ಇಂದಿನಿಂದ ಸ್ವಚ್ಛಮೇವ ಜಯತೇ ಆಂದೋಲನ

ಪುತ್ತೂರಿನ ಗ್ರಾಮ ಪಂಚಾಯತ್‌ಗಳಿಂದ 10 ಸಾವಿರಕ್ಕೂ ಅಧಿಕ ಗಿಡಗಳಿಗೆ ಬೇಡಿಕೆ

Team Udayavani, Jun 11, 2019, 5:50 AM IST

b-23

ಪುತ್ತೂರು: ಸ್ವಚ್ಛ ಭಾರತ ಮಿಷನ್‌ (ಗ್ರಾಮೀಣ) ಯೋಜನೆಯಡಿ ಸರಕಾರ ಸ್ವಚ್ಛ ಮೇವ ಜಯತೇ ಆಂದೋಲನವನ್ನು ಜೂ. 11ರಿಂದ ಪ್ರಾರಂಭಿಸಲಿದ್ದು, ಇದರಲ್ಲಿ ಗಿಡಗಳನ್ನು ಬೆಳೆಸುವ ಯೋಜನೆಯೂ ಇರುವುದರಿಂದ ಪುತ್ತೂರಿನ ಗ್ರಾ.ಪಂ.ಗಳು ಸಾಮಾಜಿಕ ಅರಣ್ಯ ಇಲಾಖೆಯಿಂದ 10 ಸಾವಿರಕ್ಕೂ ಅಧಿಕ ಗಿಡಗಳಿಗೆ ಬೇಡಿಕೆ ವ್ಯಕ್ತಪಡಿಸಿದೆ.

ಸೋಮವಾರವೇ ಜಿಲ್ಲೆಗೆ ಮುಂಗಾರು ಪ್ರವೇಶದ ಲಕ್ಷಣಗಳು ಕಂಡುಬರುತ್ತಿರು ವುದರಿಂದ ಗಿಡಗಳನ್ನು ನೆಡುವುದಕ್ಕೆ ಇದು ಸೂಕ್ತ ಸಮಯ ಎನಿಸಿದೆ. ಪ್ರತಿ ಗ್ರಾ.ಪಂ.ಗಳು ಪುತ್ತೂರಿನ ಸಾಮಾಜಿಕ ಅರಣ್ಯ ಇಲಾಖೆಗೆ ಇಮೇಲ್‌ ಮೂಲಕ 500, 200, 100 ಗಿಡಗಳಿಗೆ ಬೇಡಿಕೆ ಸಲ್ಲಿಸಿವೆ.

ಸೋಮವಾರವೇ ಸಾಕಷ್ಟು ಗ್ರಾ.ಪಂ.ಗಳು ಇಲಾಖೆಗೆ ಆಗಮಿಸಿ ತಮ್ಮ ಬೇಡಿಕೆಯಂತೆ ಗಿಡಗಳನ್ನು ಸಾಗಾಟ ನಡೆಸಿವೆ. ಇಲಾಖೆಯ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಫಲಾನುಭವಿಗಳಿಗೆ ಅರಣ್ಯ ಗಿಡ ನಾಟಿ ಮಾಡಲು 6ಗಿ9 ಅಳತೆ ಗಾತ್ರದ ಚೀಲಗಳಲ್ಲಿ ಸುಮಾರು 22,900 ವಿವಿಧ ಜಾತಿಯ ಗಿಡಗಳನ್ನು ಮುಕ್ವೆಯಲ್ಲಿರುವ ಇಲಾಖಾ ನರ್ಸರಿಯಲ್ಲಿ ಬೆಳೆಸಲಾಗಿದ್ದು, ಇದಕ್ಕೆ ವಿಶೇಷ ಪ್ರೋತ್ಸಾಹ ಧನವೂ ಲಭ್ಯವಾಗಲಿದೆ.ವಿವಿಧ ಜಾತಿಯ ಗಿಡಗಳುಇಲಾಖೆಯ ನರ್ಸರಿಯಲ್ಲಿ ಸಾಗುವಾನಿ, ಹಲಸು, ಹೆಬ್ಬಲಸು, ಮಾವು, ಪುನರ್‌ ಪುಳಿ, ಮಹಾಗನಿ, ಸಂಪಿಗೆ, ಕಿರಾಲ್‌ ಬೋಗಿ, ಶ್ರೀಗಂಧ, ರಕ್ತಚಂದನ, ನೇರಳೆ, ಹಾಲ್‌ವುಡ್ಡಿ, ಶಿವಣೆ, ಬಿಲ್ವಪತ್ರೆ, ನೆಲ್ಲಿ, ಸೀತಾಫಲ, ಬಾದಾಮಿ, ಬೇಂಗ, ಕಾಚು, ಔಷಧಿ ಸಸಿಗಳು, ಬೊಲ್ಪಾಲೆ, ರಾಂಪತ್ರೆ, ಹೆಬ್ಬೇವು ಮೊದಲಾದ ಗಿಡಗಳು ಇಲ್ಲಿ ಲಭ್ಯವಿವೆ.

