ಉಕ್ಕಿ ಹರಿದ ನದಿಗಳು: ಕಿಂಡಿ ಅಣೆಕಟ್ಟಿನಲ್ಲಿ ಕಸ
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಉತ್ತಮ ಮಳೆ
Team Udayavani, Jun 8, 2020, 5:49 AM IST
ಬೆಳ್ತಂಗಡಿ: ತಾ| ನ ದಿಡುಪೆ, ಕಿಲ್ಲೂರು, ಕುಕ್ಕಾವು ಮಿತ್ತಬಾಗಿಲು, ಮಲವಂತಿಗೆ ಭಾಗದಲ್ಲಿ ಶನಿವಾರ ಸಂಜೆ ಸತತ ಮಳೆಯಾದ ಪರಿಣಾಮ ಈ ಭಾಗದ ನೇತ್ರಾವತಿ, ಮೃತ್ಯುಂಜಯ ನದಿಗಳು ಉಕ್ಕಿ ಹರಿದಿವೆ.
ನೇತ್ರಾವತಿ ಹಾಗೂ ಮೃತ್ಯುಂಜಯ ನದಿಯಲ್ಲಿ ನೀರಿನ ಮಟ್ಟ ಏರಿದಲ್ಲಿ ಸಮೀಪದ ನಿವಾಸಿಗಳಿಗೆ ಆತಂಕ ತಪ್ಪಿದ್ದಲ್ಲ. ಜೂ. 1ರಂದು ಈ ಭಾಗದಲ್ಲಿ ಭಾರೀ ಮಳೆಯಾಗಿದ್ದರಿಂದ ಕುಕ್ಕಾವು ಏಳುವರೆ ಹಳ್ಳ ತುಂಬಿತ್ತು. ಪರಿಣಾಮ ಸಮೀಪದ ಕೊಪ್ಪದ ಗಂಡಿ ಕಿಂಡಿ ಅಣೆಕಟ್ಟುಗಳಲ್ಲಿ ಕಸದ ರಾಶಿ ಬಂದು ಸೇರಿತ್ತು. ಮುಂಡಾಜೆ ಕಾಪುವಿನ ಬಳಿ ಮೃತ್ಯುಂಜಯ ನದಿಗೆ ಅಡ್ಡಲಾಗಿರುವ ಅಣೆಕಟ್ಟಿನ ಕಿಂಡಿಗಳಲ್ಲಿ ಮರಮಟ್ಟು ಹಾಗೂ ಕಸಕಡ್ಡಿ ಸಿಲುಕಿ ಕೊಂಡಿತ್ತು.
ಕೃತಕ ನೆರೆ ಭೀತಿ
ಶನಿವಾರ ಸುರಿದ ಭಾರೀ ಮಳೆಗೆ ಕಿಲ್ಲೂರು ನದಿಯ ಒಡ್ಡುಕಲ್ಲು ಕಿಂಡಿ ಅಣೆಕಟ್ಟಿನಲ್ಲಿ ಮರದ ಗೆಲ್ಲು, ಕಸದ ರಾಶಿ ಸಿಲುಕಿಕೊಂಡಿದೆ. ಕಳೆದ ನೆರೆಗೆ ನದಿಯಲ್ಲಿ ಹೂಳು ಮರ ತೆರವುಗೊಳಿಸದ ಪರಿಣಾಮ ಈ ಬಾರಿ ಮಳೆಗೆ ಕೃತಕ ನೆರೆ ಸಂಭವಿಸುವ ಸಾಧ್ಯತೆ ಇದೆ. ಇಷ್ಟಾದರೂ ಇಲಾಖೆ ಕಣ್ಮುಚ್ಚಿ ಕುಳಿತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