ಅರಂತೋಡು: ಧಾರಕಾರ ಮಳೆಯಿಂದ ಬಾಳೆಕಜೆ ರಸ್ತೆ ಮೇಲೆ ಗುಡ್ಡ ಕುಸಿತ; ಸಂಚಾರ ಬಂದ್
Team Udayavani, Jul 6, 2022, 1:25 PM IST
ಅರಂತೋಡು: ಸುಳ್ಯ ತಾಲೂಕಿನಲ್ಲಿ ಸುರಿಯುತ್ತಿರುವ ಧಾರಕಾರ ಮಳೆ ಹಿನ್ನಲೆಯಲ್ಲಿ ತೊಡಿಕಾನ ಮಾವಿನಕಟ್ಟೆ ಮುತ್ತುಕೋಡಿ ಬಾಳೆಕಜೆ ರಸ್ತೆಗೆ ಗುಡ್ಡ ಕುಸಿದು ಬಿದ್ದು ರಸ್ತೆ ಬಂದ್ ಆಗಿದೆ.
ಇದರಿಂದ ಸ್ಥಳೀಯ ಜನರು ಸಮಸ್ಯೆಗೊಳಗಾಗಿದ್ದು ತೊಡಿಕಾನ ಗ್ರಾಮದೊಂದಿಗೆ ಸಂಪರ್ಕ ಕಳೆದುಕೊಂಡಿದ್ದಾರೆ. ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳು ಗಮನಹರಿಸಿ ರಸ್ತೆಗೆ ಬಿದ್ದ ಗುಡ್ಡವನ್ನು ತೆರವುಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ರಸ್ತೆ ತಡೆ ಉಂಟಾಗಿರುವ ಸಮಸ್ಯೆಯನ್ನು ಸ್ಥಳೀಯರು ಗ್ರಾಮ ಪಂಚಾಯತ್ ನ ಗಮನಕ್ಕೆ ತಂದಿದ್ದಾರೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೂಕ್ತ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಸ್ತೆ ಸಂಪೂರ್ಣ ಬಂದಾಗಿರುವ ಹಿನ್ನೆಲೆಯಲ್ಲಿ ಈಗ ಸ್ಥಳೀಯ ನಾಗರಿಕರು ರಸ್ತೆಯಲ್ಲಿ ಕಾಲುದಾರಿ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು