ಅನುದಾನವನ್ನು ಎಲ್ಲ ವಾರ್ಡ್‌ಗಳಿಗೆ ಸಮಾನವಾಗಿ ಹಂಚಿ: ಸಂಸದ ನಳಿನ್‌


Team Udayavani, Jun 8, 2019, 6:00 AM IST

g-22

ಪುತ್ತೂರು: ಕೇಂದ್ರ ಸರಕಾರದಿಂದ ಪುತ್ತೂರು ನಗರಸಭೆಗೆ ಮಂಜೂರಾಗಿರುವ 14ನೇ ಹಣಕಾಸು ಆಯೋಗದ ಅನುದಾನವನ್ನು ಎಲ್ಲ 31 ವಾರ್ಡ್‌ಗಳ ಸದಸ್ಯರೊಂದಿಗೆ ಚರ್ಚಿಸಿ ಆಯಾ ವಾರ್ಡ್‌ಗಳಿಗೆ ಸಂಬಂಧಿಸಿದ ಕಾಮಗಾರಿಗಳ ಕುರಿತಂತೆ ಅನುದಾನವನ್ನು ವಿಂಗಡಣೆ ಮಾಡಿ. ಯಾವುದೇ ತಾರತಮ್ಯವನ್ನು ಮಾಡಬೇಡಿ. ಈ ಕುರಿತು ದೂರು ಬಂದರೆ ನಗರಸಭಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತೇನೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಪುತ್ತೂರು ನಗರಭಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಪುತ್ತೂರು ನಗರಸಭಾ ಸಭಾಂಗಣದಲ್ಲಿ ನೆರೆ ಮುಂಜಾಗ್ರತ ಕಾಮ ಗಾರಿಗಳ ಕುರಿತು ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವ ದಲ್ಲಿ ನಡೆದ ಸಭೆಯಲ್ಲಿ ಸಂಸದರು ಮಾತನಾಡಿದರು.

ಮಳೆಗಾಲದ ಪರಿಸ್ಥಿತಿ ಯನ್ನು ಸಮರ್ಥವಾಗಿ ಎದುರಿಸಲು 24 ಗಂಟೆಗಳ ಕಾಲ ಕಾರ್ಯನಿರ್ವ ಹಿಸುವ ವ್ಯವಸ್ಥೆಯನ್ನು ಸಿದ್ಧ ಮಾಡಿಕೊಳ್ಳಬೇಕು. ಕಳೆದ ವರ್ಷ ಕೃತಕ ನರೆಯಿಂದ ಆದ ಹಾನಿ ಮತ್ತು ಗೊಂದಲಗಳನ್ನು ಗಮನದಲ್ಲಿಟ್ಟು ಕಾರ್ಯಾಚರಣೆಯನ್ನು ನಡೆಸಬೇಕು ಎಂದರು.

ಸಿಸಿ ಕೆಮರಾ ಅಳವಡಿಸಿ
ನಗರದಲ್ಲಿ ಕಡ್ಡಾಯ ವಾಗಿ ಸಿಸಿ ಕೆಮರಾಗಳನ್ನು ನಗರಸಭೆಯ ವತಿಯಿಂದ ಅಳವಡಿಸಬೇಕು. ಮಳೆ ಗಾಲದಲ್ಲಿ ಕಳ್ಳರ ಹಾವಳಿ ವಿಪರೀತ ಇರುತ್ತದೆ. ಅಲ್ಲದೇ, ರಸ್ತೆ ಬದಿ ತ್ಯಾಜ್ಯವನ್ನು ತಂದು ಹಾಕುವವರನ್ನು ಪತ್ತೆ ಹಚ್ಚಲೂ ಕಾಡಾ ಇದು ಸಹಕಾರಿ. ಈ ಕುರಿತು ವಿಳಂಬ ಮಾಡದೆ ಘಟನೋತ್ತರ ಮಂಜೂರಾತಿಯೊಂದಿಗೆ 15 ದಿನಗಳೊಳಗೆ ಸಿಸಿ ಕೆಮರಾಗಳನ್ನು ಅಳವಡಿಸುವ ಕೆಲಸ ನಡೆಯಬೇಕು. ಮುಂಗಾರುಪೂರ್ವ ಕಾಮಗಾರಿಗಳು ವಾರದೊಳಗೆ ಪೂರ್ತಿಯಾಗಬೇಕು. ನಗರಸಭೆಯಲ್ಲಿ ಸದಸ್ಯರ ಆಡಳಿತ ಇಲ್ಲದಿದ್ದರೂ ಶಾಸಕರು ನಗರಸಭೆಯ ಆಡಳಿತ ಕುರಿತಂತೆ ಹೆಚ್ಚಿನ ಗಮನವನ್ನು ಹರಿಸುತ್ತಿದ್ದಾರೆ ಎಂದರು.

