ಜಿಲ್ಲೆಯ ಜೀವನದಿಯ ಜೀವಕ್ಕೆ ಎರವಾಗುತ್ತಿದೆ ಪ್ಲಾಸ್ಟಿಕ್‌

ನೇತ್ರಾವತಿಯಲ್ಲಿ ಸಾವಿರಾರು ಬಾಟಲಿ ರಾಶಿ

Team Udayavani, Sep 4, 2022, 10:46 AM IST

4

ಬಂಟ್ವಾಳ: ಮಳೆಗಾಲದಲ್ಲಿ ನದಿಗಳಲ್ಲಿ ಕಸಕಡ್ಡಿಗಳು ಹರಿದು ಬರುವುದು ಸಾಮಾನ್ಯವಾದರೂ ಇತ್ತೀಚಿನ ವರ್ಷಗಳಲ್ಲಿ ಪ್ಲಾಸ್ಟಿಕ್‌ ಬಾಟಲಿಗಳ ಪ್ರಮಾಣವೇ ಹೆಚ್ಚಾಗಿ ಕಾಣಿಸುತ್ತಿರುವುದು ಆತಂಕಕಾರಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ಸೇರಿದಂತೆ ಹೆಚ್ಚಿನೆಲ್ಲ ಹೊಳೆ, ನದಿಗಳ ತೀರವನ್ನೊಮ್ಮೆ ವೀಕ್ಷಿಸಿದರೆ ಅಲ್ಲಲ್ಲಿ ಪ್ಲಾಸ್ಟಿಕ್‌ ಬಾಟಲಿ, ಲಕೋಟೆಗಳು ರಾಶಿ ಬಿದ್ದಿರುವುದನ್ನು ಕಾಣಬಹುದು.

ಪ್ರಸ್ತುತ ದಿನಗಳಲ್ಲಿ ಕುಡಿಯುವ ನೀರು, ತಂಪು ಪಾನೀಯಗಳಿಗೆ ಪ್ಲಾಸ್ಟಿಕ್‌ ಬಾಟಲಿಗಳನ್ನೇ ಉಪಯೋಗಿಸಲಾಗುತ್ತಿದೆ. ಸಮಾರಂಭಗಳಲ್ಲೂ ಹೇರಳವಾಗಿ ಬಳಕೆಯಾಗುತ್ತಿದೆ. ಬಳಸಿದ ಬಳಿಕ ಸಮರ್ಪಕವಾಗಿ ವಿಲೇವಾರಿ ಮಾಡಬೇಕಾದ ಮಂದಿ ಹಾಗೆ ಮಾಡದೆ ಎಲ್ಲೋ ಎಸೆಯುವುದರಿಂದ ಅವುಗಳು ಮಳೆ ನೀರಿನಲ್ಲಿ ಹರಿದು ಬಂದು ನದಿಯನ್ನು ಸೇರುತ್ತಿವೆ. ನದಿ ಕಿನಾರೆಯಲ್ಲಿರುವ ಧಾರ್ಮಿಕ, ಪ್ರವಾಸಿ ತಾಣಗಳಲ್ಲೂ ಪ್ರವಾಸಿಗರು ನೀರು, ತಂಪು ಪಾನೀಯ ಕುಡಿದು ಬಾಟಲಿಗಳನ್ನು ನೇರವಾಗಿ ನದಿಗೆ ಎಸೆಯುತ್ತಾರೆ ಎಂಬ ಆರೋಪವೂ ಇದೆ.

ಬಾಟಲಿಗಳದ್ದೇ ರಾಶಿ!

