ಧಾರಾಕಾರ ಮಳೆ; ಬಂಟ್ವಾಳದಲ್ಲಿ ಅಪಾಯದ ಮಟ್ಟ ತಲುಪದ ನೇತ್ರಾವತಿ
Team Udayavani, Jun 30, 2022, 1:08 PM IST
ಬಂಟ್ವಾಳ: ನೆರೆ ಬಾಧಿತ ಪಟ್ಟಣವಾಗಿ ಗುರುತಿಸಿಕೊಂಡಿರುವ ಬಂಟ್ವಾಳ ಸುತ್ತಮುತ್ತಲ ಪ್ರದೇಶದಲ್ಲಿ ಹರಿಯುವ ನೇತ್ರಾವತಿ ನದಿ ನೀರಿನ ಅಪಾಯಕಾರಿ ಮಟ್ಟ 8 ಮೀ. ಆಗಿದ್ದು, ಧಾರಾಕಾರವಾಗಿ ಮಳೆಯಾಗುತ್ತಿದ್ದರೂ ಸದ್ಯಕ್ಕೆ ನೇತ್ರಾವತಿಯು 5 ಮೀ. ನಲ್ಲಿ ಹರಿಯುತ್ತಿರುವ ಕಾರಣ ಯಾವುದೇ ಆತಂಕವಿಲ್ಲವಾಗಿದೆ.
ಆದರೆ ನೀರಿನ ಮಟ್ಟದಲ್ಲಿ ಏರಿಕೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಅತಿ ಅಗತ್ಯವಾಗಿದೆ. ವ್ಯಾಪಕ ಮಳೆಯ ಪರಿಣಾಮ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಲ್ಲಡ್ಕ, ಸೂರಿಕುಮೇರು ಪ್ರದೇಶದಲ್ಲಿ ಸಂಪೂರ್ಣ ನೀರಿನಿಂದ ತುಂಬಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.
ಮಳೆಯಿಂದಾಗಿ ಮಂಚಿ ಗ್ರಾಮದ ಪುರುಷೋತ್ತಮ ಅವರ ಮನೆಯ ಬಳಿಯ ಆವರಣ ಗೋಡೆ ತೋಟಕ್ಕೆ ಕುಸಿದು, ಕೃಷಿ ಹಾನಿ ಉಂಟಾಗಿದೆ. ಅದೇ ಗ್ರಾಮದ ನಿರ್ಬೈಲು ಮಸೀದಿಯ ತಡೆಗೋಡೆ ಹಮೀದ್ ಅವರ ತೋಟದ ಬಳಿಯ ತೋಡಿಗೆ ಬಿದ್ದು ತೋಟಕ್ಕೆ ನೀರು ನುಗ್ಗಿದೆ. ತಾಲೂಕಿನಾದ್ಯಂತ ಬೆಳಗ್ಗಿನಿಂದಲೇ ವ್ಯಾಪಕ ಮಳೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