“ಅರಣ್ಯಾಧಿಕಾರಿಗಳು ರಾಕ್ಷಸ ಪ್ರವೃತ್ತಿಯಿಂದ ಹೊರಬನ್ನಿ’


Team Udayavani, Oct 1, 2019, 5:00 AM IST

a-33

ಸುಬ್ರಹ್ಮಣ್ಯ: ಭಾಗಿಮಲೆ ಮೀಸಲು ಅರಣ್ಯದಲ್ಲಿ ನಡೆದ ಮರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಅರಣ್ಯ ಇಲಾಖೆಯ ಅಧಿಕಾರಿಗಳು ತಮ್ಮ ಸಿಬಂದಿಯ ರಕ್ಷಣೆಗೆ ನಿಂತಿದ್ದು, ಇದಕ್ಕಾಗಿ ಅಮಾಯಕ ಯುವಕ ಲೋಕೇಶ್‌ ಅವರನ್ನು ಬಲಿಪಶು ಮಾಡಿರುವುದು ಖಂಡನೀಯ. ಇದೊಂದು ಗಂಭೀರ ಪ್ರಕರಣವಾಗಿದ್ದು, ನ್ಯಾಯ ಸಿಗುವ ತನಕ ಹೋರಾಟ ಕೈ ಬಿಡುವುದಿಲ್ಲ. ಅರಣ್ಯಾಧಿಕಾರಿಗಳು ರಾಕ್ಷಸ ಪ್ರವೃತ್ತಿಯಿಂದ ಹೊರಬಂದು ಮನುಷ್ಯತ್ವದಿಂದ ವರ್ತಿಸುವಂತೆ ದಲಿತ ಮುಖಂಡ ಆನಂದ ಮಿತ್ತಬೈಲ್‌ ಆಗ್ರಹಿಸಿದರು.

ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಲೋಕೇಶ್‌ ಕಾಪಾರು ಅವರ ಮೇಲೆ ಸುಳ್ಳು ಆಪಾದನೆ ಹೊರಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಬಿಳಿನೆಲೆ ಅರಣ್ಯ ರಕ್ಷಕ ಅಶೋಕ್‌ ಅವರನ್ನು ಅಮಾನತುಗೊಳಿಸಲು ಒತ್ತಾಯಿಸಿ ಕೊಂಬಾರು ಗ್ರಾಮಸ್ಥರು ನ್ಯಾಯಪರ ಸಂಘಟನೆಗಳ ಬೆಂಬಲದೊಂದಿಗೆ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ಕಚೇರಿ ಮುಂದೆ ಸೋಮವಾರ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಬಡಪಾಯಿ ಮೇಲೆ ದಬ್ಟಾಳಿಕೆ
ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್‌ ಮಾತನಾಡಿ, ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ನಿಯಮ ಹಾಗೂ ಸಂಯಮ ಮೀರಿ ನಡೆದುಕೊಂಡಿರುವುದು ಸ್ಪಷ್ಟ. ಅಧಿಕಾರ ಇದೆ ಎಂದು ಬಡಪಾಯಿಗಳ ಮೇಲೆ ದಬ್ಟಾಳಿಕೆ ಸರಿಯಲ್ಲ. ಘಟನೆ ಸಂಬಂಧ ಎಲ್ಲ ಮಾಹಿತಿಯನ್ನು ಸಂಗ್ರಹಿಸಿದ್ದೇವೆ. ಮಾನವ ಹಕ್ಕು ಸಹಿತ ನ್ಯಾಯಪರ ವ್ಯವಸ್ಥೆಗಳ ಮೂಲಕ ನ್ಯಾಯ ಪಡೆಯುತ್ತೇವೆ. ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣ ತನಿಖೆ ನಡೆದು ಅಮಾಯಕನಿಗೆ ನ್ಯಾಯ ಸಿಗುವ ತನಕ ಹೋರಾಟ ನಡೆಸುತ್ತೇವೆ ಎಂದರು.