ಶಂಭೂರು ಎಎಂಆರ್‌ ಅಣೆಕಟ್ಟಿನಿಂದ ಮೇಲ್ಭಾಗದ ಹಿನ್ನೀರನ್ನು ಗಮನಿಸುತ್ತ ಸಾಗಿದರೆ ವ್ಯಾಪಕ ಪ್ರಮಾಣದಲ್ಲಿ ಪ್ಲಾಸ್ಟಿಕ್‌ ಬಾಟಲಿಗಳು ಹರಿದು ಬರುವುದು ಕಂಡುಬರುತ್ತವೆ. ನದಿ ತಿರುವು ಪಡೆಯುವ ಪ್ರದೇಶದಲ್ಲಿ ಸಾವಿರಾರು ಬಾಟಲಿಗಳು ಒಂದೇ ಬದಿಯಲ್ಲಿ ಸಂಗ್ರಹವಾಗಿದೆ. ಅಣೆಕಟ್ಟಿನಲ್ಲಿ ಯಂತ್ರಗಳ ಒಳಗೆ ಕಸ ಹೋಗದಂತೆ ಗ್ರಾಬ್‌ ಮೆಷಿನ್‌ ಮೂಲಕ ತೆಗೆಯಲಾಗುತ್ತದೆ. ಆದರೆ ಎಷ್ಟು ಸಂಗ್ರಹವಾಗಿದೆ ಎಂಬ ನಿಖರ ಮಾಹಿತಿ ಲಭ್ಯವಾಗುವುದಿಲ್ಲ. ಪ್ರತೀ ಮಳೆಗಾಲದಲ್ಲೂ ಹೀಗೆಯೇ ಪ್ಲಾಸ್ಟಿಕ್‌ಗಳು ಹರಿದು ಬರುತ್ತಿವೆ; ನಾವು ವಿಲೇವಾರಿ ಮಾಡುತ್ತೇವೆ ಎಂದಷ್ಟೇ ಅಧಿಕಾರಿಗಳು ತಿಳಿಸಿದ್ದಾರೆ.

ವಿಲೇವಾರಿಗೆ ಕ್ರಮ

ನದಿಗಳಲ್ಲಿ ನಿರ್ದಿಷ್ಟ ಜಾಗಗಳಲ್ಲೇ ಈ ರೀತಿ ಪ್ಲಾಸ್ಟಿಕ್‌ ಬಾಟಲಿಗಳು ರಾಶಿ ಬೀಳುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮನಸ್ಸು ಮಾಡಿದಲ್ಲಿ ಅವುಗಳನ್ನು ಅಲ್ಲಿಂದ ತೆಗೆದು ಸಂಬಂಧಿಸಿ ತ್ಯಾಜ್ಯ/ಎಂಆರ್‌ಎಫ್‌ ಘಟಕಗಳಲ್ಲಿ ವಿಲೇವಾರಿ ಮಾಡಬಹುದು. ಅಣೆಕಟ್ಟುಗಳಲ್ಲೂ ವಿಲೇವಾರಿಗೆ ಕ್ರಮ ತೆಗೆದುಕೊಳ್ಳಬಹುದು.

ಗಮನಕ್ಕೆ ಬರುವುದಿಲ್ಲ: ತುಂಬೆ ಅಣೆಕಟ್ಟಿಗಿಂತ ಮೇಲ್ಭಾಗದಲ್ಲಿ ಎಎಂಆರ್‌ ಅಣೆಕಟ್ಟು ಇರುವುದರಿಂದ ಅಲ್ಲಿ ಒಂದು ಹಂತದಲ್ಲಿ ನೀರಿನ ಕಸಗಳನ್ನು ತೆಗೆಯುವುದರಿಂದ ನಮಗೆ ಹೆಚ್ಚಿನ ಪ್ರಮಾಣದಲ್ಲಿ ಪ್ಲಾಸ್ಟಿಕ್‌ ಬಾಟಲಿಗಳು ಹರಿದು ಬರುವುದು ಗಮನಕ್ಕೆ ಬರುವುದಿಲ್ಲ. –ನರೇಶ್‌ ಶೆಣೈ, ಕಾರ್ಯಪಾಲಕ ಎಂಜಿನಿಯರ್‌, ಮಹಾನಗರ ಪಾಲಿಕೆ, ಮಂಗಳೂರು.

 

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.