ಬಿಸಿಯೂಟಕ್ಕೆ ‘ಗುಗ್ಗುರು’ ಕಾಟ!

ಸುಳ್ಯ ತಾ.ಪಂ. ಸಾಮಾನ್ಯ ಸಭೆಯಲ್ಲಿ ಕಾವೇರಿದ ಚರ್ಚೆ

Team Udayavani, Jun 26, 2019, 5:00 AM IST

21

ಸುಳ್ಯ: ಅಕ್ಷರ ದಾಸೋಹಕ್ಕೆ ಪೂರೈಸಿರುವ ಅಕ್ಕಿಯಲ್ಲಿ ಗುಗ್ಗುರು ತುಂಬಿದ್ದು, ವಿದ್ಯಾರ್ಥಿಗಳು ಹುಳಪೂರಿತ ಬಿಸಿಯೂಟ ಸೇವಿಸುವ ಸ್ಥಿತಿ ಉಂಟಾಗಿರುವ ಆರೋಪದ ಬಗ್ಗೆ ತಾ.ಪಂ. ಸಾಮಾನ್ಯ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು.

ತಾ.ಪಂ. ಸಾಮಾನ್ಯ ಸಭೆಯು ಅಧ್ಯಕ್ಷ ಚನಿಯ ಕಲ್ತಡ್ಕ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ತಾ.ಪಂ. ಸಭಾಂಗಣದಲ್ಲಿ ನಡೆಯಿತು. ವಿಷಯ ಪ್ರಸ್ತಾವಿಸಿದ ಸ್ಥಾಯೀ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಅಧ್ಯಕ್ಷ ಚನಿಯ ಕಲ್ತಡ್ಕ, ಅಬ್ದುಲ್ ಗಫೂರ್‌, ಪೂರೈಕೆ ಆದ ಅಕ್ಕಿ ಶೇಖರಣೆ ಲೋಪದ ಪರಿಣಾಮ ಇಂತಹ ಸಮಸ್ಯೆಉದ್ಭವಿಸಿದೆಯೋ ಅಥವಾ ಪೂರೈಕೆ ಆಗುವ ಅಕ್ಕಿಯಲ್ಲೇ ಗುಗ್ಗುರು ತುಂಬಿರುತ್ತದೆಯೋ ಎಂಬ ಬಗ್ಗೆ ಇಲಾಖೆ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದರು. ಶಿಕ್ಷಣ ಇಲಾಖೆ, ಅಕ್ಷರ ದಾಸೋಹ ಅಧಿಕಾರಿಗಳು ಉತ್ತರಿಸಿ, ಪ್ರತಿ ತಿಂಗಳು ಅಕ್ಕಿ ಪೂರೈಕೆ ಮಾಡುವ ವ್ಯವಸ್ಥೆ ಇದೆ. ಅದನ್ನು ಸುರಕ್ಷಿತ ಸ್ಥಳದಲ್ಲಿ ದಾಸ್ತಾನು ಇರಿಸಿ ಬಳಸಲು ಸೂಚಿಸಲಾಗುತ್ತದೆ. ಎರಡು ತಿಂಗಳ ರಜೆ ಅವಧಿಯಲ್ಲಿ ಅಕ್ಕಿಯಲ್ಲಿ ಒಂದಷ್ಟು ವ್ಯತ್ಯಾಸ ಕಂಡಿರಬಹುದು. ಈ ಬಗ್ಗೆ ಆಯಾ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದರು.