ಅಧಿಕಾರಿಗಳಲ್ಲಿ ಮಾಹಿತಿಯೇ ಇಲ್ಲ!
ಮುಂಗಾರು ಪೂರ್ವ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ನಗರಸಭೆಯ ಕಿರಿಯ ಇಂಜಿನಿಯರ್‌ ಮತ್ತು ಆರೋಗ್ಯ ನಿರೀಕ್ಷಕರಲ್ಲಿ ಯಾವುದೇ ಮಾಹಿತಿ ಇರಲಿಲ್ಲ. ಇದರಿಂದ ಕೋಪ ಗೊಂಡ ಶಾಸಕ ಸಂಜೀವ ಮಠಂದೂರು ಅವರು, ಕಾಮಗಾರಿಯ ಕುರಿತು ಯಾಕೆ ಮಾಹಿತಿ ಇಲ್ಲ? ಅಪಾಯಕಾರಿ ಮರಗಳು, ವಿದ್ಯುತ್‌ ಕಂಬಗಳು, ಮಣ್ಣಿನ ರಾಶಿ, ಅಪಾಯಕಾರಿ ಗುಡ್ಡಗಳ ಕುರಿತು ಯಾವುದೇ ಮಾಹಿತಿ ನಿಮ್ಮ ಬಳಿ ಇಲ್ಲ. ಕಳೆದ ಬಾರಿ ಪ್ರಾಕೃತಿಕ ವಿಕೋಪದ ಕಾರಣದಿಂದ 2 ಜೀವಗಳು ಬಲಿಯಾಗಿವೆ. ನಗರಸಭೆಯಲ್ಲಿ ನೀವು ಏನು ಕೆಲಸ ಮಾಡುತ್ತೀರಿ? ಎಂದು ಪ್ರಶ್ನಿಸಿದರು.

ಅಂಗನವಾಡಿ ಕಟ್ಟಡಗಳ ದುರಸ್ತಿ ಸಹಿತ ತ್ವರಿತ ಕಾಮಗಾರಿ ಕೂಡಲೇ ಮಾಡಿ ಮುಗಿಸಬೇಕು. ಒಂದು ವಾರದಲ್ಲಿ ಇನ್ನೊಮ್ಮೆ ಈ ಕುರಿತು ಪ್ರಗತಿ ಪರಿಶೀಲನ ಸಭೆ ನಡೆಸು ತ್ತೇನೆ. ಆಗಲೂ ನೀವು ಎಚ್ಚರದಲ್ಲಿ ರದಿದ್ದರೆ ಸರಕಾರಕ್ಕೆ ವರದಿ ಸಲ್ಲಿಸುತ್ತೇನೆ ಎಂದು ಕಟ್ಟುನಿಟ್ಟಿನ ಸೂಚನೆಯನ್ನು ಶಾಸಕರು ಅಧಿಕಾರಿಗಳಿಗೆ ನೀಡಿದರು.

