ಹಾರಾಡಿ ಸಂಪರ್ಕ ರಸ್ತೆಯಲ್ಲಿ ಸಂಚಾರವೇ ನರಕ ಸದೃಶ


Team Udayavani, Sep 10, 2021, 11:00 AM IST

ಹಾರಾಡಿ ಸಂಪರ್ಕ ರಸ್ತೆಯಲ್ಲಿ ಸಂಚಾರವೇ ನರಕ ಸದೃಶ

ಪುತ್ತೂರು: ಉಪ್ಪಿನಂಗಡಿ- ಪುತ್ತೂರು ರಾಜ್ಯ ಹೆದ್ದಾರಿಯಲ್ಲಿನ ಹಾರಾಡಿಯಿಂದ ಪುತ್ತೂರು ರೈಲು ನಿಲ್ದಾಣ ಸಂಪರ್ಕಿಸುವ ರಸ್ತೆಯಲ್ಲಿ ಪ್ರಯಾಣಿಸಿದರೆ ನರಕ ಸದೃಶ ಅನುಭವ ಉಂಟಾಗುವುದು ನಿಸ್ಸಂಶಯ

ಜಿಲ್ಲಾ ಕೇಂದ್ರದ ಕನಸಿನಲ್ಲಿರುವ ನಗರದ ಈ ರಸ್ತೆಯ ಶೋಚನಿಯ ಸ್ಥಿತಿಗೆ ಹಲವು ದಶಕಗಳೇ ಸಂದಿವೆ. ರೈಲ್ವೇ ಮತ್ತು ಸ್ಥಳೀಯಾಡಳಿತ ನಡುವಿನ ತಿಕ್ಕಾಟದಲ್ಲಿ ಇಲ್ಲಿ ಸಂಚರಿಸುವ ಪ್ರಯಾಣಿಕರ ಪಾಡಂತು ಹೇಳತೀರದು.

ಕೆಲವು ವರ್ಷಗಳ ಹಿಂದೆಯೇ ರೈಲ್ವೇ ಈ ಸಂಬಂಧ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದು, ಸರಕಾರ ಮತ್ತು ರೈಲ್ವೇ 50:50 ಅನುಪಾತದಲ್ಲಿ ಅನುದಾನದಲ್ಲಿ ಅಭಿವೃದ್ಧಿ ಪಡಿಸುವ ಪ್ರಸ್ತಾವನೆ ಮುಂದಿಟ್ಟಿತ್ತು. ಅದರೆ ಅದು ನನೆಗುದಿಗೆ ಬಿದ್ದಿದೆ.

ಪಟ್ಟು ಬಿಡುತ್ತಿಲ್ಲ :

ರೈಲ್ವೇ ಆಸ್ತಿಯಾಗಿರುವ ಹಾರಾಡಿ ರಸ್ತೆಯ ದುರಸ್ತಿಗೆ ನಗರಸಭೆ ಹಣ ನೀಡಲು ಸಾಧ್ಯವಿಲ್ಲ. ರಸ್ತೆಯನ್ನು ನಗರಸಭೆಗೆ ಹಸ್ತಾಂತರಿಸಿದರೆ ಶೇ.100 ಅನುದಾನ ಹಾಕಿ ದುರಸ್ತಿ ಮಾಡಲಿದೆ ಎನ್ನುವುದು ನಗರಸಭೆಯ ವಾದ. ರಸ್ತೆ ಪೂರ್ಣವಾಗಿ ಹಸ್ತಾಂತರ ಅಸಾಧ್ಯ. ದುರಸ್ತಿ ಕಾರ್ಯಕ್ಕಾಗಿ ತಾತ್ಕಾಲಿಕವಾಗಿ ಬಿಟ್ಟು ಕೊಡಬಹುದು. ಅದಕ್ಕೆ ಜಿಲ್ಲಾಧಿಕಾರಿಗಳು ಪತ್ರ ಬರೆಯಬೇಕಾಗುತ್ತದೆ. ನಿಗದಿತ ಮೊತ್ತದ ಬಗ್ಗೆ ಖಾತರಿ ನೀಡಬೇಕಾಗುತ್ತದೆ. ರೈಲ್ವೇ ಆಸ್ತಿಯನ್ನು ಶಾಶ್ವತವಾಗಿ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎನ್ನುವುದು ರೈಲ್ವೇ ವಾದ. ಈ ಇಬ್ಬರ ಜಗಳದಲ್ಲಿ ಸಂಪರ್ಕ ರಸ್ತೆ ಸಂಚಾರಕ್ಕೆ ಅಸಾಧ್ಯವಾಗಿರುವ ಸ್ಥಿತಿಗೆ ತಲುಪಿದೆ.