ಲೆಕ್ಕಾಚಾರ ಇಲ್ಲ

ಶಾಲೆಗಳಲ್ಲಿ ಉಳಿಕೆ ಅಕ್ಕಿಗಳ ಬಗ್ಗೆ ಲೆಕ್ಕಾಚಾರ ಇರುವುದಿಲ್ಲ ಎಂದು ಬೊಳ್ಳೂರು ಅಸಮಾಧಾನ ವ್ಯಕ್ತಪಡಿಸಿದರು. ಸರಕಾರಿ ವಸತಿ ನಿಲಯಗಳಲ್ಲಿ 6 ತಿಂಗಳಿಗೊಮ್ಮೆ ಅಕ್ಕಿ ಪೂರೈಸುತ್ತಿರುವ ಮಾಹಿತಿ ಇದ್ದು, ಅಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಾಡಾಯಿಸಿರಬಹುದು ಎಂದು ಸದಸ್ಯ ಅಬ್ದುಲ್ ಗಫೂರ್‌ ಗಮನ ಸೆಳೆದರು. ಅಡ್ಪಂಗಾಯ ಶಾಲೆಗೆ ಭೇಟಿ ನೀಡಿ ಪರಿಶೀಲಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.

ನಿರ್ವಹಣ ವೆಚ್ಚ ಹೆಚ್ಚಿಸಿ
ಸರಕಾರಿ ಶಾಲೆಗಳಿಗೆ ಪ್ರತಿ ತಿಂಗಳು ನೀಡುವ ನಿರ್ವಹಣ ವೆಚ್ಚ ಅತಿ ಕಡಿಮೆ ಆಗಿದೆ. ಅದನ್ನು ಹೆಚ್ಚಿಸುವಂತೆ ನಿರ್ಣಯ ಅಂಗೀಕರಿಸಿ ಜಿಲ್ಲಾಡಳಿತಕ್ಕೆ ಕಳುಹಿಸಲು ಅಬ್ದುಲ್ ಗಫೂರ್‌ ಸಲಹೆ ನೀಡಿದರು.

ವಂತಿಗೆ ಸಂಗ್ರಹಿಸಿ ಡೀಸೆಲ್ ಹಾಕಿ
ಬಿಎಸ್ಸೆನ್ನೆಲ್ ಅವ್ಯವಸ್ಥೆ ಬಗ್ಗೆ ಸದನದಲ್ಲಿ ಕಾವೇರಿದ ಚರ್ಚೆ ನಡೆಯಿತು. ಅಧ್ಯಕ್ಷ ಚನಿಯ ಕಲ್ತಡ್ಕ ವಿಷಯ ಪ್ರಸ್ತಾಪಿಸಿ, ಟವರ್‌ ಕಾರ್ಯ ನಿರ್ವಹಿಸುತ್ತಿಲ್ಲ. ವಿನಿಮಯ ಕೇಂದ್ರಗಳು ಮುಚ್ಚಿವೆ. ನೆಟ್ವರ್ಕ್‌ ಇಲ್ಲದೆ ಸರಕಾರಿ ಕೆಲಸಗಳು ಬಾಕಿ ಆಗಿವೆ. ಈ ಸಮಸ್ಯೆಗೆ ಪರಿಹಾರ ಇಲ್ಲವೇ ಎಂದರು. ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಅಶೋಕ್‌ ನೆಕ್ರಾಜೆ, ಹಲವು ವರ್ಷಗಳ ಇತಿಹಾಸ ಇರುವ ಬಿಎಸ್ಸೆನ್ನೆಲ್ ಈಗ ಡೀಸೆಲ್ ಹಾಕಲು ದುಡ್ಡಿಲ್ಲದೆ ಪರದಾಡುತ್ತಿದೆ.

· ಸರಕಾರಿ ಆಸ್ಪತ್ರೆಯ ಹೊರಗುತ್ತಿಗೆ ಆಧಾ ರಿತ ಡಿ ಗ್ರೂಪ್‌ ನೌಕರರ ವೇತನ ಪಾವತಿಗೆ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ನೌಕರರ ಸೇವಾವಧಿಯನ್ನು ಜುಲೈ ತನಕ ವಿಸ್ತರಿಸಿ ಸರಕಾರ ಸುತ್ತೋಲೆ ಕಳುಹಿಸಿದೆ: ತಾ| ಆರೋಗ್ಯಾಧಿಕಾರಿ ಡಾ| ಸುಬ್ರಹ್ಮಣ್ಯ.