ರಾಜ ಕಾಲುವೆ ಕಾಮಗಾರಿ, ಚರಂಡಿ ಕಾಮಗಾರಿ, ಮೋರಿಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಗುತ್ತಿಗೆದಾರರಿಗೆ ಕಾಮಗಾರಿ ನಡೆಸಲು 3 ತಿಂಗಳ ಅವಧಿ ನೀಡಲಾಗಿದೆ ಎಂದು ಹೇಳಿ ನೀವು ಸುಮ್ಮನೆ ಕೂತರೆ ನಾನು ಸಹಿಸುವುದಿಲ್ಲ ಎಂದು ಶಾಸಕರು ಎಚ್ಚರಿಸಿದರು.ನಗರಸಭಾ ಸದಸ್ಯರಾದ ಪಿ.ಜಿ. ಜಗನ್ನಿವಾಸ್‌ ರಾವ್‌, ಪ್ರೇಮಲತಾ ನಂದಿಲ, ವಿದ್ಯಾಗೌರಿ, ಗೌರಿ ಬನ್ನೂರು, ಮೋಹಿನಿ ವಿಶ್ವನಾಥ ಗೌಡ, ಶಶಿಕಲಾ ಸಿ.ಎಚ್., ಪೂರ್ಣಿಮಾ, ಮಮತಾ ರಂಜನ್‌, ಶಿವರಾಮ ಸಪಲ್ಯ, ನವೀನ್‌, ರಾಬಿನ್‌ ತಾವ್ರೋ, ಫೌಝಿಯಾ, ಶಿವರಾಮ ಸಪಲ್ಯ, ಸುಂದರ ಪೂಜಾರಿ ಬಡಾವು, ಪದ್ಮನಾಭ ನಾಯಕ್‌, ಮನೋಹರ ಕಲ್ಲಾರೆ, ಶೀನಪ್ಪ ನಾಯ್ಕ, ದೀಕ್ಷಾ ಪೈ, ಬಾಲಚಂದ್ರ ಮರೀಲ್, ಪ್ರೇಮ್‌ ಕುಮಾರ್‌, ಭಾಮಿ ಅಶೋಕ್‌ ಶೆಣೈ ಉಪಸ್ಥಿತರಿದ್ದರು.

ಅಧಿಕಾರಿಗೆ ತರಾಟೆ
ಯಾವುದೇ ಮಾಹಿತಿ ಇಲ್ಲದೆ ಸಭೆಗೆ ಬಂದಿದ್ದ ಆರೋಗ್ಯ ನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡ ಶಾಸಕ ಸಂಜೀವ ಮಠಂದೂರು, ನೀವು ಕ್ರಿಯಾಶೀಲರಾಗಿಲ್ಲ. ನಿಮಗೆ ಯಾವುದೇ ಜವಾಬ್ದಾರಿ ಇಲ್ಲವೇ? ಎಂದು ಪ್ರಶ್ನಿಸಿದರು.

ಅಧಿಕಾರಿಗಳ ವಿರುದ್ಧ ಸರಕಾರಕ್ಕೆ ವರದಿ: ಎಚ್ಚರಿಕೆ
ಅಂಗನವಾಡಿ ಕಟ್ಟಡಗಳ ದುರಸ್ತಿ ಸಹಿತ ತ್ವರಿತ ಕಾಮಗಾರಿ ಕೂಡಲೇ ಮಾಡಿ ಮುಗಿಸಬೇಕು. ಒಂದು ವಾರದಲ್ಲಿ ಇನ್ನೊಮ್ಮೆ ಈ ಕುರಿತು ಪ್ರಗತಿ ಪರಿಶೀಲನ ಸಭೆ ನಡೆಸು ತ್ತೇನೆ. ಆಗಲೂ ನೀವು ಎಚ್ಚರದಲ್ಲಿ ರದಿದ್ದರೆ ಸರಕಾರಕ್ಕೆ ವರದಿ ಸಲ್ಲಿಸುತ್ತೇನೆ ಎಂದು ಕಟ್ಟುನಿಟ್ಟಿನ ಸೂಚನೆಯನ್ನು ಶಾಸಕರು ಅಧಿಕಾರಿಗಳಿಗೆ ನೀಡಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.