ಅರಣ್ಯ ಸಂರಕ್ಷಣೆ ನಮ್ಮದೂ ಜವಾಬ್ದಾರಿ
ಕೊಂಬಾರು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಶಶಿಧರ್‌ ಬೊಟ್ಟಡ್ಕ ಮಾತನಾಡಿ, ಕೊಂಬಾರು ಜನತೆ ಕಾಡಿನ ಜತೆಯಲ್ಲೆ ಬೆಳೆದು ಬಂದವರು. ಕಾಡಿಗೆ ಬೆಂಕಿ ಬಿದ್ದಾಗ ರಕ್ಷಣೆ ನಡೆಸಿದವರು. ಅರಣ್ಯ ಇಲಾಖೆಗೆ ಇರುವಷ್ಟೆ ಅರಣ್ಯ ಸಂರಕ್ಷಣೆ ಜವಾಬ್ದಾರಿ ನಾಗರಿಕರಾದ ನಮಗೂ ಇದೆ. ಅರಣ್ಯ ರಕ್ಷಣೆಯ ಹೆಸರಿನಲ್ಲಿ ಗ್ರಾಮದ ಅಮಾಯಕರನ್ನು ಬಲಿಪಶು ಮಾಡಲು ಬಿಡುವುದಿಲ್ಲ. ಸಿಬಂದಿಯನ್ನು ರಕ್ಷಿಸಲು ಅಮಾಯಕನನ್ನು ಅಪರಾಧಿಯಾಗಿಸಿದಲ್ಲಿ ತಕ್ಕ ಉತ್ತರ ನೀಡಲು ಸಿದ್ಧ. ನಮ್ಮ ಮೌನ ಮುಂದುವರಿದರೆ ನಾಳೆ ನಮ್ಮೆಲ್ಲರ ಮೇಲೂ ಆರೋಪ ಹೊರಿಸಿ ಜೈಲಿಗೆ ಅಟ್ಟಬಹುದು ಎಂದರು.

ಧರಣಿ ವಾಪಸ್‌
ಸುಬ್ರಹ್ಮಣ್ಯ ಅರಣ್ಯ ಆರ್‌ಎಫ್ಒ ತ್ಯಾಗರಾಜ್‌ ಸ್ಥಳಕ್ಕೆ ಬರುವಂತೆ ಪ್ರತಿಭಟನಕಾರರು ಪಟ್ಟು ಹಿಡಿದರು. ಮಧ್ಯಾಹ್ನದ ವೇಳೆ ಪೊಲೀಸರು ಪ್ರತಿಭಟನಕಾರರ ಜತೆ ಮಾತುಕತೆ ನಡೆಸಿ ಧರಣಿ ನಿರತರಿಂದ ಮನವಿ ಸ್ವೀಕರಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಲುಪಿಸುವುದಾಗಿ ಭರವಸೆ ಇತ್ತರು. ಬಳಿಕ ಧರಣಿ ವಾಪಸ್‌ ಪಡೆಯಲಾಯಿತು. ಅರಣ್ಯ ರಕ್ಷಕ ಅಶೋಕ್‌ ಅವರನ್ನು ಅಮಾನತುಗೊಳಿಸಬೇಕು. ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ 31 ಗ್ರಾಮಸ್ಥರ ಮೇಲೆ ಕಡಬ ಠಾಣೆಯಲ್ಲಿ ಅರಣ್ಯ ಇಲಾಖೆ ಸಿಬಂದಿ ನೀಡಿದ ದೂರು ವಾಪಸ್‌ ಪಡೆಯುವಂತೆ ಮನವಿಯಲ್ಲಿ ಒತ್ತಾಯಿಸಲಾಗಿತ್ತು.