ಇಲಾಖೆಯು ಆಸಕ್ತ ಫಲಾನುಭವಿಗಳಿಗೆ ಉಚಿತವಾಗಿ ಗಿಡಗಳನ್ನು ನೀಡುವುದರ ಜತೆಗೆ ಗಿಡ ನಾಟಿ ಮಾಡುವುದಕ್ಕೆ ಕೂಲಿ ಪಾವತಿ ಕೂಡ ಯೋಜನೆಯಡಿ ಗಿಡ ಒಂದಕ್ಕೆ ಕೂಲಿ ಹಾಗೂ ಸಾಮಗ್ರಿ ವೆಚ್ಚ ಸೇರಿ ಅಂದಾಜು 55 ರೂ.ನಷ್ಟು ಪಾವತಿಯಾಗುತ್ತದೆ (ಹೊಂಡ ತೋಡಿ, ಮಣ್ಣಿನ ಅಗತೆ ಕೆಲಸ, ಗೊಬ್ಬರ ಹಾಕುವುದು ಇತ್ಯಾದಿ).

ನಿರ್ವಹಣ ವೆಚ್ಚವೂ ಸಿಗುತ್ತದೆ
ಉದ್ಯೋಗ ಖಾತರಿ ಯೋಜನೆಯ ಜಾಬ್‌ ಕಾರ್ಡ್‌ ಮಾಡಿಸಿಕೊಂಡವರಿಗೆ ಪ್ರತಿ ಗಿಡಗಳ ನಾಟಿಗೆ 55ರಿಂದ 60 ರೂ. ಸಿಗಲಿದ್ದು, ಬದುಕಿ ಉಳಿದ ಗಿಡಗಳ ನಿರ್ವಹಣೆಗೆ ಮೊದಲ ವರ್ಷ 10.50 ರೂ. ನಿರ್ವಹಣ ವೆಚ್ಚವೂ ಸಿಗಲಿದೆ. ಗ್ರಾ.ಪಂ.ಗಳಿಗೂ ಇದೇ ಯೋಜನೆಯಲ್ಲಿ ಗಿಡಗಳ ನಾಟಿಗೆ ಅವಕಾಶವಿರುವ ಹಿನ್ನೆಲೆಯಲ್ಲಿ, ತಿಂಗಳಪೂರ್ತಿ ವಿವಿಧ ಕಡೆಗಳಲ್ಲಿ ಗಿಡಗಳನ್ನು ನಾಟಿ ಮಾಡುವ ದೃಷ್ಟಿಯಿಂದ ಹೆಚ್ಚಿನ ಗಿಡಗಳಿಗೆ ಬೇಡಿಕೆ ಇದೆ.

