ಅತಿಥಿ ಉಪನ್ಯಾಸಕರಿಗೊಲಿಯದ “ಅತಿಥಿದೇವೋಭವ’

ಆನ್‌ಲೈನ್‌ ತರಗತಿ ನೀಡಿಯೂ ವ್ಯರ್ಥ ಶೈಕ್ಷಣಿಕ ವರ್ಷ ವಿಳಂಬ

Team Udayavani, Oct 15, 2020, 12:28 AM IST

ಅತಿಥಿ ಉಪನ್ಯಾಸಕರಿಗೊಲಿಯದ “ಅತಿಥಿದೇವೋಭವ’

ಬೆಳ್ತಂಗಡಿ: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸರಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಿದ್ದ ಖಾಯಂ ಉಪನ್ಯಾಸಕರು ತಮ್ಮ ಒಂದು ದಿನದ ವೇತನ ನೀಡಲು ಮುಂದಾಗಿ ಮೂರು ತಿಂಗಳು ಕಳೆದರೂ ಫಲಪ್ರದವಾಗಿಲ್ಲ. ಇತ್ತ ಶೈಕ್ಷಣಿಕ ವರ್ಷವೂ ಆರಂಭಗೊಳ್ಳದೆ 3,000ಕ್ಕೂ ಅಧಿಕ ಉಪನ್ಯಾಸಕರು ಬೀದಿಗೆ ಬೀಳುವಂತಾಗಿದೆ.

ಶೈಕ್ಷಣಿಕ ಚಟುವಟಿಕೆ ಆರಂಭವಾ ದಲ್ಲಿಂದ 10 ತಿಂಗಳು ತನಕ ಮಾತ್ರ ಅತಿಥಿ ಉಪನ್ಯಾಸಕರಿಗೆ ಸರಕಾರದಿಂದ ಮಾಸಿಕ 9,000 ರೂ. ವೇತನ ಸಿಗುತ್ತಿದ್ದು. ಮಾರ್ಚ್‌ ಬಳಿಕ ಕೊರೊನಾದಿಂದಾಗಿ ಶೈಕ್ಷಣಿಕ ಚಟುವಟಿಕೆ ಸ್ಥಗಿತಗೊಂಡಿವೆ. ಶ್ರಮಿಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್‌ ನೀಡಿ ಆತ್ಮಸ್ಥೈರ್ಯ ತುಂಬಿದ ಸರಕಾರವು ಅತಿಥಿ ಉಪನ್ಯಾಸಕರನ್ನು ಮರೆತುಬಿಟ್ಟಿದೆ.

6 ತಿಂಗಳಿನಿಂದ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರ ನೆರವಿಗೆ ಮುಂದಾದ ಖಾಯಂ ಉಪನ್ಯಾಸಕರು ಜುಲೈಯಲ್ಲಿ “ಅತಿಥಿ ದೇವೋ ಭವ’ ಧ್ಯೇಯವಾಕ್ಯದೊಂದಿಗೆ ತಮ್ಮ ಒಂದು ದಿನದ ವೇತನ ನೀಡುವುದಾಗಿ ಘೋಷಿಸಿದ್ದರು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಅತಿಥಿ ಉಪನ್ಯಾಸಕನಿಗೆ ಇದರ ಪ್ರಯೋಜನ ಸಿಕ್ಕಿಲ್ಲ. ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಇತ್ತೀಚೆಗೆ ಸರಕಾರದ ವಿರುದ್ಧ ಧರಣಿ ಕೂತ ಬಳಿಕ ಸರಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಮಾತ್ರ ಮಾರ್ಚ್‌ ನಿಂದ ವೇತನ ಬಿಡುಗಡೆಯಾಗಿತ್ತು.

ರಾಜ್ಯದಲ್ಲಿ 1,250 ಸರಕಾರಿ ಪ.ಪೂ. ಕಾಲೇಜು, 739 ಅನುದಾನಿತ ಪ.ಪೂ. ಕಾಲೇಜುಗಳಿವೆ. 17 ಸಾವಿರ ಖಾಯಂ ಉಪನ್ಯಾಸಕರಿದ್ದಾರೆ. ತಮ್ಮ ಒಂದು ದಿನದ ವೇತನವನ್ನು ಸ್ವ ಇಚ್ಛೆಯಿಂದ ಎಚ್‌ಆರ್‌ಎಂಎಸ್‌ ವ್ಯವಸ್ಥೆಯಲ್ಲೇ ಕಡಿತಗೊಳಿಸಿ ಪಿಯು ಇಲಾಖೆ ನಿರ್ದೇಶಕರ ಮೂಲಕ ಹಂಚಲು ನಿರ್ಧರಿಸಿದ್ದರು. ಒಟ್ಟು 3 ಕೋ.ರೂ. ಸಂಗ್ರಹ ನಿರೀಕ್ಷೆಯೂ ಇಡಲಾಗಿತ್ತು. ಆದರೆ ಪದವಿ ಅತಿಥಿ ಉಪನ್ಯಾಸಕರಿಗೆ ಮಾತ್ರ ಅತಿಥಿದೇವೋಭವ ಫಲಪ್ರದವಾಯಿತೇ ಹೊರತು ಪ.ಪೂ. ಉಪನ್ಯಾಸಕರಿಗಲ್ಲ.

