ಅಂತ್ಯಸಂಸ್ಕಾರ ಸಹಾಯಧನ ಸದ್ದಿಲ್ಲದೆ ಸ್ಥಗಿತ!


Team Udayavani, Mar 22, 2022, 7:25 AM IST

Rಅಂತ್ಯಸಂಸ್ಕಾರ ಸಹಾಯಧನ ಸದ್ದಿಲ್ಲದೆ ಸ್ಥಗಿತ!

ಬಂಟ್ವಾಳ: ಬಡತನ ರೇಖೆಗಿಂತ ಕೆಳಗಿರುವವರು ಮೃತಪಟ್ಟಾಗ ಅಂತ್ಯಸಂಸ್ಕಾರಕ್ಕೆಂದು ಸರಕಾರವು ನೀಡುವ 5 ಸಾವಿರ ರೂ. ಮೊತ್ತ ಕೈಸೇರುವಾಗ ವಿಳಂಬವಾಗುತ್ತಿದೆ ಎಂಬ ಆರೋಪದ ಮಧ್ಯೆಯೇ ಸರಕಾರ ಸದ್ದಿಲ್ಲದೆ ಯೋಜನೆಯ ಅರ್ಜಿ ಸ್ವೀಕರಿಸುವುದನ್ನೇ ನಿಲ್ಲಿಸಿದೆ.

ಮಾಹಿತಿ ಪ್ರಕಾರ ಆಗಸ್ಟ್‌ ಅಂತ್ಯದ ಬಳಿಕ ಅರ್ಜಿ ಸ್ವೀಕರಿಸಿಲ್ಲ. ಅದಕ್ಕಿಂತ ಹಿಂದೆ ಅರ್ಜಿ ಸಲ್ಲಿರುವವರಿಗೆ ವಿಳಂಬವಾಗಿ ನೀಡ ಲಾಗುತ್ತಿದೆ. ಪ್ರಸ್ತುತ ಸಾಫ್ಟ್‌ವೇರ್‌ನಲ್ಲಿ ಅರ್ಜಿ ಸ್ವೀಕರಿಸುವ ಆಯ್ಕೆಯೇ ಸ್ಥಗಿತಗೊಂಡಿದೆ ಎಂದು ಬಂಟ್ವಾಳ ತಾಲೂಕು ಕಚೇರಿ ಮಾಹಿತಿ ನೀಡಿದೆ.

ತಿಥಿ ಕಳೆದರೂ ಬರುತ್ತಿಲ್ಲ ಹಣ!
ಸರಕಾರವು 2006ರಲ್ಲಿ ಅಂತ್ಯಸಂಸ್ಕಾರ ಸಹಾಯನಿಧಿ ಯೋಜನೆ ಆರಂಭಿಸಿದ್ದು, ತಹಶೀ ಲ್ದಾರರ ಮೂಲಕ ನೀಡುತ್ತಿತ್ತು. ಬಡವರು ಮೃತ ಪಟ್ಟಾಗ ಅಂತ್ಯಸಂಸ್ಕಾರಕ್ಕೆ ಆರ್ಥಿಕ ತೊಂದರೆ ಎದುರಾಗಬಾರದು ಎಂಬುದು ಯೋಜನೆ ಉದ್ದೇಶ. ಆದರೆ ಅಂತ್ಯ ಸಂಸ್ಕಾರದ ಅನುದಾನ ವರ್ಷದ ತಿಥಿ ಕಳೆದರೂ ಬರುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಅಂತ್ಯವಿಧಿಗೆ ಆರಂಭದಲ್ಲಿ 1 ಸಾವಿರ ರೂ. ನೀಡುತ್ತಿದ್ದು, 2015ರ ಎಪ್ರಿಲ್‌ 1ರಿಂದ 5 ಸಾವಿರ ರೂ.ಗೆ ಏರಿಸಲಾಗಿತ್ತು. ಈಗ ಸದ್ದಿಲ್ಲದೆ ಅರ್ಜಿ ಸ್ವೀಕಾರವನ್ನೇ ನಿಲ್ಲಿಸಿರುವುದರಿಂದ ಒಂದಲ್ಲ ಒಂದು ದಿನ 5 ಸಾವಿರ ರೂ. ಕೈ ಸೇರುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಮಂದಿಗೆ ನಿರಾಸೆಯಾಗಿದೆ.

ರಾಷ್ಟ್ರೀಯ ಕುಟುಂಬ ನೆರವು ಯೋಜನೆ ಲಭ್ಯ
ಸರಕಾರವು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ ರಾಷ್ಟ್ರೀಯ ಕುಟುಂಬ ನೆರವು ಯೋಜನೆಯ ಮೂಲಕ ಬಿಪಿಎಲ್‌ ಕುಟುಂಬದ ಮುಖ್ಯಸ್ಥ ಮರಣ ಹೊಂದಿದಲ್ಲಿ 20 ಸಾವಿರ ರೂ. ನೀಡುವ ಯೋಜನೆ ಈಗಲೂ ಜಾರಿಯಲ್ಲಿದ್ದು, ಕಂದಾಯ ಇಲಾಖೆ ಅರ್ಜಿ ಸ್ವೀಕರಿಸುತ್ತಿದೆ. ಕುಟುಂಬದ ಇತರ ಸದಸ್ಯರು ಮೃತಪಟ್ಟರೆ ಈ ಸಹಾಯಧನ ಸಿಗುವುದಿಲ್ಲ. ಅಂತ್ಯಸಂಸ್ಕಾರ ಯೋಜನೆಯಲ್ಲಿ ಕುಟುಂಬದ ಯಾರು ಮೃತಪಟ್ಟರೂ 5 ಸಾವಿರ ರೂ. ಲಭ್ಯವಾಗುತ್ತಿತ್ತು.

ಕೆಲವು ದಿನಗಳ ಹಿಂದೆ ನನ್ನ ತಾಯಿ ಮೃತಪಟ್ಟಾಗ ಅಂತ್ಯಸಂಸ್ಕಾರ ಯೋಜನೆಯ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಗ್ರಾಮಕರಣಿಕರ ಕಚೇರಿಗೆ ತೆರಳಿ ವಿಚಾರಿಸಿದಾಗ, ಆ ಯೋಜನೆ ಈಗ ಇಲ್ಲ. ಕೊರೊನಾ ಬಳಿಕ ನಿಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
– ಪ್ರವೀಣ್‌ ಎಸ್‌.,
ಸಹಾಯಧನ ಸಿಗದ ಸಂತ್ರಸ್ತ

ಕುಟುಂಬದ ಯಜಮಾನ ಮೃತ ಪಟ್ಟರೆ ರಾಷ್ಟ್ರೀಯ ಕುಟುಂಬ ನೆರವು ಯೋಜನೆ ಮೂಲಕ ನೀಡುವ ನೆರವು ಜಾರಿಯಲ್ಲಿದ್ದು, ಅಂತ್ಯಸಂಸ್ಕಾರ ಯೋಜನೆ ಅನುದಾನ ಬರುವುದಕ್ಕೆ ಬಾಕಿ ಇತ್ತು. ಆದರೆ ಅದು ಸ್ಥಗಿತಗೊಂಡಿರುವ ಕುರಿತು ಪರಿಶೀಲಿಸುತ್ತೇನೆ.
– ಡಾ| ರಾಜೇಂದ್ರ ಕೆ.ವಿ., ದ.ಕ. ಡಿ.ಸಿ.

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.