Bantwal City: ಸಂಚಾರದಲ್ಲಿ ಸಣ್ಣ ವ್ಯತ್ಯಾಸವಾದರೂ ಎಡೆಬಿಡದೆ ಕರ್ಕಶ ಹಾರ್ನ್

ಬಿ.ಸಿ.ರೋಡು ಸೇರಿದಂತೆ ಬಂಟ್ವಾಳ ನಗರ ವ್ಯಾಪ್ತಿಯಲ್ಲಿ ಹಾರ್ನ್ ನಿಂದ ಶಬ್ದಮಾಲಿನ್ಯ

Team Udayavani, May 19, 2023, 3:14 PM IST

Bantwal City: ಸಂಚಾರದಲ್ಲಿ ಸಣ್ಣ ವ್ಯತ್ಯಾಸವಾದರೂ ಎಡೆಬಿಡದೆ ಕರ್ಕಶ ಹಾರ್ನ್

ಬಂಟ್ವಾಳ: ಬಂಟ್ವಾಳ ನಗರ ವ್ಯಾಪ್ತಿಯ ಬಿ.ಸಿ.ರೋಡ್‌, ಬಂಟ್ವಾಳ ಪೇಟೆ, ಪಾಣೆಮಂಗಳೂರು ಭಾಗದಲ್ಲಿ ದಿನ ಕಳೆದಂತೆ ವಾಹನ ಸಂಚಾರ ಹೆಚ್ಚುತ್ತಿದ್ದು, ಇದರಿಂದ ಟ್ರಾಫಿಕ್‌ ಜಾಮ್‌ ಉಂಟಾಗುವ ಘಟನೆಗಳು ನಡೆಯುತ್ತಿದೆ. ವಾಹನಗಳ ಸಂಚಾರ ಕೊಂಚ ವ್ಯಾತ್ಯಾಸವಾದರೂ, ಚಾಲಕರು/ಸವಾರರು ಎಡಬಿಡದೆ ಕರ್ಕಶ ಹಾರ್ನ್ ಒತ್ತುವುದರಿಂದ ನಗರದೆಲ್ಲಡೆ ಶಬ್ದ ಮಾಲಿನ್ಯ ಉಂಟಾಗುತ್ತಿದೆ.

ಬಿ.ಸಿ.ರೋಡ್‌ನ‌ಲ್ಲಿ ಸಂಜೆಯಾಗುತ್ತಲೇ ವಾಹನಗಳ ಓಡಾಟ ಹೆಚ್ಚಳಗೊಂಡು ಅನಿವಾರ್ಯವಾಗಿ ವಾಹನಗಳು ನಿಧಾನಗತಿಯಲ್ಲಿ ಸಾಗಬೇಕಾಗುತ್ತದೆ. ಈ ವೇಳೆ ಮುಂದೆ ಸಾಗುವ ಧಾವಂತದಲ್ಲಿ ಚಾಲಕರು ಪದೇ ಪದೇ ಹಾರ್ನ್ ಹಾಕಿ ನಗರದ ಶಬ್ದಮಾಲಿನ್ಯಕ್ಕೆ ಕಾರಣರಾಗುತ್ತಿದ್ದಾರೆ. ಅದರಲ್ಲೂ ಬಸ್‌ಗಳ ಹಾರ್ನ್ ಕೊಂಚ ಭಿನ್ನವೇ ಆಗಿದ್ದು, ಸಮಯಕ್ಕೆ ಸರಿಯಾಗಿ ತಲುಪಬೇಕು ಎಂಬ ಒತ್ತಡದಿಂದ ಹಾರ್ನ್ನಿಂದ ಕೈತೆಗೆಯುವುದನ್ನೇ ಮರೆತು ಬಿಡುವಂತೆ ಹಾರ್ನ್ ಒತ್ತುತ್ತಿರುತ್ತಾರೆ.

ಬಿ.ಸಿ.ರೋಡ್‌ ನಗರದ ಮೂಲಕವೇ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವುದರಿಂದ ಟ್ಯಾಂಕರ್‌, ಘನ ಗಾತ್ರದ ಲಾರಿಗಳ ಸಂಚಾರ ಹೆಚ್ಚಿರುತ್ತದೆ. ಜತೆಗೆ ಬಸ್‌ ನಿಲ್ದಾಣದಿಂದ ಹೆದ್ದಾರಿಗೆ ಆಗಮಿಸುವ ವಾಹನಗಳು, ಕೈಕುಂಜೆ ರಸ್ತೆಯಲ್ಲಿ ಆಗಮಿಸಿದ ವಾಹನಗಳು ಹೆದ್ದಾರಿಗೆ ಸೇರುವ ಸ್ಥಳದಲ್ಲಿ ಸಹಜವಾಗಿಯೇ ವಾಹನಗಳ ವೇಗಕ್ಕೆ ನಿಯಂತ್ರಣ ಬೀಳುತ್ತದೆ. ಹೀಗೆ ವಾಹನಗಳು ಕೊಂಚ ನಿಧಾನವಾದರೂ ಅನಗತ್ಯ ಕಾರಣಕ್ಕೂ ಹಾರ್ನ್ ಹಾಕುವವರ ಸಂಖ್ಯೆ ಹೆಚ್ಚಿದೆ.

ಹೀಗಾಗಿ ಸ್ಥಳೀಯ ಅಂಗಡಿ ಮುಂಗಟ್ಟುಗಳ ಮಂದಿ, ಸಾರ್ವಜನಿಕರು ಹಾರ್ನ್ ಕರ್ಕಶದಿಂದ ತೊಂದರೆ ಅನುಭವಿಸುತ್ತಿದ್ದಾರೆ.

