ಗೌರಿ ಹೊಳೆಯ ರಸ್ತೆ ಬದಿ ಕುಸಿತ: ಆತಂಕ


Team Udayavani, Jul 29, 2021, 3:00 AM IST

ಗೌರಿ ಹೊಳೆಯ ರಸ್ತೆ ಬದಿ ಕುಸಿತ: ಆತಂಕ

ಪುತ್ತೂರು: ಮೈಸೂರು, ಮಡಿಕೇರಿಯಿಂದ ಪ್ರಮುಖ ಯಾತ್ರಾಸ್ಥಳ ಧರ್ಮಸ್ಥಳವನ್ನು ಬೆಸೆಯುವ ಬೆಳ್ಳಾರೆ – ಪೆರುವಾಜೆ -ಸವಣೂರು ರಸ್ತೆ ಅಭಿ ವೃದ್ಧಿಗೊಳ್ಳುತ್ತಿರುವ ಹಂತದಲ್ಲೇ ಬದಿ ಕುಸಿದಿದ್ದು ಸಂಚಾರ ಸುರಕ್ಷತೆಗೆ ಆತಂಕ ಎದುರಾಗಿದೆ.

ರಸ್ತೆ ಅಭಿವೃದ್ಧಿ ವೇಳೆ ತಡೆಗೋಡೆ ನಿರ್ಮಿಸದಿರುವುದು ಹಾಗೂ ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆಯ ಬದಿ ಯಲ್ಲಿ ಸಮರ್ಪಕ ಚರಂಡಿ ನಿರ್ಮಿಸದೆ ಇರುವುದು ಕುಸಿತಕ್ಕೆ ಕಾರಣವಾಗಿದ್ದು ದಿನೇ ದಿನೇ ಅಪಾಯ ಹೆಚ್ಚಾಗುತ್ತಿದೆ.

ರಸ್ತೆ ಬದಿ ಹೊಳೆ ಪಾಲು:

ಪೆರುವಾಜೆ ಗ್ರಾಮದ ಮಾಪಮಜಲು ಬಳಿ ಗೌರಿ ಹೊಳೆಗೆ ತಾಗಿಕೊಂಡಿರುವ ರಸ್ತೆಯ ಒಂದು ಬದಿ ಕುಸಿದಿದೆ. ರಸ್ತೆಗೆ ಅಳವಡಿಸಿರುವ ದೂರ ದಾಖಲೆಯ ಕಲ್ಲು ಸಹಿತ ರಸ್ತೆ ಅಂಚು ಕುಸಿದು ಹೊಂಡ ರೂಪ ಪಡೆದಿದೆ. ಹೊಳೆ ಬದಿಯ ಮರವು ನೀರು ಪಾಲಾಗಿದೆ. ಮಳೆ ಪ್ರಮಾಣ ಹೆಚ್ಚಾದಂತೆ ಹೊಳೆಯಲ್ಲಿ ನೀರು ಹೆಚ್ಚಾಗಿ ರಸ್ತೆ ಕೂಡ ಹೊಳೆ ಪಾಲಾಗುವ ಸಾಧ್ಯತೆ ಇದೆ.

ತಡೆಗೋಡೆ ನಿರ್ಮಿಸದೆ ನಿರ್ಲಕ್ಷ್ಯ:

ಈ ರಸ್ತೆಯು ಮಾಸ್ತಿಕಟ್ಟೆಯಿಂದ- ಕಾಪುಕಾಡಿನ ತನಕ ಸುಳ್ಯ ಲೋಕೋಪ ಯೋಗಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದು ಕೆಲವು ತಿಂಗಳ ಹಿಂದೆ 3.5 ಕೋ.ರೂ.ವೆಚ್ಚದಲ್ಲಿ ಮಧ್ಯಮ ಪಥದ ರಸ್ತೆ ನಿರ್ಮಿಸಲಾಗಿದೆ. ಅಲ್ಲಲ್ಲಿ ಅಂತಿಮ ಹಂತದ ಕಾಮಗಾರಿಗಳು ಬಾಕಿ ಇದೆ. ಮಾಪಮಜಲು ಬಳಿ ರಸ್ತೆಗೆ ತಾಗಿಕೊಂಡು ಹರಿಯುವ ಗೌರಿ ಹೊಳೆಯ ಬದಿಯಲ್ಲಿ ತಡೆಗೋಡೆ ನಿರ್ಮಿಸಬೇಕು ಎಂದು ಪೆರುವಾಜೆ ಗ್ರಾ.ಪಂ. ಸಹಿತ ಸ್ಥಳೀಯರು ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದ್ದರು. ಆದರೆ ಅದಕ್ಕೆ ಸ್ಪಂದಿಸದ ಅಧಿಕಾರಿಗಳು ಹೊಳೆಬದಿಗೆ ಮಣ್ಣು ಹಾಕಿ ಕಾಮಗಾರಿ ನಡೆಸಿದ್ದರು. ಪರಿಣಾಮ ಹೊಳೆ ನೀರಿಗೆ ಸಿಲುಕಿ ಮಣ್ಣು ಕೊಚ್ಚಿ ಹೋಗಿದ್ದು ರಸ್ತೆ ಕುಸಿತ ಪ್ರಾರಂಭಗೊಂಡಿದೆ.

