆ ಎನ್ನುತ್ತಾರೆ ರಫೀಕ್‌. ಇತ್ತೀಚೆಗೆ ಇವರ ಹೊಟೇಲ್‌ ಕ್ಯಾಶ್‌ ಕೌಂಟರ್‌ ಮೇಲೆ ರಾತ್ರಿ ವೇಳೆ ನವಿಲೊಂದು ಕುಳಿತು ಅಚ್ಚರಿ ಮೂಡಿಸಿತ್ತು. ಆ ದೃಶ್ಯವನ್ನು ಸೆರೆ ಹಿಡಿದು ಸಂಗ್ರಹಿಸಿಟ್ಟುಕೊಂಡಿದ್ದಾರೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.