ಪೌರ ಕಾರ್ಮಿಕರಿಗಾಗಿ ಜಿ-2 ಮಾದರಿ ವಸತಿಗೃಹ; : ಸಿಂಗಾಣಿಯಲ್ಲಿ ಜಾಗ ಪರಿಶೀಲನೆ

ಅಮೃತ ನಿರ್ಮಲ ನಗರ ಯೋಜನೆ ಅಡಿಯಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ

Team Udayavani, Dec 19, 2022, 1:15 PM IST

ಪೌರ ಕಾರ್ಮಿಕರಿಗಾಗಿ ಜಿ-2 ಮಾದರಿ ವಸತಿಗೃಹ; : ಸಿಂಗಾಣಿಯಲ್ಲಿ ಜಾಗ ಪರಿಶೀಲನೆ

ಪುತ್ತೂರು: ವಸತಿ ರಹಿತ ಪೌರಕಾರ್ಮಿಕರಿಗೆ ವಸತಿ ನಿರ್ಮಾಣಕ್ಕೆ ನಗರಸಭೆ ಯೋಜನೆ ರೂಪಿಸಿದ್ದು ಎಲ್ಲವೂ ಅಂದುಕೊಂಡಂತೆ ಸಾಗಿದರೆ ನಗರದ ಸಿಂಗಾಣಿ ಬಳಿ ವಸತಿಗೃಹ ತಲೆ ಎತ್ತಲಿದೆ.

ನಗರದ ಸ್ವಚ್ಛತೆಯಲ್ಲಿ ದಿನ ನಿತ್ಯ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸೂರು ಒದಗಿಸುವ ಪ್ರಯತ್ನದ ಅಂಗವಾಗಿ ವಸತಿಗೃಹ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ.

ನಗರೋತ್ಥಾನದಲ್ಲಿ ಅನುದಾನ
ವಸತಿ ಗೃಹ ನಿರ್ಮಾಣಕ್ಕೆ ನಗರೋತ್ಥಾನದಲ್ಲಿ 1.19 ಕೋಟಿ ರೂ. ಅನುದಾನ ಇರಿಸಲಾಗಿದೆ. ಈಗಾಗಲೇ ಬಲಾ°ಡಿನಲ್ಲಿ 1 ಎಕ್ರೆ ಜಾಗ ಗುರುತಿಸಲಾಗಿದ್ದರೂ ಅದು ಡೀಮ್ಡ್ ಫಾರೆಸ್ಟ್‌ ವ್ಯಾಪ್ತಿಯೊಳಗೆ ಬರುವ ಕಾರಣ ಅಲ್ಲಿ ನಿರ್ಮಾಣ ಅಸಾಧ್ಯ. ಅದರ ಬದಲು ನಗರದ ಸಿಂಗಾಣಿಯಲ್ಲಿ ಜಾಗ ಪರಿಶೀಲಿಸಲಾಗಿದ್ದು ಅಲ್ಲಿ 30 ಸೆಂಟ್ಸ್‌ ಜಾಗ ಲಭ್ಯವಿದೆ. ಜಾಗ ಗುರುತಿಸುವಿಕೆ ಅಂತಿಮವಾದಲ್ಲಿ ಅಲ್ಲಿ ವಸತಿಗೃಹ ನಿರ್ಮಿಸುವ ಉದ್ದೇಶ ಹೊಂದಲಾಗಿದೆ.

ಜಿ- 2 ಮಾದರಿಯ ವಸತಿಗೃಹ
ಪುತ್ತೂರು ನಗರಸಭೆಯಲ್ಲಿ ಒಟ್ಟು 88 ಪೌರಕಾರ್ಮಿಕ ಮಂಜೂರಾತಿ ಹುದ್ದೆಗಳಿವೆ. ಇದರಲ್ಲಿ 11 ಮಂದಿ ಪೂರ್ಣಕಾಲಿಕ ಸಿಬಂದಿಗಳಿದ್ದಾರೆ. 41 ಮಂದಿ ನೇರ ಪಾವತಿಯ ಸಿಬಂದಿಗಳಿದ್ದಾರೆ. ಉಳಿದ ಹುದ್ದೆಗಳು ಖಾಲಿಯಿವೆ. ಇದರ ಪೈಕಿ ಅತೀ ಹೆಚ್ಚಿನ ಸಿಬಂದಿ ಹೊರ ಜಿಲ್ಲೆಯವರು.

ಪ್ರಸ್ತುತ ಅವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಅಂಥವರಿಗೆ ವಸತಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಜಿ-2 ಮಾದರಿಯ ವಸತಿ ಗೃಹ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರಲ್ಲಿ ನೆಲ ಅಂತಸ್ತು ಸೇರಿದಂತೆ ಎರಡು ಮಹಡಿಗಳಿರಲಿವೆ. ಒಟ್ಟು ಎಂಟು ಮನೆಗಳು ಇರಲಿವೆ ಅನ್ನುತ್ತಾರೆ ನಗರಸಭೆ ಪೌರಯುಕ್ತ ಮಧು ಎಸ್‌ ಮನೋಹರ್‌.