ಉರುಳಲು ಕಾದಿರುವ  ಮರಗಳು:

ಇದೇ ರಸ್ತೆಯ ಕಾಪುಕಾಡಿನಲ್ಲಿ ಹತ್ತಾರು ಬೃಹತ್‌ ಗಾತ್ರದ ಮರಗಳು ರಸ್ತೆಗೆ ಉರುಳಿ ಬೀಳುವ ಹಂತದಲ್ಲಿದೆ. ರಸ್ತೆಯ ಒಂದು ಬದಿಯಲ್ಲಿ ಮಣ್ಣು ಕುಸಿಯುತ್ತಿದ್ದು ಅದರ ಮೇಲ್ಭಾಗದಲ್ಲಿರುವ ಮರಗಳು ರಸ್ತೆಗೆ ಬಾಗಿದೆ. ದಿನಂಪ್ರತಿ ಸರಕಾರಿ ಬಸ್‌ ಸಹಿತ ನೂರಾರು ವಾಹನಗಳು ಸಂಚರಿಸುತ್ತಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ.

ಸುತ್ತು ಬಳಕೆ ತಪ್ಪಿದೆ :

ಮೈಸೂರು, ಮಡಿಕೇರಿ, ಕಾಸರಗೋಡು ಭಾಗದವರು ಕಡಿಮೆ ಅವಧಿಯಲ್ಲಿ ಧರ್ಮಸ್ಥಳಕ್ಕೆ ತಲುಪಲು ಈ ರಸ್ತೆ ಪ್ರಯೋಜನಕಾರಿಯಾಗಿದೆ. ಶಾಂತಿಗೋಡು ಬಳಿ ಕುಮಾರಾಧಾರಾ ನದಿಗೆ ಸೇತುವೆ ನಿರ್ಮಿಸಿದ ಬಳಿಕ ಧರ್ಮಸ್ಥಳಕ್ಕೆ ಸುತ್ತುಬಳಸಿ ಹೋಗಬೇಕಾದ ಪ್ರಮೇಯ ತಪ್ಪಿದ್ದು ಮೈಸೂರು ಭಾಗದ ಪ್ರಯಾಣಿಕರು ಈ ರಸ್ತೆಯ ಮೂಲಕವೇ ಸಂಚರಿಸುತ್ತಾರೆ. ಕೆಎಸ್‌ಆರ್‌ಟಿಸಿ ಬಸ್‌ ಕೂಡ ಸಂಚರಿಸುತ್ತಿದೆ.

ಮಧ್ಯಮ ಪಥದ ರಸ್ತೆ ನಿರ್ಮಾಣದ ಸಂದರ್ಭದಲ್ಲಿ ಹೊಳೆ ಭಾಗಕ್ಕೆ ತಡೆಗೋಡೆ ನಿರ್ಮಿಸಲು ಗ್ರಾ.ಪಂ. ಮೂಲಕ ಲೋಕೋಪಯೋಗಿ ಇಲಾಖೆ ಗಮನಕ್ಕೆ ತರಲಾಗಿದೆ.ಅದಕ್ಕೆ ಸ್ಪಂದನೆ ನೀಡಿಲ್ಲ. ಅಪಾಯ ಉಂಟಾದರೆ ಅದಕ್ಕೆ ಇಲಾಖೆಯೇ ಹೊಣೆ ಹೊರಬೇಕು. -ಜಗನ್ನಾಥ ಪೂಜಾರಿ ಮುಕ್ಕೂರು, ಅಧ್ಯಕ್ಷರು, ಪೆರುವಾಜೆ ಗ್ರಾ.ಪಂ.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.