ಸಂಜೆಯಾಗುತ್ತಲೇ ವಾಹನಗಳ ಸಂಖ್ಯೆ ಏಕಾಏಕಿ ಹೆಚ್ಚಳಗೊಂಡರೆ ಇಡೀ ನಗರವೇ ಹಾರ್ನ್ ಶಬ್ದಗಳಿಂದ ತುಂಬಿ ಹೋಗುತ್ತದೆ. ಹೀಗಾಗಿ ಪೊಲೀಸ್‌ ಇಲಾಖೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂತಹ ಹಾರ್ನ್ಗಳ ವಿರುದ್ಧ ಒಂದು ಅಭಿಯಾನಕ್ಕೆ ಕೈಗೊಂಡರೆ ಶಬ್ದಮಾಲಿನ್ಯಕ್ಕೆ ಕೊಂಚ ಮಟ್ಟಿನ ಬ್ರೇಕ್‌ ಬೀಳುವ ಸಾಧ್ಯತೆ ಇದೆ.

ಬಸ್‌ಗಳ ಸ್ಪರ್ಧೆಗೂ
ಹಾರ್ನ್ ಬಳಕೆ
ಮಂಗಳೂರು ಭಾಗದಿಂದ ಆಗಮಿಸುವ ಬಸ್‌ಗಳು, ಮಂಗಳೂರು ಭಾಗಕ್ಕೆ ತೆರಳುವ ಖಾಸಗಿ ಬಸ್ಸುಗಳು ಯಾವತ್ತೂ ಸ್ಪರ್ಧೆಯಿಂದಲೇ ಸಾಗುತ್ತಿರುತ್ತವೆ. ತಾವು ಆಗಮಿಸುತ್ತಿದ್ದೇವೆ ಎಂದು ಮುಂದಿನ ಬಸ್ಸಿಗೆ ತಿಳಿಸುವ ದೃಷ್ಟಿಯಿಂದ ದೂರದಿಂದಲೇ ಕರ್ಕಶ ಹಾರ್ನ್ ಹಾಕಿಕೊಂಡು ಆಗಮಿಸುತ್ತಾರೆ. ಇದರಿಂದ ಇತರರಿಗೆ ತೊಂದರೆಯಾಗುತ್ತದೆ ಎಂಬ ಕನಿಷ್ಠ ತಿಳುವಳಿಕೆಯೂ ಅವರಲ್ಲಿ ಇಲ್ಲದೇ ಇರುವುದು ವಿಪರ್ಯಾಸವೇ ಸರಿ.

ಬಂಟ್ವಾಳ ಪೇಟೆಯಲ್ಲೂ ಸಮಸ್ಯೆ
ಬಿ.ಸಿ.ರೋಡ್‌ನ‌ ಜತೆಗೆ ಬಂಟ್ವಾಳ ಪೇಟೆ, ಪಾಣೆಮಂಗಳೂರು ಭಾಗದಲ್ಲೂ ಕೆಲವೊಂದು ಸಂದರ್ಭದಲ್ಲಿ ಹಾರ್ನ್ ಸಮಸ್ಯೆಯನ್ನು ಎದುರಿಸಲಾಗುತ್ತದೆ. ಅಂದರೆ ಪೇಟೆಯಲ್ಲಿ ಕಿರಿದಾದ ರಸ್ತೆಗಳಿದ್ದು, ಸಾಕಷ್ಟು ಮಂದಿ ರಸ್ತೆಯ ಅಂಚಿನಲ್ಲೇ ವಾಹನ ಇಟ್ಟು ತೆರಳುವ ಪ್ರಸಂಗಗಳು ನಡೆಯುತ್ತಿರುತ್ತದೆ. ಹೀಗಾಗಿ ಇತರ ವಾಹನಗಳು ಸರಾಗವಾಗಿ ಸಾಗುವ ಸಾಧ್ಯವಾಗದೇ ಹಾರ್ನ್ ಹಾಕುವ ಘಟನೆಗಳು ಕೂಡ ನಡೆಯುತ್ತಿದೆ.

ಅವಕಾಶ ಸಿಕ್ಕಿದಾಗ ಕ್ರಮ
ಕರ್ಕಶ ಹಾರ್ನ್ಗಳ ಜತೆಗೆ ಸೈಲೆನ್ಸರ್‌ಗಳ ಬಳಕೆಯ ಕುರಿತು ಕೂಡ ಸಾಕಷ್ಟು ಸಮಸ್ಯೆಗಳಿದ್ದು ಇವೆಲ್ಲ ನಗರದ ಮಧ್ಯೆಯೇ ನಡೆಯುವುದರಿಂದ ಅವುಗಳನ್ನು ಹಿಡಿಯುವುದಕ್ಕೆ ಸಮಸ್ಯೆಯಾಗುತ್ತಿದೆ. ಅದರ ವಿರುದ್ಧ ಕಾರ್ಯಾಚರಣೆಗೆ ಪ್ರಯತ್ನ ಮಾಡುತ್ತಿದ್ದು, ಅವಕಾಶ ಸಿಕ್ಕಿದರೆ ಖಂಡಿತವಾಗಿಯೂ ಕ್ರಮಕೈಗೊಳ್ಳುತ್ತೇವೆ..
-ಮೂರ್ತಿ, ಪಿಎಸ್‌ಐ, ಸಂಚಾರ ಪೊಲೀಸ್‌ ಠಾಣೆ, ಬಂಟ್ವಾಳ

 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.