ಗೀತಾ ಷಟ್ಪದಿ ಪುಸ್ತಕ ಬಿಡುಗಡೆ 


Team Udayavani, Jun 8, 2018, 4:15 PM IST

8-june-13.jpg

ಬಂಟ್ವಾಳ : ಗೀತೆಯನ್ನು ಜರೆಯುವ, ಯುದ್ಧಪ್ರೇರಣೆ ನೀಡುವ ಗ್ರಂಥವೆಂದು ವ್ಯಾಖ್ಯಾನ ಮಾಡಿಕೊಳ್ಳುವ ಬುದ್ಧಿªಜೀವಿಗಳಿಗೆ ಗೀತೆಯ ಸಮಗ್ರಅರ್ಥ ತಿಳಿದಿಲ್ಲ. ಗೀತೆಯನ್ನು ಜಗತ್ತಿನ ಎಲ್ಲ ವಿದ್ವಾಂಸರು ಒಪ್ಪಿಕೊಂಡರೂ ನಮ್ಮಲ್ಲಿಯೇ ಕೆಲವರು ಅಪಸ್ವರವನ್ನು ಎತ್ತುತ್ತಿದ್ದಾರೆ. ನಾನು ಬಂಟ ಸಮಾಜದ ಅಧ್ಯಕ್ಷನಾಗಿ ಕೆಲಸ ಮಾಡಿದಾಗ ಟೀಕಿಸಲಿಲ್ಲ. ವಿಹಿಂಪ ಅಧ್ಯಕ್ಷನಾದಾಗ ಜಾತಿವಾದಿ ಎಂದು ದೂರಲಾರಂಭಿಸಿದರು. ಎಲ್ಲ ಜಾತಿ- ಮತಗಳನ್ನು ಒಟ್ಟಾಗಿ ಕೊಂಡು ಹೋಗುವ ಸಾಮರ್ಥ್ಯ ಹಿಂದೂ ಧರ್ಮಕ್ಕಿದೆ ಎಂದು ಭಾರತ ಸಂಸ್ಕೃತಿ ಪ್ರತಿಷ್ಠಾನದ ಕುಲಪತಿ ಡಾ| ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಹೇಳಿದರು.

ಅವರು ಜೂ. 5ರಂದು ಮೊಗರ್ನಾಡು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಪ್ರಹ್ಲಾದ ಮಂಟಪದಲ್ಲಿ ಜಿಲ್ಲಾ ಕಸಾಪ, ಶ್ರೀ ಮಹಮ್ಮಾಯಿ ಯಕ್ಷಗಾನ ಕಲಾಕೇಂದ್ರ ಅಬ್ಬೆಯ ಮಜಲು ನರಿಕೊಂಬು ಸಹಯೋಗದಲ್ಲಿ ವೇ| ಮೂ| ಅನಂತ ಭಟ್‌ ಅವರ ಗೀತಾ ಷಟ್ಪದಿ ಕನ್ನಡ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ವೇದಗಳು ಇಡೀಯ  ಜಗತ್ತಿಗೆ ಒಳ್ಳೆಯದನ್ನು ಸಾರುವ ಧರ್ಮಗ್ರಂಥಗಳು. ಗೀತೆಯ ಬಗ್ಗೆ ಅನೇಕ ಹೊಸ ವ್ಯಾಖ್ಯಾನಗಳು ಬಂದಿವೆ ಎಂದು ಅವರು ಹೇಳಿದರು.

ಮನುಷ್ಯನ ಬೆಲೆ ಅವನ ಸಾಧನೆಯಲ್ಲಿ
ಕೃತಿಯು ಭಾಮಿನಿ ಷಟ್ಪದಿಯಲ್ಲಿ ಇದೆ. ಗದ್ಯದಲ್ಲಿ ಬರೆದಾಗ ಸಿಗುವ ಸಾಹಿತ್ಯ ರಸಕ್ಕಿಂತ ಪದ್ಯದಲ್ಲಿ ದೊರೆಯುವ ಸ್ವಾದ ಹೆಚ್ಚು.ಮನುಷ್ಯನ ಬೆಲೆ ಅವನ ಸಾಧನೆಯಲ್ಲಿ ಇದೆ. ಟೀಕಿಸುವುದರಲ್ಲಿ ಯಾರೂ ದೊಡ್ಡವರಾಗುವುದಿಲ್ಲ ಎಂದರು. ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಸಂಚಾಲಕ ವೇ| ಮೂ| ಜನಾರ್ದನ ಭಟ್‌ ಮಾತನಾಡಿ, ಶ್ರೀ ಮಹಮ್ಮಾಯಿ ಯಕ್ಷಗಾನ ಕಲಾಕೇಂದ್ರ ನಿರಂತರವಾಗಿ ಒಂದು ಕಲೆಯ ಬೆಳವಣಿಗೆಗಾಗಿ ನಿರಂತರ ಶ್ರಮಿಸುತ್ತಿದೆ. ಮಕ್ಕಳಲ್ಲಿ ಕಲಾಭಿರುಚಿ ಸೃಷ್ಟಿಸಿ ಅವರನ್ನು ವೇದಿಕೆಗೆ ಕರೆತರುವ ಕೆಲಸ ಮಾಡುತ್ತಿದೆ. ಕಲೆಯ ಮೂಲಕ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಅದಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ ಕಲ್ಕೂರ ಮಾತನಾಡಿ, ಗೀತೆಯೂ ಯಾವುದೇ ಜಾತಿ-ಮತಕ್ಕೆ ಸೀಮಿತವಲ್ಲ. ಒಳ್ಳೆಯ ಸಾಹಿತ್ಯದ ಮೂಲಕ ಮನಸ್ಸು ಅರಳುತ್ತದೆ. ಗೀತೆ ಮನುಕುಲಕ್ಕೆ ಮಾರ್ಗದರ್ಶಿ ಎಂದರು. ಹಂಪಿ ಕನ್ನಡ ವಿವಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ| ಎ.ವಿ. ನಾವಡ, ಕೃತಿಕರ್ತ ಪೊಳಲಿ ವೇ| ಮೂ| ಅನಂತ ಭಟ್‌ ಮಾತನಾಡಿದರು. ಇದೇ ಸಂದರ್ಭ ಎಸ್‌ಎಸ್‌ ಎಲ್‌ಸಿ, ಪಿಯುಸಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. ಗೀತಾ ಗಾಯನ ನಡೆಯಿತು.  ಕಲಾಕೇಂದ್ರ ಅಧ್ಯಕ್ಷ ಪಿ. ಕೃಷ್ಣರಾಜ ಭಟ್‌ ಸ್ವಾಗತಿಸಿ, ನಿರೂಪಿಸಿದರು. ಯತೀಶ್‌ ಶೆಟ್ಟಿ ವಂದಿಸಿದರು. ಡಾ| ಸುಬ್ರಹ್ಮಣ್ಯ ಭಟ್‌ ಮತ್ತು ವೆಂಕಟೇಶ್‌ ರಾವ್‌ ಸಹಕರಿಸಿದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.