ಸ್ಮಾ ಫ್ಸ್ (ಎಸ್‌ಎಂಎಎಫ್‌) ನಲ್ಲೂ ಅವಕಾಶ
ಸಬ್‌ಮಿಷನ್‌ ಆನ್‌ ಆ್ಯಗ್ರೋಫಾರೆಸ್ಟ್ರಿ (ಎಸ್‌ಎಂಎಎಫ್‌) ಯೋಜನೆಯ ಮೂಲಕವೂ ಗಿಡಗಳ ನಾಟಿಗೆ ಅವಕಾಶವಿದ್ದು, 6ಗಿ9 ಅಳತೆಗೆ 1 ರೂ. ಹಾಗೂ 8ಗಿ12 ಅಳತೆಗೆ 3 ರೂ. ಪಾವತಿಸಿ ಫಲಾನುಭವಿಗಳು ಗಿಡಗಳನ್ನು ಪಡೆಯಬಹುದಾಗಿದೆ. ಇದರಲ್ಲಿ ಬೌಂಡರಿ ಪ್ಲಾಟಿಂಗ್‌ಗೆ ಪ್ರತಿ ಗಿಡಕ್ಕೆ 14 ರೂ., ಒಂದು ಹೆಕ್ಟೇರ್‌ನಲ್ಲಿ 100ರಿಂದ 500ರಂತೆ ಪ್ರತಿಗಿಡಕ್ಕೆ 14 ರೂ., ಒಂದು ಹೆಕ್ಟೇರ್‌ನಲ್ಲಿ 500ರಿಂದ 1000ದಂತೆ ಪ್ರತಿ ಗಿಡಕ್ಕೆ 10 ರೂ., ಒಂದು ಹೆಕ್ಟೇರ್‌ನಲ್ಲಿ 1000ದಿಂದ 1200ರಂತೆ ಪ್ರತಿ ಗಿಡಕ್ಕೆ 7 ರೂ. ಪ್ರೋತ್ಸಾಹ ಧನ ಲಭ್ಯವಾಗಲಿದೆ. ಇದರ ನಿರ್ವಹಣೆಗೂ ನಿರ್ವಹಣ ವೆಚ್ಚ ಸಿಗಲಿದೆ.

ಫಲಾನುಭವಿಗಳು ಹೀಗೆ ಮಾಡಿ
ಆಸಕ್ತ ಹಾಗೂ ಅರ್ಹ ಫಲಾನುಭವಿಗಳು ಸಂಬಂಧಿಸಿದ ಗ್ರಾಮ ಪಂಚಾಯತ್‌ಗಳಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಚೀಟಿಯನ್ನು ನೋಂದಾಯಿಸಿಕೊಂಡು ಪೂರ್ಣ ವಿಳಾಸ ಹಾಗೂ ಸ್ಥಳದ ವಿವರಗೊಂದಿಗೆ (ಆರ್‌ಟಿಸಿ, ನಕಾಶೆ ಪ್ರತಿ, ಸಣ್ಣ ರೈತ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ, ಬ್ಯಾಂಕ್‌ ಖಾತೆ ವಿವರ, ಆಧಾರ್‌ ಕಾರ್ಡ್‌ ಪ್ರತಿ ಇತ್ಯಾದಿ) ಸಸಿ ಬೇಡಿಕೆ ವಿವರಗಳನ್ನು ಕಚೇರಿಗೆ ಸಲ್ಲಿಸಿ ಗಿಡಗಳನ್ನು ಇಲಾಖೆಯ ಮುಕ್ವೆ ನರ್ಸರಿಯಿಂದ ಪಡೆದುಕೊಳ್ಳಬಹುದಾಗಿದೆ.

 ಗ್ರಾ.ಪಂ.ನಿಂದ ಬೇಡಿಕೆ
ಇಮೇಲ್‌ ಮೂಲಕ ಸಾಕಷ್ಟು ಗ್ರಾ.ಪಂ.ನಿಂದ ಬೇಡಿಕೆ ಬಂದಿದ್ದು, ಸ್ವತ್ಛ ಮೇವ ಜಯತೇ ಆಂದೋಲನ ತಿಂಗಳ ಪೂರ್ತಿ ನಡೆಯುತ್ತಿರುವುದರಿಂದ ವಿವಿಧ ಸ್ಥಳಗಳಲ್ಲಿ ಗ್ರಾ.ಪಂ. ಗಿಡಗಳನ್ನು ನೆಡಲಿದೆ. ಉದ್ಯೋಗ ಖಾತರಿ ಯೋಜನೆಯ ಮೂಲಕ ಇದಕ್ಕೆ ಪ್ರೋತ್ಸಾಹ ಧನ ಪಡೆಯುವುದಕ್ಕೆ ಅವಕಾಶವಿದೆ.
– ವಿದ್ಯಾರಾಣಿ ಪಿ.ಕೆ. ವಲಯ ಅರಣ್ಯಾಧಿಕಾರಿ, ಸಾಮಾಜಿಕ ಅರಣ್ಯ ವಿಭಾಗ, ಪುತ್ತೂರು

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.