· ಗ್ರಾ.ಪಂ.ನಲ್ಲಿ ಆಧಾರ್‌ ಕೇಂದ್ರ ಮತ್ತೆ ಆರಂಭಿಸಲು ಸದಸ್ಯರ ಆಗ್ರಹ. ಐದು ಕಡೆಗಳಲ್ಲಿ ಆಧಾರ್‌ ಕೇಂದ್ರ ಸ್ಥಾಪಿಸುವುದಾಗಿ ತಹಶೀಲ್ದಾರ್‌ ಭರವಸೆ.

· ಕೇರಳ – ಕರ್ನಾಟಕ ಗಡಿಗ್ರಾಮಗಳಲ್ಲಿ ಆನೆ ದಾಳಿ ನಿಯಂತ್ರಣಕ್ಕೆ ಮಂಡೆಕೋಲು ಮತ್ತು ದೇಲಂಪಾಡಿಯಲ್ಲಿ ಗ್ರಾಮಸ್ಥರ ಸಭೆ ನಡೆಸಲು ನಿರ್ಧರಿಸಿದ್ದು, ದಿನಾಂಕ ಶೀಘ್ರ ಪ್ರಕಟಿಸುವುದಾಗಿ ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್‌. ತಿಳಿಸಿದ್ದಾರೆ.

· ಪ್ರತಿ ಬಾರಿ ಸಾಮಾನ್ಯ ಸಭೆ ಮಧ್ಯಾಹ್ನದೊಳಗೆ ಮುಗಿಯುತ್ತಿತ್ತು. ಆದರೆ ಮಂಗಳವಾರ ನಡೆದ ಸಭೆ ಬೆಳಗ್ಗೆ 11ರಿಂದ ಆರಂಭಗೊಂಡು ಸಂಜೆ 6 ಗಂಟೆ ತನಕ ನಡೆಯಿತು.

ಟವರ್‌ಗೆ ಬಸಳೆ ಬಳ್ಳಿ ಹಾಯಿಸಿ ಪ್ರತಿಭಟಿಸಿದ್ದು, ನಿಗಮದ ದಯನೀಯ ಸ್ಥಿತಿ ಬಹಿರಂಗಗೊಂಡಿದೆ. ಗ್ರಾ.ಪಂ.ಗಳಲ್ಲಿ ನೆಟ್ವರ್ಕ್‌ ಕೈ ಕೊಟ್ಟು ಕಚೇರಿ ಕೆಲಸ ಆಗುತ್ತಿಲ್ಲ. ಬ್ಯಾಂಕ್‌ ಸಹಿತ ಬಿಎಸ್ಸೆನ್ನೆಲ್ ಸಂಪರ್ಕ ಇರುವ ಎಲ್ಲ ಕಡೆ ಜನರಿಗೆ ಸಾಕಷ್ಟು ತೊಂದರೆ ಆಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸ್ಥಿತಿಗೆ ಕಾರಣ. ಹೀಗಾಗಿ ನಿಮ್ಮ ವಿರುದ್ಧವೇ ಧರಣಿ ಕೂರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸ್ಥೆಯ ಅಧಿಕಾರಿ ಉತ್ತರ ನೀಡಿ, ಅನುದಾನ ಕೊರತೆಯಿಂದ ಡೀಸೆಲ್ ಹಾಕಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಒಂದು ಕಾಲದಲ್ಲಿ ಅಧಿಕಾರಿಗಳು ನಡೆದುಕೊಂಡ ರೀತಿಗೆ ಈಗ ತಕ್ಕ ಶಾಸ್ತಿಯಾಗಿದೆ. ದುಡ್ಡಿಲ್ಲದಿದ್ದರೆ ಜನರಿಂದ ವಂತಿಗೆ ಸಂಗ್ರಹಿಸಿ ಡೀಸೆಲ್ ಹಾಕಿ ಎಂದು ರಾಧಾಕೃಷ್ಣ ಬೊಳ್ಳೂರು ಹರಿಹಾಯ್ದರು. ತಾಲೂಕಿನಲ್ಲಿ ಬಿಎಸ್ಸೆನ್ನೆಲ್ ಪರಿಸ್ಥಿತಿ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ತಾ.ಪಂ. ಅಧ್ಯಕ್ಷರು ಸೂಚನೆ ನೀಡಿದರು.

