ಕುಕ್ಕೆಯಲ್ಲಿ ಗುಡುಗು ಸಹಿತ ಭಾರೀ ಗಾಳಿ-ಮಳೆ: ಹಾರಿ ಹೋದ ಮನೆಗಳ ಮೇಲ್ಛಾವಣಿ !


Team Udayavani, Apr 30, 2023, 7:00 AM IST

ಕುಕ್ಕೆಯಲ್ಲಿ ಗುಡುಗು ಸಹಿತ ಭಾರೀ ಗಾಳಿ-ಮಳೆ: ಹಾರಿ ಹೋದ ಮನೆಗಳ ಮೇಲ್ಛಾವಣಿ !

ಸುಬ್ರಹ್ಮಣ್ಯ: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಸಂಜೆ ವೇಳೆಗೆ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ಸಂದರ್ಭ ರಸ್ತೆಗೆ ಬೃಹತ್‌ ಮರ ಉರುಳಿದ, ಮನೆಯೊಂದರ ಮೇಲ್ಛಾವಣಿ ಹಾರಿಹೋದ ಘಟನೆಯೂ ಸಂಭವಿಸಿದೆ.

ಸುಬ್ರಹ್ಮಣ್ಯದಲ್ಲಿ ಸಂಜೆ ಸುಮಾರು ಒಂದು ತಾಸು ಕಾಲ ಮಳೆಯಾಗಿದೆ. ರಸ್ತೆಗಳ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ವಾಹನಗಳು ಓಡಾಡಲು ಪರದಾಡಬೇಕಾಯಿತು. ಕುಮಾರಧಾರಾ ಬಳಿ ಮುಖ್ಯರಸ್ತೆಗೆ ಅಡ್ಡ ಬೃಹತ್‌ ಮರವೊಂದು ಬಿದ್ದು ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ನೂಚಿಲ ಕುಶಾಲಪ್ಪ ಅವರ ಮನೆಯ ಮೇಲ್ಛಾವಣಿ ಗಾಳಿ ಹಾರಿ ಹೋಗಿ ಸುಮಾರು 50 ಸಾವಿರ ರೂ. ನಷ್ಟ, ನೂಚಿಲದ ಭವಾನಿ ಕೆ.ಎಸ್‌.ಅವರ ಮನೆಗೆ ತೆಂಗಿನ ಮರ ಬಿದ್ದು ಅಂದಾಜು 30 ಸಾವಿರ ರೂ. ನಷ್ಟವಾಗಿದೆ.ಸುಬ್ರಹ್ಮಣ್ಯದ ವಿದ್ಯಾನಗರ ಪ್ರದೇಶದಲ್ಲಿ ಸುಮಾರು 7-8 ಬಾಡಿಗೆ ಮನೆಗಳ ಮೇಲ್ಛಾವಣಿಯ ಸಿಮೆಂಟ್‌ ಶೀಟು, ಹಂಚುಗಳು ಗಾಳಿಗೆ ಹಾರಿಹೋಗಿವೆ. ಹಲವೆಡೆ ವಿದ್ಯುತ್‌ ತಂತಿ, ಕಂಬಗಳ ಮೇಲೆ ಮರದ ಕೊಂಬೆಗಳು ಬಿದ್ದು ಹಾನಿ ಸಂಭವಿಸಿದೆ.

ಕುಮಾರಪರ್ವತ ಭಾಗದಲ್ಲಿ ಹಾಗೂ ಸುತಮುತ್ತಲ ಪ್ರದೇಶಗಳಲ್ಲಿ ಕೂಡ ಭಾರೀ ಗಾಳಿಯೊಂದಿಗೆ ಮಳೆ ಸುರಿಯಿತು. ದರ್ಪಣ ತೀರ್ಥದಲ್ಲೂ ಭಾರೀ ಮಳೆ ನೀರು ಹರಿದಿದೆ. ಸುಬ್ರಹ್ಮಣ್ಯ ಸುತ್ತಮುತ್ತಲಿನ ಸಣ್ಣ ಪುಟ್ಟ ಹಳ್ಳ, ತೋಡುಗಳು ಸ್ವಲ್ಪ ಮಟ್ಟಿಗೆ ತುಂಬಿ ಹರಿದಿವೆ.

ಸುಳ್ಯ ತಾಲೂಕಿನಲ್ಲಿ ಉತ್ತಮ ಮಳೆ
ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನ ಹಲವೆಡೆ ಶನಿವಾರ ಸಂಜೆ ವೇಳೆ ಒಂದು ತಾಸು ಗುಡುಗು, ಗಾಳಿ ಸಹಿತ ಧಾರಾಕಾರ ಮಳೆಯಾಯಿತು. ಮಳೆ ನೀರು ರಸ್ತೆಯಲ್ಲೇ ಹರಿದಿದ್ದು, ಕೆಲವೆಡೆ ಕೆಸರು ನೀರು ಸಂಗ್ರಹಗೊಂಡು ವಾಹನಗಳ ಮೇಲೆ ಸಿಂಚನವಾಯಿತು.

ಸುಳ್ಯ ನಗರ, ಜಾಲೂÕರು, ಪೈಚಾರು, ಕನಕಮಜಲು, ಐವರ್ನಾಡು, ಬೆಳ್ಳಾರೆ, ನಿಂತಿಕಲ್ಲು, ಗುತ್ತಿಗಾರು, ಕಲ್ಮಡ್ಕ, ಅರಂತೋಡು, ಸಂಪಾಜೆ, ಕಲ್ಲುಗುಂಡಿ ಸೇರಿದಂತೆ ಅಲ್ಲಲ್ಲಿ ಮಳೆಯಾಯಿತು.

ಪಯಸ್ವಿನಿಯಲ್ಲಿ ಹರಿವು
ಪಯಸ್ವಿನಿಯಲ್ಲಿ ನೀರಿನ ಮಟ್ಟ ಇಳಿದ ಹಿನ್ನೆಲೆಯಲ್ಲಿ ನಗರಕ್ಕೆ ಕುಡಿಯುವ ನೀರು ಪೂರೈಸಲು ಪಯಸ್ವಿನಿಯ ಜಾಕ್‌ವೆಲ್‌ ಬಳಿ ನೀರನ್ನು ಮಣ್ಣು ಹಾಕಿ ಹಿಡಿದಿಡಲಾಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಿಂದಾಗಿ ಪಯಸ್ವಿನಿಯಲ್ಲಿ ನೀರಿನ ಮಟ್ಟ ಮತ್ತೆ ತುಸು ಏರಿಕೆಯಾಗಿರುವ ಕಾರಣ ಸಂಗ್ರಹದಿಂದ ನೀರನ್ನು ಹೊರಕ್ಕೆ ಬಿಡಲಾಗಿದೆ. ಉತ್ತಮ ಮಳೆಯಿಂದಾಗಿ 20 – 25 ದಿನಗಳ ವರೆಗೆ ನಗರಕ್ಕೆ ನೀರಿನ ಸಮಸ್ಯೆ ದೂರವಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.