ವಿಶ್ರಾಂತಿ ಗೃಹ
ಈಗಾಗಲೇ ದ.ಕ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಪುತ್ತೂರು ನಗರಸಭೆಯು ಪೌರ ಕಾರ್ಮಿಕರಿಗಾಗಿ ಕಂಟೈನರ್‌ ಮಾದರಿಯ ಪೌರಬಂಧು ವಿಶ್ರಾಂತಿ ಗೃಹ ನಿರ್ಮಿಸಿದೆ. ಅಮೃತ ನಿರ್ಮಲ ನಗರ ಯೋಜನೆ ಅಡಿಯಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ. ದಿನನಿತ್ಯ ನಗರದ ಸ್ವತ್ಛತೆಗಾಗಿ ಕೆಲಸ ಮಾಡುವ ಪೌರ ಕಾರ್ಮಿಕರು ತಮ್ಮ ವೈಯಕ್ತಿಕ ಸ್ವಚ್ಛತೆ, ವಿಶ್ರಾಂತಿಗಾಗಿ ಈ ಕಂಟೈನರ್‌ ಸಹಕಾರಿಯಾಗಿದ್ದು ಇದರಲ್ಲಿ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಾರೆ. ಕುಡಿಯುವ ನೀರಿನ ಪೂರೈಕೆ ಇದೆ. ಇದಲ್ಲದೆ ಸ್ನಾನ ಗೃಹ, ಶೌಚಾಲಯ ಲಭ್ಯ ಇದೆ. ವಿಶ್ರಾಂತಿಗೃಹದ ಬೆನ್ನಲ್ಲೇ ವಸತಿಗೃಹದ ಸ್ಥಾಪನೆಗೂ ನಗರಾಡಳಿತ ಹೆಜ್ಜೆ ಇರಿಸಿದೆ.

ತ್ಯಾಜ್ಯ ಸಂಗ್ರಹ ಜವಾಬ್ದಾರಿ
ನಗರದ 15 ಸಾವಿರಕ್ಕೂ ಮಿಕ್ಕಿದ ಮನೆ, ಕಟ್ಟಡಗಳಿಂದ ದಿನಂಪ್ರತಿ 8 ಟನ್‌ ಅಧಿಕ ಹಸಿತ್ಯಾಜ್ಯ ಬನ್ನೂರು ಯಾರ್ಡ್‌ ಸೇರುತ್ತಿದೆ. ಇಷ್ಟು ಪ್ರಮಾಣದ ತ್ಯಾಜ್ಯ ಸಂಗ್ರಹಿಸಿ ಡಂಪಿಂಗ್‌ ಯಾರ್ಡ್‌ಗೆ ಸೇರಿಸುವ ಜವಾಬ್ದಾರಿ ನಿರ್ವಹಿಸುವುದು ಪೌರ ಕಾರ್ಮಿಕರು. ಸಿಬಂದಿ ಸಂಖ್ಯೆಯ
ಕೊರತೆಯ ನಡುವೆಯು ಪ್ರತಿನಿತ್ಯ ನಗರದ ವಾಣಿಜ್ಯ ಕಟ್ಟಡ, ಮನೆ ಮನೆಗಳಿಂದ ಕಸ ಸಂಗ್ರಹಿಸುವ ಜತೆಗೆ ನಗರದ ಸ್ವತ್ಛತ ಕಾರ್ಯದಲ್ಲಿ ಪೌರ ಕಾರ್ಮಿಕರು ತೊಡಗಿಸಿಕೊಳ್ಳುತ್ತಾರೆ.

ಅಗತ್ಯ ನೆರವು
ನಗರದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ಅಪಾರ. ಸಿಬಂದಿ ಪೈಕಿ ಹೆಚ್ಚಿನವರು ಹೊರ ಜಿಲ್ಲೆಯಿಂದ ಬಂದವರು. ಅವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಅವರಿಗೆ ವಸತಿ ವ್ಯವಸ್ಥೆ ಒದಗಿಸುವ ನಿಟ್ಟಿನಲ್ಲಿ ವಸತಿಗೃಹ ನಿರ್ಮಾಣಕ್ಕೆ ನಗರಾಡಳಿತ ಯೋಜನೆ ರೂಪಿಸಿದ್ದು ಸರಕಾರದ ಮೂಲಕವು ಅಗತ್ಯ ನೆರವು ನೀಡಲಿದೆ.
-ಸಂಜೀವ ಮಠಂದೂರು, ಶಾಸಕರು, ಪುತ್ತೂರು

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.