ಸುಜೀರಿಗೆ ಸ.ಪ.ಪೂ.ಕಾಲೇಜು?

ಸ್ಥಳೀಯ ವಿದ್ಯಾರ್ಥಿ ಸಂಖ್ಯೆ ಆಧಾರದಲ್ಲಿ ಸರಕಾರಕ್ಕೆ ಪ್ರಸ್ತಾವ ಸಲ್ಲಿಕೆ

Team Udayavani, Dec 1, 2022, 12:21 PM IST

8

ಬಂಟ್ವಾಳ: ಪುದು ಹಾಗೂ ಮೇರಮಜಲು ಗ್ರಾಮ ಪಂಚಾಯತ್‌ ವ್ಯಾಪ್ತಿಯನ್ನು ಒಳಗೊಂಡಂತೆ ಸರಕಾರಿ ಪದವಿ ಪೂರ್ವ ಕಾಲೇಜು ಬೇಡಿಕೆ ಕಳೆದ ಹಲವು ವರ್ಷಗಳಿಂದ ಕೇಳಿ ಬರುತ್ತಿದ್ದು, ಇದೀಗ ಫರಂಗಿಪೇಟೆ ಸಮೀಪದ ಸುಜೀರಿನಲ್ಲಿ ಪ.ಪೂ. ಕಾಲೇಜು ಅನುಷ್ಠಾನಕ್ಕೆ ಸಂಬಂಧಿಸಿ ಸ್ಥಳೀಯ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ ಆಧಾರದಲ್ಲಿ ಸರಕಾರಕ್ಕೆ ಪ್ರಸ್ತಾವನೆಯೊಂದು ಸಲ್ಲಿಕೆಯಾಗಿದೆ.

ದ.ಕ.ಪ.ಪೂ. ಶಿಕ್ಷಣ ಇಲಾಖೆಯ ಮೂಲಕ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್‌ ಅವರು ಪ್ರಸ್ತಾವನೆ ಸಲ್ಲಿಸಿದ್ದು, ಸರಕಾರದಿಂದ ಸಕಾರಾತ್ಮಕ ಸ್ಪಂದನೆ ಲಭಿಸಿದರೆ ಪ.ಪೂ. ಕಾಲೇಜಿನ ಬೇಡಿಕೆ ಈಡೇರಲಿದೆ. ಪ್ರಸ್ತುತ ಎರಡು ಗ್ರಾ.ಪಂ. ವ್ಯಾಪ್ತಿಯ ಪುದು, ಮೇರಮಜಲು ಹಾಗೂ ಕೊಡ್ಮಾಣ್‌ ಗ್ರಾಮ ವ್ಯಾಪ್ತಿಯಲ್ಲಿ ಯಾವುದೇ ಕಾಲೇಜುಗಳು ಇಲ್ಲದೆ ಇರುವುದರಿಂದ ಸ್ಥಳೀಯ ಶಾಲೆಗಳ ವಿದ್ಯಾರ್ಥಿಗಳು ಬೇರೆಡೆಗೆ ತೆರಳಬೇಕಾದ ಸ್ಥಿತಿ ಇದೆ.

2013ರಿಂದಲೂ ಈ ಭಾಗದಲ್ಲಿ ಪ.ಪೂ. ಕಾಲೇಜಿನ ಅನುಷ್ಠಾನದ ಕುರಿತು ಪ್ರಯತ್ನಗಳು ನಡೆಯುತ್ತಿದ್ದು, ಹಿಂದೆ ಶಿಕ್ಷಣ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್‌ ಅವರಿಗೂ ಬೇಡಿಕೆ ಸಲ್ಲಿಕೆಯಾಗಿತ್ತು. ಸ್ಥಳೀಯ ಶಾಸಕರು ಕೂಡ ಗ್ರಾಮಸ್ಥರ ಬೇಡಿಕೆಗೆ ಪೂರಕವಾಗಿ ಸರಕಾರಕ್ಕೆ ಒತ್ತಡವನ್ನೂ ಹೇರಿದ್ದರು. ಈ ನಿಟ್ಟಿನಲ್ಲಿ ಪ್ರಸ್ತುತ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಸ್ಥಳೀಯರು ಅಭಿಪ್ರಾಯಿಸುತ್ತಾರೆ.

ಒಂದೇ ಆವರಣದಲ್ಲಿ ಹಲವು ಶಾಲೆ

ಪ್ರಸ್ತುತ ಸುಜೀರು ಪರಿಸರದಲ್ಲಿ ಸರಕಾರಿ ಹಿ.ಪ್ರಾ. ಶಾಲೆ, ಪ್ರೌಢಶಾಲೆ ಇದ್ದು, ಅದೇ ಸ್ಥಳದಲ್ಲಿ ಮೌಲಾನಾ ಅಝಾದ್‌ ಶಾಲಾ ಕಟ್ಟಡವೂ ನಿರ್ಮಾಣಗೊಳ್ಳುತ್ತಿದೆ. ಸದ್ಯಕ್ಕೆ ಮೌಲಾನಾ ಅಝಾದ್‌ ಸ್ಕೂಲ್‌ ಪುದು ಮಾಪÛ ಸರಕಾರಿ ಶಾಲೆಯಲ್ಲಿ ಕಾರ್ಯಚರಿಸುತ್ತಿದೆ. ಗ್ರಾಮಸ್ಥರ ಬೇಡಿಕೆಯ ಪ್ರಕಾರ ಇದೇ ಆವರಣದಲ್ಲಿ ಪ.ಪೂ. ಕಾಲೇಜು ಕೂಡ ಪ್ರಾರಂಭ ಗೊಳ್ಳಬೇಕು ಎನ್ನಲಾಗುತ್ತಿದೆ.