ರಾಜ್ಯದ ಪದವಿಪೂರ್ವ ವಿಭಾಗದಲ್ಲಿ 3,000 ಹುದ್ದೆಗಳು ಖಾಲಿಯಿವೆ. 2015ರಲ್ಲಿ ಕರ್ನಾಟಕ ಶಿಕ್ಷಣ ಪ್ರಾಧಿಕಾರ ಸಿಇಟಿ ನೇಮಕಾತಿಗೆ ಆದೇಶ ಹೊರಡಿಸಿತ್ತು. 2015ರಲ್ಲಿ ತೇರ್ಗಡೆಯಾದ 1,163 ಮಂದಿಗೆ ಸ್ಥಳ ನಿಯುಕ್ತಿ ಆಗಿದೆ. ಉಳಿದ 1,837 ಹುದ್ದೆಗೆ ಅತಿಥಿ ಉಪನ್ಯಾಸಕರನ್ನೇ ನೇಮಿಸಬೇಕಾಗಿದೆ. ಪ್ರಸಕ್ತ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯೂ ನಡೆಯದೆ, ಖಾಯಂ ಉಪನ್ಯಾಸಕರ ಹುದ್ದೆಯೂ ಭರ್ತಿಯಾಗದೆ ಶೈಕ್ಷಣಿಕ ವರ್ಷ ಅತಂತ್ರವಾಗಲಿದೆ.

ಶೈಕ್ಷಣಿಕ ವರ್ಷ ಆರಂಭವಾಗದೆ ಯಾವುದೇ ಪ್ರಕ್ರಿಯೆ ಸಾಧ್ಯವಾಗುತ್ತಿಲ್ಲ. ವಿಷಯವಾರು ಉಪನ್ಯಾಸಕರ ಕೊರತೆಯ ಪಟ್ಟಿಯನ್ನು ಡಿಡಿಪಿಒಗಳಿಂದ ಸಂಗ್ರಹಿಸಲಾಗುತ್ತಿದೆ. ಶೈಕ್ಷಣಿಕ ವರ್ಷ ಆರಂಭಗೊಂಡರೆ ನೇಮಕಾತಿ ನಡೆಯಲಿದೆ.
– ಸೀತಾರಾಮ ರೆಡ್ಡಿ, ಜಂಟಿ ನಿರ್ದೇಶಕರು ಪ.ಪೂ. ಆಡಳಿತ, ಬೆಂಗಳೂರು

ಖಾಯಂ ಉಪನ್ಯಾಸಕರ ಒಂದು ದಿನದ ವೇತನವನ್ನು ಪಾರದರ್ಶಕ ಮತ್ತು ವೈಜ್ಞಾನಿಕವಾಗಿ ಎಚ್‌ಆರ್‌ಎಂಎಸ್‌ನಲ್ಲಿ ಕ್ರೋಡೀಕರಿಸಿ ಪ.ಪೂ. ಶಿಕ್ಷಣ ಇಲಾಖೆ ನಿರ್ದೇಶಕರ ಮೂಲಕ ವಿತರಿಸುವಂತೆ ಈಗಾಗಲೇ ಶಿಕ್ಷಣ ಸಚಿವರು ಮತ್ತು ನಿರ್ದೇಶಕರಲ್ಲಿ ಮನವಿ ಮಾಡಿಕೊಂಡಿದ್ದೇವೆ. ಸರಕಾರದ ಮಟ್ಟದಲ್ಲಿ ಪ್ರಕ್ರಿಯೆ ನಡೆಯಬೇಕಾಗಿದೆ..
– ನಿಂಗೇಗೌಡ ಎ.ಎಚ್‌., ಅಧ್ಯಕ್ಷರು, ಕರ್ನಾಟಕ ರಾಜ್ಯ ಪ.ಪೂ. ಕಾಲೇಜು ಉಪನ್ಯಾಸಕರ ಸಂಘ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.