ನಡೆದಾಡಲು ಕಷ್ಟ :

ಈ ಸಂಪರ್ಕ ರಸ್ತೆಯಲ್ಲಿ ವಾಹನ ಮಾತ್ರವಲ್ಲ, ಪಾದಚಾರಿಗಳಿಗೆ ನಡೆದಾಡಲು ಸಾಧ್ಯವಿಲ್ಲದ ಸ್ಥಿತಿ ಉಂಟಾಗಿದೆ. ಮೀಟರ್‌ಗೊಂದರಂತೆ ಹೊಂಡ ಸೃಷ್ಟಿಯಾಗಿದ್ದು ಮಳೆ ಬಂದರೆ ತೋಡಿನ ಸ್ಥಿತಿ ಉಂಟಾಗುತ್ತದೆ. ಇಷ್ಟಾದರೂ ಅನುದಾನ ಹಂಚಿಕೆ ವಿಚಾರದಲ್ಲಿ ರೈಲ್ವೇ ಮತ್ತು ಸ್ಥಳೀಯಾಡಳಿತ ಮಧ್ಯೆ ಜಟಾಪಟಿ ನಡೆಯುತ್ತಿದೆ. ಲಭ್ಯ ಮಾಹಿತಿ ಪ್ರಕಾರ 1990-95ರ ಅವಧಿಯಲ್ಲಿ ಆಗಿನ ಪುರಸಭೆಯೇ ಈ ರಸ್ತೆಯ ದುರಸ್ತಿ ಮಾಡಿತ್ತು. ಆಗಲೂ ರೈಲ್ವೇ ಕೇವಲ ದುರಸ್ತಿಗಾಗಿ ತಾತ್ಕಾಲಿಕ ನೆಲೆಯಲ್ಲಿ ಪುರಸಭೆಗೆ ಅನುಮತಿ ನೀಡಿತ್ತು. ಅನಂತರ ಅಭಿವೃದ್ಧಿ ಕಂಡೇ ಇಲ್ಲ.

ಹಾರಾಡಿ ಸಂಪರ್ಕ ರಸ್ತೆ ಅಭಿವೃದ್ಧಿಗಾಗಿ ನಗರಸಭೆಗೆ ನೀಡುವಂತೆ ರೈಲ್ವೇಗೆ ಮನವಿ ಮಾಡಿದ್ದರೂ ಅವರಿಂದ ಸ್ಪಂದನೆ ಸಿಕ್ಕಿಲ್ಲ. ರೈಲ್ವೇ ಅಧೀನದ ರಸ್ತೆ ಅಭಿವೃದ್ಧಿ ಮಾಡಲು ನಗರಸಭೆಗೆ ಅಧಿಕಾರ ಇಲ್ಲ. ಹೀಗಾಗಿ ನಾವು ಈ ರಸ್ತೆಗೆ ಬದಲಿಯಾಗಿ ಹಾರಾಡಿ-ಚಿಕ್ಕಪುತ್ತೂರು ರಸ್ತೆ ಅಭಿವೃದ್ಧಿಗೆ ಮುಂದಡಿ ಇಟ್ಟಿದ್ದೇವೆ. ಈಗಾಗಲೇ ದಾನಿಗಳ ಸಹಕಾರ ಪಡೆದು ಮಣ್ಣು ಹಾಕುವ ಕಾರ್ಯ ಆಗಿದೆ. ಒಂದು ಕಡೆ ಭೂ ಸ್ವಾಧೀನ ಬಾಕಿ ಇದೆ. ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಶಾಸಕರ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗವುದು. -ಜೀವಂಧರ್‌ ಜೈನ್‌, ಅಧ್ಯಕ್ಷ, ನಗರಸಭೆ ಪುತ್ತೂರು

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.