ಈ ಭಾಗದಲ್ಲಿ ಒಟ್ಟು 3.70 ಎಕ್ರೆ ಜಾಗವಿದ್ದು, ಅದರಲ್ಲಿ 90 ಸೆಂಟ್ಸ್‌ ಪ್ರೌಢಶಾಲೆ, 1 ಎಕ್ರೆಯಲ್ಲಿ ಮೌಲಾನಾ ಅಝಾದ್‌ ಸ್ಕೂಲ್‌ಗೆ ಮೀಸಲಿಡಲಾಗಿದೆ. ಉಳಿದಂತೆ ಜಾಗ ಪ್ರಾಥಮಿಕ ಶಾಲೆಯಲ್ಲಿದ್ದು, ಅದರಲ್ಲಿ ಒಂದು ಭಾಗದಲ್ಲಿ ಪದವಿ ಪೂರ್ವ ಕಾಲೇಜು ಪ್ರಾರಂಭವಾಗಬೇಕು ಎಂದು ಪ್ರಸ್ತಾವನೆಯಲ್ಲಿ ಪ್ರಸ್ತಾಪಿಸಲಾಗಿದೆ.

ಸ್ಥಳೀಯ ಶಾಲೆಗಳ ವಿದ್ಯಾರ್ಥಿ ಮಾಹಿತಿ

ಯಾವುದೇ ಪ್ರದೇಶಕ್ಕೆ ಶಾಲೆ ಅಥವಾ ಕಾಲೇಜು ಮಂಜೂರಾಗಬೇಕಾದರೆ ಸ್ಥಳೀಯ ವಿದ್ಯಾರ್ಥಿಗಳು ಹಾಗೂ ಅವರು ವಿದ್ಯಾಭ್ಯಾಸಕ್ಕೆ ಇತರ ಭಾಗಕ್ಕೆ ತೆರಳಬೇಕಾಗಿರುವ ಮಾಹಿತಿಯು ಅತೀ ಅಗತ್ಯವಾಗಿದೆ. ಅದರಂತೆ ಪುದು ಹಾಗೂ ಮೇರಮಜಲು ಭಾಗದ ಹಾಲಿ ಕಾರ್ಯಾಚರಿಸುತ್ತಿರುವ ಪ್ರೌಢಶಾಲೆಗಳಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಅದರ ಆಧಾರದಲ್ಲಿ ಮುಂದೆ ಸರಕಾರ ನಿರ್ಧಾರ ಕೈಗೊಳ್ಳುತ್ತದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಪ್ರಸ್ತಾವನೆ ಸಲ್ಲಿಕೆ: ಪುದು, ಮೇರಮಜಲು ಭಾಗಕ್ಕೆ ಪ.ಪೂ. ಕಾಲೇಜು ಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಇದ್ದು, ಅದರಂತೆ ಪ್ರಸ್ತುತ ಸುಜೀರಿಗೆ ಕಾಲೇಜು ಮಂಜೂರು ಮಾಡುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮಂಗಳೂರು ಕ್ಷೇತ್ರಕ್ಕೆ 3 ಕಾಲೇಜುಗಳನ್ನು ಕೇಳಲಾಗಿದ್ದು, ದೇರಳ ಕಟ್ಟೆ ಮತ್ತು ಹರೇಕಳಕ್ಕೆ ಈಗಾಗಲೇ ಮಂಜೂರಾಗಿದೆ. ಈ ಪ್ರಸ್ತಾವಕ್ಕೂ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. –ಯು.ಟಿ. ಖಾದರ್‌, ಶಾಸಕರು, ಮಂಗಳೂರು ಕ್ಷೇತ್ರ

ಹಿಂದಿನಿಂದಲೂ ಬೇಡಿಕೆ: ನಮ್ಮ ಭಾಗದಲ್ಲಿ ಪ.ಪೂ. ಕಾಲೇಜು ಬೇಕು ಎಂದು ನಾವು ಶಾಸಕ ಯು.ಟಿ. ಖಾದರ್‌ ಅವರ ಮೂಲಕ ಪ್ರಯತ್ನ ಮಾಡುತ್ತಿದ್ದು, ಹಿಂದೆ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ಅವರು ಇರುವಾಗಲೂ ಬೇಡಿಕೆ ಸಲ್ಲಿಸಿದ್ದೆವು. ಪ್ರಸ್ತುತ ಶಾಸಕರ ಸೂಚನೆಯ ಮೇರೆಗೆ ಎಲ್ಲ ದಾಖಲೆಗಳು ಒಳಗೊಂಡು ಶಿಕ್ಷಣ ಇಲಾಖೆ ಮೂಲಕ ಪ್ರಸ್ತಾವನೆ ಸಲ್ಲಿಕೆಯಾಗಿದೆ. –ಉಮ್ಮರ್‌ ಫಾರೂಕ್‌ ಫರಂಗಿಪೇಟೆ, ಜಿ.ಪಂ. ಮಾಜಿ ಸದಸ್ಯರು

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.