ಕ್ರಮಕ್ಕೆ ಆಗ್ರಹ
ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್‌. ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣ ಮತ್ತು ಭಿತ್ತಿಪತ್ರ, ಕರಪತ್ರ ಮುಖೇನ ಅವಹೇಳನಕಾರಿ ಸಂದೇಶ ರವಾನಿಸಿದವರ ವಿರುದ್ಧ ಪೊಲೀಸ್‌ ಠಾಣೆ ಮತ್ತು ಸೈಬರ್‌ ಕ್ರೈಂ ವಿಭಾಗಕ್ಕೆ ದೂರು ನೀಡಲಾಗಿತ್ತು. ಭಿತ್ತಿಪತ್ರ, ಕರಪತ್ರದ ಬಗ್ಗೆ ಬೆಳ್ಳಾರೆ ಠಾಣೆಗೆ ಲಿಖೀತ ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ. ಅಲ್ಲಿನ ಪೊಲೀಸರು ನೀಡಿದ ಉತ್ತರವು ಮನಸ್ಸಿಗೆ ನೋವು ತರುವಂತಿದೆ. ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವುದು ಹೇಗೆ ಎಂದು ಜಿ.ಪಂ. ಸದಸ್ಯ ಹರೀಶ್‌ ಕಂಜಿಪಿಲಿ, ಆಶಾ ತಿಮ್ಮಪ್ಪ, ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಪ್ರಶ್ನಿಸಿದರು. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

ತನಿಖಾ ಪ್ರಗತಿ ವರದಿಯನ್ನು ವಾರದೊಳಗೆ ತಾ.ಪಂ. ಅಧ್ಯಕ್ಷರಿಗೆ ಸಲ್ಲಿಸಲು ಮತ್ತು ಅಪಪ್ರಚಾರ ಹರಡಿದವರ ಮೇಲೆ ಸೂಕ್ತ ಕ್ರಮಕ್ಕೆ ಸಭೆ ಸೂಚಿಸಿತು. ಈ ವಿಚಾರವನ್ನು ಠಾಣಾಧಿಕಾರಿ ಗಮನಕ್ಕೆ ತರುವುದಾಗಿ ಸುಳ್ಯ ಎಸ್‌.ಐ. ಸಭೆಗೆ ತಿಳಿಸಿದರು. ವೇದಿಕೆಯಲ್ಲಿ ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್‌. ರೈ, ಸಹಾಯಕ ನಿರ್ದೇಶಕ ಭವಾನಿಶಂಕರ ಉಪಸ್ಥಿತರಿದ್ದರು.

ಪ್ರತೀ ಬಾರಿ ಸಾಮಾನ್ಯ ಸಭೆ ಮಧ್ಯಾಹ್ನದೊಳಗೆ ಮುಗಿಯುತ್ತಿತ್ತು. ಆದರೆ ಮಂಗಳವಾರ ಸಭೆ ಬೆಳಕ್ಕೆ 11 ಗಂಟೆಗೆ ಆರಂಭಗೊಂಡು ಸಂಜೆ 6ರ ತನಕ ಮುಂದುವರಿಯಿತು. ಪಾಲನಾ ವರದಿ ಚರ್ಚೆ ಪೂರ್ಣಗೊಳ್ಳುವಾಗಲೇ ಸಂಜೆ 5 ದಾಟಿತ್ತು. ಅನಂತರ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಪ್ರತಿ ದಿನ 5 ಗಂಟೆಗೆ ಕರ್ತವ್ಯ ಮುಗಿಸಿ ತೆರಳುವ ಇಲಾಖಾಧಿಕಾರಿಗಳು ಮಂಗಳವಾರ ಅವಧಿ ಮೀರಿ ಸಭಾಂಗಣದಿಂದ ಹೊರ ಹೋಗುವ ಪ್ರಯತ್ನ ಮಾಡಲಿಲ್ಲ!

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.