ಪ್ರತಿಭಟನೆಯಲ್ಲಿ ಕ.ದ.ಸ.ಸ. ಸಮಿತಿಯ ಗಣೇಶ್‌ ಗುರಿಕಾನ, ಕಡಬ ತಾಲೂಕು ದಲಿತ ಸಂಘಟನೆಯ ಉಮೇಶ್‌ ಕೊಡಿಯಾಳ, ದಲಿತ ಸಂಘದ ಪುಟ್ಟಣ್ಣ ತೋಡಂತಿಲ, ಮಾನವ ಹಕ್ಕು ಹೋರಾಟಗಾರ ಸಂದೇಶ್‌, ಕೊಂಬಾರು ಗೌಡ ಸಂಘದ ಪ್ರಮುಖರಾದ ಕಿಶೋರು ಹೊಳ್ಳಾರ್‌, ಜಾನಿ ಕೊಡಂಕೇರಿ, ಕಿರಣ ಕೊಡಂಕೇರಿ, ಲೊಕೇಶ್‌ ಸರಪಾಡಿ, ಗೋಪಾಲ ಮರುವಂಜಿ, ಮರಿಯಪ್ಪ ಕಾಪಾರು, ವಿಶ್ವನಾಥ ಕಾಪಾರು, ಬಾಲಕೃಷ್ಣ ಹೊಳ್ಳಾರು, ಕೊರಗ ಕೋಲ್ಕಜೆ ಸಹಿತ ಕೊಂಬಾರು ಒಕ್ಕಲಿಗ ಗೌಡ ಸಂಘದವರು, ದಲಿತ ಸಂಘದ ಸದಸ್ಯರು, ಸ್ಥಳೀಯ ನಾಗರಿಕರು, ಊರವರು ಸೇರಿ ನೂರಕ್ಕೂ ಅಧಿಕ ಮಂದಿ ಉಪಸ್ಥಿತರಿದ್ದರು. ಒಕ್ಕಲಿಗ ಗೌಡ ಸಂಘದ ಕಾರ್ಯದರ್ಶಿ ರಾಮಕೃಷ್ಣ ಕೊಂಬಾರು ಸ್ವಾಗತಿಸಿ, ವಂದಿಸಿದರು. ಬೆಳ್ಳಾರೆ ಠಾಣೆಯ ಎಸ್‌ಐ ಈರಯ್ಯ ಹಾಗೂ ಸುಬ್ರಹ್ಮಣ್ಯ ಠಾಣೆಯ ಎಎಸ್‌ಐ ಚಂದಪ್ಪ ಗೌಡ ನೇತ್ರತ್ವದಲ್ಲಿ ಭದ್ರತೆ ಒದಗಿಸಲಾಗಿತ್ತು.

ಸಿಬಂದಿ ಮೇಲೆ ಸಂಶಯ
ಭಾಗಿ ಮಲೆ ಮೀಸಲು ಅರಣ್ಯದಲ್ಲಿ ಎರಡು ಬಾರಿ ಮರ ಕಳ್ಳತನ ಆಗಿದೆ. ಅಂದು ಬೀಟ್‌ ಅರಣ್ಯ ಸಿಬಂದಿ ರಜೆ ಮೇಲೆ ತೆರಳಿದ್ದರು. ಸಿಬಂದಿ ಮರ ಕಳ್ಳತನದಲ್ಲಿ ಭಾಗಿಯಾಗಿರುವ ಸಂಶಯವಿದೆ. ಈ ಕುರಿತು ಪತ್ರಿಕೆಯಲ್ಲಿ ಸಮಗ್ರ ವರದಿ ಬಂದ ತತ್‌ಕ್ಷಣ ಬಣ್ಣ ಬಯಲಾಗುತ್ತದೆ ಎಂದು ಭಾವಿಸಿದ ಅ ಧಿಕಾರಿಗಳು ಲೋಕೇಶ್‌ ಅವರನ್ನು ಸಿಲುಕಿಸಲು ಯೋಜನೆ ಹಾಕಿಕೊಂಡಿದ್ದಾರೆ ಎಂದು ಆನಂದ ಮಿತ್ತಬೈಲು ಹೇಳಿದರು.

ಅಮಾನತುಗೊಳಿಸಿ
ಅರಣ್ಯ ಇಲಾಖೆ ಅಧಿಕಾರಿಗಳ ಉದ್ಧಟತನವನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅಮಾಯಕನ ಮೇಲೆ ಹಲ್ಲೆ ಮಾಡಿದ ಸಿಬಂದಿಯನ್ನು ತತ್‌ಕ್ಷಣ ಅಮಾನತುಗೊಳಿಸಬೇಕು. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ. ಸಾಮಾಜಿಕ ನ್ಯಾಯದಡಿ ಮತ್ತು ಕಾನೂನಿನ ಮೂಲಕ ಹೋರಾಟ ನಡೆಸುತ್ತೇವೆ. ಹೈಕೋರ್ಟ್‌ ತನಕ ಈ ಪ್ರಕರಣವನ್ನು ಒಯ್ಯುತ್ತೇವೆ. ಸಿಬಂದಿಯನ್ನು ಅಮಾನತುಗೊಳಿಸುವ ತನಕ ವಿರಮಿಸುವುದಿಲ್ಲ ಎಂದು ಆನಂದ ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.