ಕಂದಾಯ ಅಧಿಕಾರಿಗಳ ವಿಳಂಬ ನೀತಿಗೆ ಸದಸ್ಯರ ಅಸಮಾಧಾನ
Team Udayavani, Jan 17, 2021, 3:00 AM IST
ಸುಳ್ಯ: ಕಂದಾಯ ಇಲಾಖೆ ಅಧಿಕಾರಿಗಳ ವಿಳಂಬ ನೀತಿಗೆ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ತಾ.ಪಂ.ನ ಸಾಮಾನ್ಯ ಸಭೆಯು ಅಧ್ಯಕ್ಷ ಚನಿಯ ಕಲ್ತಡ್ಕ ಅವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ನಡೆಯಿತು.
ಐವತ್ತೂಕ್ಲು ಗ್ರಾಮದ ಸರ್ವೇ ನಂಬರ್ 6 ಮತ್ತು 7 ರಲ್ಲಿ ಸುಮಾರು 12 ಕುಟುಂಬಗಳು ವಾಸಿಸುತ್ತಿದ್ದು ಸ್ಥಳ ಸರ್ವೇಗೆ ತಹಶೀಲ್ದಾರರು 3 ತಿಂಗಳ ಹಿಂದೆಯೇ ದಿನ ನಿಗದಿ ಪಡಿಸಿದ್ದರು. ಆದರೆ ಈ ಕುರಿತು ಕಂದಾಯ ಆಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸರಿಯಲ್ಲ ಎಂದು ತಾ.ಪ.ಂ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ ತಮ್ಮ ಅಸಮಾಧಾನ ಹೊರಹಾಕಿದರು.
ಚನಿಯ ಕಲ್ತಡ್ಕ ಮಾತನಾಡಿ, 15 ದಿನಗಳೊಳಗೆ ಈ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಇಲಾಖೆಗೆ ಸೂಚಿಸಿದರು. ಇದಕ್ಕೆ ಉತ್ತರಿಸಿದ ತಹಶೀಲ್ದಾರ್ ಅನಿತಾಲಕ್ಷ್ಮೀ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಬೆಳ್ಳಾರೆಯ ಅಂಬೇಡ್ಕರ್ ಭವನದ ಅಡಿ ಸ್ಥಳದ ಜಾಗವನ್ನು ಮಂಜೂರು ಮಾಡಲು ಬೆಳ್ಳಾರೆ ಪಂಚಾಯತ್ ಅಭಿವೃದ್ಧಿ ಅಧಿ ಕಾರಿಗಳು ಸುಳ್ಯ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದು ಶೀಘ್ರ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕೆಂದು ಕಲ್ತಡ್ಕ ತಿಳಿಸಿದರು.
ನಿವೇಶನ ಇಲ್ಲ :
ನೆರೆಯಿಂದಾಗಿ ಮನೆ ಕಳೆದುಕೊಂಡು ವರ್ಷ ಕಳೆದರೂ ನಿವೇಶನ ಮಂಜೂರಾಗದ ಬಗ್ಗೆ ಆಬ್ದುಲ್ ಗಫೂರ್ ಆಕ್ರೋಶ ವ್ಯಕ್ತ ಪಡಿಸಿದರು. ದೊಡ್ಡತೋಟ ಬಳಿ ಇರುವ ಹಳೆಯ ಗ್ರಾಮ ಸೇವಕರ ವಸತಿ ಕೇಂದ್ರದ ಜಾಗದಲ್ಲಿ ಆವಶ್ಯಕತೆಯಿರುವ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ರಾಧಾಕೃಷ್ಣ ಬೊಳ್ಳೂರು ಆಗ್ರಹಿಸಿದರು. ನದಿ-ಹೊಳೆಗಳಲ್ಲಿ ಹೂಳು ತುಂಬಿರುವುದರಿಂದ ನೀರು ಮೇಲಕ್ಕೆ ಬಂದಿದ್ದು ಮರಳು ತೆಗೆಯುವ ಕುರಿತ ಅನುಮತಿ ಬಗ್ಗೆ ರಾಧಕೃಷ್ಣ ಬೊಳ್ಳೂರು ಪ್ರಶ್ನಿಸಿದರು. ಜಿಲ್ಲಾಡಳಿತದಿಂದ ಕೂತ್ಪುಂಜ, ಕೊಲ್ಲಮೊಗ್ರ ಮತ್ತು ಉಬರಡ್ಕ ಮಿತ್ತೂರಿನಲ್ಲಿ ಮರಳು ತೆಗೆಯಲು ಅನುಮತಿ ಸಿಕ್ಕಿದೆ. ಆದರೆ ಮೀಸಲು ಜಾಗ, ಕಿಂಡಿ ಅಣೆಕಟ್ಟು, ಸೇತುವೆಗಳಿರುವ ವ್ಯಾಪ್ತಿಗಳ ಅನುಮತಿಯನ್ನು ತಿರಸ್ಕರಿಸಲಾಗಿದೆ ಎಂದು ತಾಲೂಕು ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ತಿಳಿಸಿದರು.
ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸ್ಥಾಯೀ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