ಮೋದಿಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಸಾದ ಹಸ್ತಾಂತರಿಸಿದ ಹರೀಶ್ ಪೂಂಜ
Team Udayavani, May 4, 2023, 7:46 PM IST
ಮೂಲ್ಕಿ: ಮೂಲ್ಕಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡ ನವಕರ್ನಾಟಕ ಸಂಕಲ್ಪ ಸಮಾವೇಶದ ಸಂದರ್ಭ ಮೋದಿಯವರಿಗೆ ಬೆಳ್ತಂಗಡಿ ಶಾಸಕ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಅನುಗ್ರಹ ಪ್ರಸಾದವನ್ನು ನೀಡಿದರು.
ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರು ಕಳುಹಿಸಿಕೊಟ್ಟ ಶಾಲು, ಮಾಲೆ ಹಾಕಿ ಗೌರವಿಸಿದರು.
ಸಮಾವೇಶದಲ್ಲಿ ಮಾತನಾಡಿದ ಹರೀಶ್ ಪೂಂಜ ಅವರು, ಕಳೆದ ಐದು ವರ್ಷದ ಹಿಂದೆ ಬೆಳ್ತಂಗಡಿಯಲ್ಲಿ ಪಕ್ಷವು ನನ್ನಂತಹ ಯುವಕನಿಗೆ ಸ್ಪರ್ಧಿಸಲು ಅವಕಾಶ ಕೊಟ್ಟು ನನ್ನ ಮೇಲೆ ವಿಶ್ವಾಸ ಇರಿಸಿ, ಶಾಸಕನನ್ನಾಗಿ ಮಾಡಿ ಹರಸಿದರು, ಅಂದಿನ ವಿಶ್ವಾಸವನ್ನು ಐದು ವರ್ಷ ಕಾಲವೂ ಉಳಿಸಿ ರಾಜ್ಯದಲ್ಲೇ ಬೆಳ್ತಂಗಡಿಯನ್ನು ಗುರುತಿಸುವಂತಹ ಅಭಿವೃದ್ಧಿ ಕೆಲಸ ಮಾಡಿದ್ದೇನೆ, ಮುಂದಿನ ಐದು ವರ್ಷ ಬೆಳ್ತಂಗಡಿಯನ್ನು ದೇಶವೇ ಗುರುತಿಸುವ ರೀತಿಯಲ್ಲಿ ಕೆಲಸ ಮಾಡುವೆ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