ಭಕ್ತಿ ಪಥದಲ್ಲಿ ಮುನ್ನಡೆದಾಗ ವ್ಯಸನಮುಕ್ತಿ: ಡಾ| ಹೆಗ್ಗಡೆ

ಸಮಾಜದಲ್ಲಿ ನೆಮ್ಮದಿಯಿಂದ ಬಾಳಿ ಬದುಕಬಹುದು

Team Udayavani, May 15, 2024, 10:17 AM IST

ಭಕ್ತಿ ಪಥದಲ್ಲಿ ಮುನ್ನಡೆದಾಗ ವ್ಯಸನಮುಕ್ತಿ: ಡಾ| ಹೆಗ್ಗಡೆ

ಬೆಳ್ತಂಗಡಿ: ಯಾವುದೇ ಅಭ್ಯಾಸಗಳು ಆಕಸ್ಮಿಕವಾಗಿ, ಅನಾವಶ್ಯಕವಾಗಿ ಪ್ರಾರಂಭವಾಗುತ್ತದೆ. ಬದುಕು ಹಾಳು
ಮಾಡಿಕೊಳ್ಳಬೇಕೆಂಬ ಭಾವನೆಯಿಂದ ಯಾರು ದುಶ್ಚಟಗಳನ್ನು ಮಾಡುವುದಿಲ್ಲ ಬದಲಿಗೆ ಸುಖ, ಸಂತೋಷ, ಧೈರ್ಯ, ಕೆಲಸ ಮುಂತಾದ ವಿಚಾರಗಳನ್ನು ಸಾಧಿಸಬಹುದೆಂಬ ಭ್ರಮೆಯಿಂದ ಚಟಕ್ಕೆ ಬಲಿ ಬೀಳುತ್ತಾರೆ. ಆಧ್ಯಾತ್ಮದ ಒಲವು ಭಕ್ತಿ ಪಥದಲ್ಲಿ ಮುನ್ನಡೆದಾಗ ವ್ಯಸನಗಳು ಬಾಧಿಸುವುದಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯಪಟ್ಟರು.

ಉಜಿರೆ ಲಾೖಲ ಗ್ರಾಮದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರದಲ್ಲಿ
ನಡೆಯುತ್ತಿರುವ 223ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಮಾತನಾಡಿದರು. ಧಾರ್ಮಿಕವಾಗಿ ಬದುಕುವವರು ಸ್ವಾಭಾವಿಕವಾಗಿ ಸಾತ್ವಿಕರಾಗುತ್ತಾರೆ. ಆಧ್ಯಾತ್ಮಿಕ ಚಿಂತನೆಗಳಿಂದ ಅತ್ಯುತ್ತಮ ವ್ಯಕ್ತಿತ್ವವನ್ನು ಸಾಧಿಸುತ್ತಾರೆ. ಆದುದರಿಂದ ಭಕ್ತಿ ಪಥದಲ್ಲಿ ಮುನ್ನಡೆದು ದುಶ್ಚಟಗಳನ್ನು ತ್ಯಜಿಸಿ ಸಂಸಾರದೊಂದಿಗೆ ಸಮಾಜದಲ್ಲಿ ನೆಮ್ಮದಿಯಿಂದ ಬಾಳಿ ಬದುಕಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಡಾ| ಎಲ್‌.
ಎಚ್‌.ಮಂಜುನಾಥ್‌ ಮಾತನಾಡಿ, ಅಹಂಕಾರವೇ ವ್ಯಸನಕ್ಕೆ ಪ್ರಮುಖ ಕಾರಣ. ಈ ವ್ಯಸನವು ಕುಟುಂಬ, ತನ್ನೊಳಗಿನ ವಿಶ್ವಾಸ, ಭರವಸೆ, ಬದುಕಲು ನಿರ್ನಾಮ ಮಾಡುವುದರ ಜತೆಗೆ ನಮ್ಮ ಅಸ್ತಿತ್ವವನ್ನೇ ಇಲ್ಲದಾಗಿಸುತ್ತದೆ. ಇದನ್ನು ಅರ್ಥ ಮಾಡಿಕೊಂಡು ದೇವರಲ್ಲಿ ಅನುಸಂಧಾನ, ಕುಟುಂಬದಲ್ಲಿ ಒಡನಾಟ, ಮಕ್ಕಳಲ್ಲಿ ಪ್ರೀತಿ, ಗುರುಹಿರಿಯರಿಗೆ ಗೌರವ ಹೊಂದುತ್ತಾ
ಬದಲಾಗಬೇಕೆಂದರು.

ಈ ವಿಶೇಷ 8 ದಿನದ ಶಿಬಿರದಲ್ಲಿ ರಾಜ್ಯದ ವಿವಿಧೆಡೆಯಿಂದ 76 ಶಿಬಿರಾರ್ಥಿಗಳು ಭಾಗವಹಿಸಿದರು. ಕೆ.ಎಸ್‌.ಹೆಗ್ಡೆ ಆಸ್ಪತ್ರೆಯ
ಡಾ| ಶ್ರೀನಿವಾಸ್‌ ಭಟ್‌ ನೇತೃತ್ವದಲ್ಲಿ ಮನೋವೈದ್ಯಕೀಯ ಚಿಕಿತ್ಸೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ
ಚಿಕಿತ್ಸೆಯ ಮೂಲಕ ಯೋಗ ಮತ್ತು ದೈಹಿಕ ಚಟುವಟಿಕೆಗಳು, ಸಲಹಾ ಕಾರ್ಯಕ್ರಮ, ಸಾಂಸ್ಕೃತಿಕ, ಉಪಯುಕ್ತ ವೀಡಿಯೋ
ಪ್ರದರ್ಶನ, ವಿಷಯಾಧಾರಿತ ಪ್ರವಚನ, ನವಜೀವನ ಸಮಿತಿ ಸದಸ್ಯರ ಅನಿಸಿಕೆ, ಆತ್ಮಾವಲೋಕನ, ಕುಟುಂಬದ ದಿನ ಮುಂತಾದ ಕಾರ್ಯಕ್ರಮಗಳ ಮೂಲಕ ಮನಪರಿವರ್ತನೆಗೆ ಆದ್ಯತೆ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್‌ ವಿ.ಪಾçಸ್‌, ಯೋಜನಾಧಿಕಾರಿ ಮಾಧವಗೌಡ, ಶಿಬಿರಾಧಿಕಾರಿಗಳಾದ ದೇವಿಪ್ರಸಾದ್‌ ಸುವರ್ಣ, ಚಿತ್ತರಂಜನ್‌, ಆರೋಗ್ಯ ಸಹಾಯಕರಾದ ನೇತ್ರಾವತಿ, ರಂಜನಾ ಸಣ್ಣಕ್ಕಿರವರು ಸಹಕರಿಸಿರುತ್ತಾರೆ. ಮುಂದಿನ ವಿಶೇಷ ಶಿಬಿರವು ಮೇ 20ರಂದು ನಡೆಯಲಿದೆ ಎಂದು ವೇದಿಕೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.