ಸುಬ್ರಹ್ಮಣ್ಯ: ಶೌಚಾಲಯದಲ್ಲಿ ಬಂಧಿಯಾದ ಚಿರತೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ
Team Udayavani, Feb 3, 2021, 11:17 AM IST
ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿ ಮನೆಯೊಂದರಲ್ಲಿ ಶೌಚಾಲಯದೊಳಗೆ ಚಿರತೆಯೊಂದು ಫೆ.3ರಂದು ಬೆಳಗ್ಗೆ ಬಂಧಿಯಾಗಿದ್ದು, ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬ ಜಯಲಕ್ಷ್ಮಿ ಎಂಬವರ ಮನೆಯ ಟಾಯ್ಲೆಟ್ ಒಳಗಡೆ ನಾಯಿಯನ್ನು ಓಡಿಸಿಕೊಂಡು ಹೋದ ಚಿರತೆಯನ್ನು ಮನೆಯವರು ಬಾಗಿಲು ಹಾಕಿ ಒಳಗಡೆ ಕೂಡಿ ಹಾಕಿದ್ದಾರೆ.
ಇದನ್ನೂ ಓದಿ:ಸುಬ್ರಹ್ಮಣ್ಯ: ನಾಯಿಯನ್ನು ಓಡಿಸಿಕೊಂಡು ನಾಡಿಗೆ ಬಂದ ಚಿರತೆ ಶೌಚಾಲಯದಲ್ಲಿ ಬಂಧಿ!
ಸದ್ಯ ಚಿರತೆ ಹಾಗೂ ನಾಯಿ ಶೌಚಾಲಯದಲ್ಲಿ ಬಂಧಿಯಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ತಂಡ ಹಾಗೂ ಕಡಬ ಪೊಲೀಸರು ಆಗಮಿಸಿ ಕಾರ್ಯಚರಣೆಗೆ ಕ್ರಮ ಕೈಗೊಂಡಿದ್ದಾರೆ. ಅರೆವಳಿಕೆ ತಜ್ಞರನ್ನು ಕರೆಸಿಕೊಂಡಿದ್ದು, ಅರೆವಳಿಕೆ ನೀಡಿ ಹಿಡಿಯಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕೆರಳಿಸದಂತೆ ಮನವಿ: ಚಿರತೆ ಹಾಗೂ ನಾಯಿ ಶೌಚಾಲಯದಲ್ಲಿ ಬಂಧಿಯಾಗಿದ್ದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಆಗಮಿಸಿದ್ದಾರೆ. ಚಿರತೆ ಕೆರಳುವ ಸಂಭವಿರುವುದರಿಂದ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ, ಕೆರಳಿಸದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ದೆಹಲಿಯ ಸೀರಿಯಲ್ ನಟಿಗೆ ಕುಡುಕರಿಂದ ಕಿರುಕುಳ : ಆರೋಪಿಗಳು ಅಂದರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…