ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ
Team Udayavani, Jun 30, 2022, 12:52 PM IST
ವಿಟ್ಲ: ನಿನ್ನೆ ತಡರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಲವು ಮನೆಗಳು ಜಲಾವೃತವಾಗಿದೆ.
ವಿಟ್ಲದ ಅಡ್ಡದ ಬೀದಿ, ಬೊಬ್ಬೆಕೇರಿಯ ವಿದ್ಯಾನಗರದಲ್ಲಿರುವ ಮನೆಗಳು ಜಲಾವೃತಗೊಂಡಿದೆ.
ವಿಟ್ಲದ ಬಾಕಿಮಾರ್ ಗದ್ದೆಯ ಪಕ್ಕದಲ್ಲಿರುವ ಸಾರ್ವಜನಿಕ ಚರಂಡಿಯಲ್ಲಿ ಮೆಸ್ಕಾಂ ಗುತ್ತಿಗೆದಾರರು ಕಾಮಗಾರಿ ನಡೆಸುವ ವೇಳೆ ಪೈಪ್ ಗಳನ್ನು ಚರಂಡಿ ಮೂಲಕ ಅಳವಡಿಸಿದ್ದರಿಂದ ಚರಂಡಿಯಲ್ಲಿ ನೀರು ಹರಿಯದೇ ಪಕ್ಕದ ಮನೆ ಮತ್ತು ಅಂಗಡಿಗಳ ಆವರಣಕ್ಕೆ ನುಗ್ಗಿದೆ. ಅದಲ್ಲದೇ ಅಡ್ಡದ ಬೀದಿ ಕೂಡಾ ಸಂಪೂರ್ಣವಾಗಿ ಜಲಾವೃತವಾಗಿದೆ.
ವಿಟ್ಲದ ಬೊಬ್ಬೆಕೇರಿ ವಿದ್ಯಾನಗರದಲ್ಲಿರುವ ಮೋನಪ್ಪ ಶೆಟ್ಟಿ, ದಿನೇಶ್ ಪೂಜಾರಿ, ನಾರಾಯಣ ಗೌಡ, ನಾರಾಯಣ ಪೂಜಾರಿಯವರ ಮನೆ ಹಾಗೂ ಇತರ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿ ತೊಂದರೆ ಅನುಭವಿಸಿದ್ದಾರೆ.
ಕೆಲವು ಖಾಸಗಿ ವ್ಯಕ್ತಿಗಳು ಚರಂಡಿ ಒತ್ತುವರಿ ಮಾಡಿದ್ದರಿಂದ ಮತ್ತು ಹೆದ್ದಾರಿಯ ಕಾಮಗಾರಿ ವೇಳೆ ಚರಂಡಿ ಮುಚ್ಚಿದ್ದರಿಂದ ನೀರು ಹರಿಯಲು ವ್ಯವಸ್ಥೆ ಇಲ್ಲದೇ ಪ್ರವಾಹ ಸೃಷ್ಟಿಯಾಗಿದೆ. ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೋಗುವ ಒಳದಾರಿ ಕೂಡಾ ಜಲಾವೃತಗೊಂಡು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